ಪಣಜಿ: ಗೋವಾ ಮತ್ತು ಮಹಾರಾಷ್ಟ್ರ ಈ ಎರಡೂ ರಾಜ್ಯಗಳು ಸಹೋದರರಿದ್ದಂತೆ. ಮಹದಾಯಿ ನೀರಿನ ಹೋರಾಟ ಮೂರು ರಾಜ್ಯಗಳ ಪ್ರಶ್ನೆಯಾಗಿದ್ದು, ಮಹಾರಾಷ್ಟ್ರ ಮತ್ತು ಗೋವಾ ಈ ಹೋರಾಟವನ್ನು ಒಟ್ಟಾಗಿ ಎದುರಿಸಲಿವೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ.
ಮಹಾರಾಷ್ಟ್ರದ ತಿಲಾರಿ ಅಣೆಕಟ್ಟು ಯೋಜನೆಗಾಗಿ ಅಂತಾರಾಜ್ಯ ನಿಯಂತ್ರಣ ಮಂಡಳಿಯ ಸಭೆಯ ನಂತರ ಮಾತನಾಡಿದರು. ಸಭೆಯಲ್ಲಿ ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್, ಗೋವಾ ಜಲಸಂಪನ್ಮೂಲ ಸಚಿವ ಸುಭಾಷ್ ಶಿರೋಡ್ಕರ್ ಮತ್ತು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಉಪಸ್ಥಿತರಿದ್ದರು.
ಸುಮಾರು ಒಂದು ದಶಕದ ಅವಧಿಯ ನಂತರ ಆಡಳಿತ ಮಂಡಳಿಯ ಮೊದಲ ಸಭೆ ಇದಾಗಿದೆ. ಗೋವಾ ಮತ್ತು ಮಹಾರಾಷ್ಟ್ರಗಳು ಸಹೋದರ ಸಂಬಂಧ ಹೊಂದಿವೆ ಎಂದು ಶಿಂಧೆ ಹೇಳಿದರು. ಮಹದಾಯಿ ನೀರಿಗಾಗಿ ಗೋವಾ ಮತ್ತು ಮಹಾರಾಷ್ಟ್ರ ಒಟ್ಟಾಗಿ ಕರ್ನಾಟಕದ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಶಿಂಧೆ ಹೇಳಿದ್ದಾರೆ. ಇದರಿಂದಾಗಿ ಮಹದಾಯಿ ಹೋರಾಟ ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದೇ ಹೇಳಲಾಗುತ್ತಿದೆ.
ತಿಲಾರಿ ಅಣೆಕಟ್ಟು ಮಹಾರಾಷ್ಟ್ರದಲ್ಲಿದೆ. ತಿಲಾರಿ ಕಾಲುವೆಯಿಂದ ಗೋವಾಕ್ಕೆ ನೀರು ಸರಬರಾಜು ಮಾಡಲಾಗುತ್ತಿತ್ತು. ಇದು ಪೆಡ್ನೆ, ಡಿಚೋಳಿ ಮತ್ತು ಬಾರದೇಶ್ ತಾಲೂಕಿನ ಕೆಲವು ಭಾಗಗಳಿಗೆ ಪೂರೈಕೆಯಾಗುತ್ತದೆ.
ಏತನ್ಮಧ್ಯೆ, ಕಳೆದ ಕೆಲವು ದಿನಗಳ ಹಿಂದೆ ಮಹದಾಯಿ ಯೋಜನೆಗೆ ಹೊಸ ಡಿಪಿಆರ್ ಗೆ ಅನುಮೋದನೆ ಪಡೆದ ನಂತರ ಕರ್ನಾಟಕವು ಆಕ್ರಮಣಕಾರಿಯಾಗಿ ಚಲಿಸಿದೆ ಎಂದು ಗೋವಾ ಸರ್ಕಾರ ಆರೋಪಿಸಿದೆ. ಗೋವಾ ರಾಜ್ಯವು ಕೇಂದ್ರದ ಮುಖಂಡರನ್ನು ಭೇಟಿ ಮಾಡಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರ ಮಹದಾಯಿ ಹರಿವು ಪ್ರಾಧಿಕಾರ ಸ್ಥಾಪಿಸಿದೆ. ಇದರ ಕಚೇರಿಯೂ ಪಣಜಿಯಲ್ಲೇ ಇರುತ್ತದೆ. ಮಹದಾಯಿಯು ಗೋವಾಕ್ಕೆ ಅಸ್ಮಿತೆಯ ಸಮಸ್ಯೆ ಮಾತ್ರವಲ್ಲ, ಗೋವಾದ ಒಟ್ಟಾರೆ ಪರಿಸರದ ಮೇಲೆ ಪರಿಣಾಮ ಬೀರುವ ಸಮಸ್ಯೆಯೂ ಆಗಿದೆ ಎಂದು ಇಲ್ಲಿನ ಪರಿಸರ ಹೋರಾಟಗಾರರ ನಿಲುವಾಗಿದೆ. ಹಾಗಾಗಿಯೇ ಮಹದಾಯಿ ಉಳಿಸುವ ಚಳವಳಿ ಗೋವಾದಲ್ಲಿಯೂ ಆರಂಭಗೊಂಡಿದೆ.
ನವೀನ್ ಡಿಸೋಜ ಜಿಲ್ಲೆಯಲ್ಲಿ ಸು.೧೭೪,೧೧೪ ಕುಟುಂಬಗಳು, ಗಣತಿ ಕಾರ್ಯಕ್ಕೆ ಗುರುತು, ೭,೩೭೯ ಕುಟುಂಬಗಳಿಂದ ಸ್ವಯಂ ಗಣತಿ ಮಡಿಕೇರಿ: ನಮ್ಮ ಗಣತಿ,…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆಯಲ್ಲಿ ೩೫ರಿಂದ ೪೦ ಡಿಗ್ರಿ ಉಷ್ಣಾಂಶ, ಬಿಸಿಗಾಳಿಗೆ ಹೈರಾಣಾದ ಜನರು ಗುಂಡ್ಲುಪೇಟೆ: ಬೇಸಿಗೆಯ ಬಿಸಿಲಿನ ತಾಪ ದಿನೇದಿನೇ…
ಮಧುಕರ ಮಳವಳ್ಳಿ (ಈ ಲೇಖನಕ್ಕೆ ಕೃತಕ ಬುದ್ಧಿಮತ್ತೆಯ ಚಿತ್ರ ಬಳಸಲಾಗಿದೆ) ಹಬ್ಬಕ್ಕೆ ಯಾರಿಗೆ ತಾನೆ ಹೊಸ ಬಟ್ಟೆ ಇಷ್ಟ ಇಲ್ಲ…
ಭಾರತಿ ಬಿ.ವಿ. ಅವನೆದುರು ಮಾನ ತೆಗೆದ ಸೈಕಲ್ಲಿನ ಸಹವಾಸ ನನಗೆ ಮತ್ತೆ ಬೇಕೆನ್ನಿಸಲಿಲ್ಲ ನಾವೆಲ್ಲ ‘ನಟರಾಜ ಸರ್ವೀಸ್’ನಲ್ಲೇ ಬದುಕು ಕಳೆದವರು.…
ಶುಭಾ ಖಟಾವಕರ ಮ್ಹೆತ್ರಸ್ ನೇಪಾಳದ ಕನಸುಗಣ್ಣಿನ ಯುವಜನಾಂಗದ ಈ ಹೊಸ ಸರ್ಕಾರ ಈಗ ಇಟ್ಟಿರುವ ಹೆಜ್ಜೆಗಳು ಯಶಸ್ವಿಯಾದರೆ ದಕ್ಷಿಣ ಏಷ್ಯಾದಲ್ಲಿ…
ಪಂಪ ಪ್ರಶಸ್ತಿ ಪಡೆಯುತ್ತಿರುವ ಮಹಾದೇವರಿಗೆ ಎಲ್ಲಾ ಮನೆಗಳ ಜೋತಮ್ಮದೀರು ಹರಸಲಿ ರಾಜೇಂದ್ರ ಚೆನ್ನಿ ೧ ತಮ್ಮ ಒಟ್ಟು ಬರಹಗಳು ಇಷ್ಟು ಕಡಿಮೆ…