BREAKING NEWS

ಮಹದಾಯಿ ಹೋರಾಟ; ಮಹಾರಾಷ್ಟ್ರ ಮತ್ತು ಗೋವಾ ಒಟ್ಟಾಗಿ ಎದುರಿಸುತ್ತದೆ : ಶಿಂಧೆ

ಪಣಜಿ:  ಗೋವಾ ಮತ್ತು ಮಹಾರಾಷ್ಟ್ರ ಈ ಎರಡೂ ರಾಜ್ಯಗಳು ಸಹೋದರರಿದ್ದಂತೆ. ಮಹದಾಯಿ ನೀರಿನ ಹೋರಾಟ ಮೂರು ರಾಜ್ಯಗಳ ಪ್ರಶ್ನೆಯಾಗಿದ್ದು, ಮಹಾರಾಷ್ಟ್ರ ಮತ್ತು ಗೋವಾ ಈ ಹೋರಾಟವನ್ನು ಒಟ್ಟಾಗಿ ಎದುರಿಸಲಿವೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ.

ಮಹಾರಾಷ್ಟ್ರದ ತಿಲಾರಿ ಅಣೆಕಟ್ಟು ಯೋಜನೆಗಾಗಿ ಅಂತಾರಾಜ್ಯ ನಿಯಂತ್ರಣ ಮಂಡಳಿಯ ಸಭೆಯ ನಂತರ ಮಾತನಾಡಿದರು. ಸಭೆಯಲ್ಲಿ ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್, ಗೋವಾ ಜಲಸಂಪನ್ಮೂಲ ಸಚಿವ ಸುಭಾಷ್ ಶಿರೋಡ್ಕರ್ ಮತ್ತು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಉಪಸ್ಥಿತರಿದ್ದರು.

ಸುಮಾರು ಒಂದು ದಶಕದ ಅವಧಿಯ ನಂತರ ಆಡಳಿತ ಮಂಡಳಿಯ ಮೊದಲ ಸಭೆ ಇದಾಗಿದೆ. ಗೋವಾ ಮತ್ತು ಮಹಾರಾಷ್ಟ್ರಗಳು ಸಹೋದರ ಸಂಬಂಧ ಹೊಂದಿವೆ ಎಂದು ಶಿಂಧೆ ಹೇಳಿದರು. ಮಹದಾಯಿ ನೀರಿಗಾಗಿ ಗೋವಾ ಮತ್ತು ಮಹಾರಾಷ್ಟ್ರ ಒಟ್ಟಾಗಿ ಕರ್ನಾಟಕದ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಶಿಂಧೆ ಹೇಳಿದ್ದಾರೆ. ಇದರಿಂದಾಗಿ ಮಹದಾಯಿ ಹೋರಾಟ ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದೇ ಹೇಳಲಾಗುತ್ತಿದೆ.

ತಿಲಾರಿ ಅಣೆಕಟ್ಟು ಮಹಾರಾಷ್ಟ್ರದಲ್ಲಿದೆ. ತಿಲಾರಿ ಕಾಲುವೆಯಿಂದ ಗೋವಾಕ್ಕೆ ನೀರು ಸರಬರಾಜು ಮಾಡಲಾಗುತ್ತಿತ್ತು. ಇದು ಪೆಡ್ನೆ, ಡಿಚೋಳಿ ಮತ್ತು ಬಾರದೇಶ್ ತಾಲೂಕಿನ ಕೆಲವು ಭಾಗಗಳಿಗೆ ಪೂರೈಕೆಯಾಗುತ್ತದೆ.

ಏತನ್ಮಧ್ಯೆ, ಕಳೆದ ಕೆಲವು ದಿನಗಳ ಹಿಂದೆ ಮಹದಾಯಿ ಯೋಜನೆಗೆ ಹೊಸ ಡಿಪಿಆರ್ ಗೆ ಅನುಮೋದನೆ ಪಡೆದ ನಂತರ ಕರ್ನಾಟಕವು ಆಕ್ರಮಣಕಾರಿಯಾಗಿ ಚಲಿಸಿದೆ ಎಂದು ಗೋವಾ ಸರ್ಕಾರ ಆರೋಪಿಸಿದೆ. ಗೋವಾ ರಾಜ್ಯವು ಕೇಂದ್ರದ ಮುಖಂಡರನ್ನು ಭೇಟಿ ಮಾಡಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರ ಮಹದಾಯಿ ಹರಿವು ಪ್ರಾಧಿಕಾರ ಸ್ಥಾಪಿಸಿದೆ. ಇದರ ಕಚೇರಿಯೂ ಪಣಜಿಯಲ್ಲೇ ಇರುತ್ತದೆ. ಮಹದಾಯಿಯು ಗೋವಾಕ್ಕೆ ಅಸ್ಮಿತೆಯ ಸಮಸ್ಯೆ ಮಾತ್ರವಲ್ಲ, ಗೋವಾದ ಒಟ್ಟಾರೆ ಪರಿಸರದ ಮೇಲೆ ಪರಿಣಾಮ ಬೀರುವ ಸಮಸ್ಯೆಯೂ ಆಗಿದೆ ಎಂದು ಇಲ್ಲಿನ ಪರಿಸರ ಹೋರಾಟಗಾರರ ನಿಲುವಾಗಿದೆ. ಹಾಗಾಗಿಯೇ ಮಹದಾಯಿ ಉಳಿಸುವ ಚಳವಳಿ ಗೋವಾದಲ್ಲಿಯೂ ಆರಂಭಗೊಂಡಿದೆ.

andolanait

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

22 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

22 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

22 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

22 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

22 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

22 hours ago