BREAKING NEWS

ಮಹದಾಯಿ ಹೋರಾಟ; ಮಹಾರಾಷ್ಟ್ರ ಮತ್ತು ಗೋವಾ ಒಟ್ಟಾಗಿ ಎದುರಿಸುತ್ತದೆ : ಶಿಂಧೆ

ಪಣಜಿ:  ಗೋವಾ ಮತ್ತು ಮಹಾರಾಷ್ಟ್ರ ಈ ಎರಡೂ ರಾಜ್ಯಗಳು ಸಹೋದರರಿದ್ದಂತೆ. ಮಹದಾಯಿ ನೀರಿನ ಹೋರಾಟ ಮೂರು ರಾಜ್ಯಗಳ ಪ್ರಶ್ನೆಯಾಗಿದ್ದು, ಮಹಾರಾಷ್ಟ್ರ ಮತ್ತು ಗೋವಾ ಈ ಹೋರಾಟವನ್ನು ಒಟ್ಟಾಗಿ ಎದುರಿಸಲಿವೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ.

ಮಹಾರಾಷ್ಟ್ರದ ತಿಲಾರಿ ಅಣೆಕಟ್ಟು ಯೋಜನೆಗಾಗಿ ಅಂತಾರಾಜ್ಯ ನಿಯಂತ್ರಣ ಮಂಡಳಿಯ ಸಭೆಯ ನಂತರ ಮಾತನಾಡಿದರು. ಸಭೆಯಲ್ಲಿ ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್, ಗೋವಾ ಜಲಸಂಪನ್ಮೂಲ ಸಚಿವ ಸುಭಾಷ್ ಶಿರೋಡ್ಕರ್ ಮತ್ತು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಉಪಸ್ಥಿತರಿದ್ದರು.

ಸುಮಾರು ಒಂದು ದಶಕದ ಅವಧಿಯ ನಂತರ ಆಡಳಿತ ಮಂಡಳಿಯ ಮೊದಲ ಸಭೆ ಇದಾಗಿದೆ. ಗೋವಾ ಮತ್ತು ಮಹಾರಾಷ್ಟ್ರಗಳು ಸಹೋದರ ಸಂಬಂಧ ಹೊಂದಿವೆ ಎಂದು ಶಿಂಧೆ ಹೇಳಿದರು. ಮಹದಾಯಿ ನೀರಿಗಾಗಿ ಗೋವಾ ಮತ್ತು ಮಹಾರಾಷ್ಟ್ರ ಒಟ್ಟಾಗಿ ಕರ್ನಾಟಕದ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಶಿಂಧೆ ಹೇಳಿದ್ದಾರೆ. ಇದರಿಂದಾಗಿ ಮಹದಾಯಿ ಹೋರಾಟ ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದೇ ಹೇಳಲಾಗುತ್ತಿದೆ.

ತಿಲಾರಿ ಅಣೆಕಟ್ಟು ಮಹಾರಾಷ್ಟ್ರದಲ್ಲಿದೆ. ತಿಲಾರಿ ಕಾಲುವೆಯಿಂದ ಗೋವಾಕ್ಕೆ ನೀರು ಸರಬರಾಜು ಮಾಡಲಾಗುತ್ತಿತ್ತು. ಇದು ಪೆಡ್ನೆ, ಡಿಚೋಳಿ ಮತ್ತು ಬಾರದೇಶ್ ತಾಲೂಕಿನ ಕೆಲವು ಭಾಗಗಳಿಗೆ ಪೂರೈಕೆಯಾಗುತ್ತದೆ.

ಏತನ್ಮಧ್ಯೆ, ಕಳೆದ ಕೆಲವು ದಿನಗಳ ಹಿಂದೆ ಮಹದಾಯಿ ಯೋಜನೆಗೆ ಹೊಸ ಡಿಪಿಆರ್ ಗೆ ಅನುಮೋದನೆ ಪಡೆದ ನಂತರ ಕರ್ನಾಟಕವು ಆಕ್ರಮಣಕಾರಿಯಾಗಿ ಚಲಿಸಿದೆ ಎಂದು ಗೋವಾ ಸರ್ಕಾರ ಆರೋಪಿಸಿದೆ. ಗೋವಾ ರಾಜ್ಯವು ಕೇಂದ್ರದ ಮುಖಂಡರನ್ನು ಭೇಟಿ ಮಾಡಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರ ಮಹದಾಯಿ ಹರಿವು ಪ್ರಾಧಿಕಾರ ಸ್ಥಾಪಿಸಿದೆ. ಇದರ ಕಚೇರಿಯೂ ಪಣಜಿಯಲ್ಲೇ ಇರುತ್ತದೆ. ಮಹದಾಯಿಯು ಗೋವಾಕ್ಕೆ ಅಸ್ಮಿತೆಯ ಸಮಸ್ಯೆ ಮಾತ್ರವಲ್ಲ, ಗೋವಾದ ಒಟ್ಟಾರೆ ಪರಿಸರದ ಮೇಲೆ ಪರಿಣಾಮ ಬೀರುವ ಸಮಸ್ಯೆಯೂ ಆಗಿದೆ ಎಂದು ಇಲ್ಲಿನ ಪರಿಸರ ಹೋರಾಟಗಾರರ ನಿಲುವಾಗಿದೆ. ಹಾಗಾಗಿಯೇ ಮಹದಾಯಿ ಉಳಿಸುವ ಚಳವಳಿ ಗೋವಾದಲ್ಲಿಯೂ ಆರಂಭಗೊಂಡಿದೆ.

andolanait

Recent Posts

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

3 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

3 hours ago

ಓದುಗರ ಪತ್ರ: ಶಾಲಾ ಶಿಕ್ಷಣದಲ್ಲಿ ಕೃಷಿ ಬಗ್ಗೆ ಪಠ್ಯ ಅಳವಡಿಸಿ

ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…

3 hours ago

ಸೌಹಾರ್ದ ಸಮಾಜಕ್ಕಾಗಿ ಮಕ್ಕಳಲ್ಲಿ ಭಾವೈಕ್ಯತೆ ಬಿತ್ತನೆ ಅತ್ಯಗತ್ಯ

ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ  ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…

3 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಸೋಲಿನಿಂದ ಸೊರಗಿದ ದೀದಿಯನ್ನು ಕೈಬಿಟ್ಟ ಆಪ್ತರು

ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…

3 hours ago

ಇತಿಹಾಸದ ಪುಟಗಳಲ್ಲಿ ಜಿರಳೆಗಳು

ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ.…

3 hours ago