BREAKING NEWS

ಮಹಾರಾಷ್ಟ್ರ: ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್​ರನ್ನು ಭೇಟಿಯಾದ ಅಜಿತ್ ಪವಾರ್

ಮುಂಬೈ: ಮಹತ್ವದ ಬೆಳವಣಿಗೆಯೊಂದರಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಭಾನುವಾರ ಮುಂಬೈನ ವೈಬಿ ಚವಾಣ್ ಸೆಂಟರ್‌ನಲ್ಲಿ ಎನ್‌ಸಿಪಿ ಅಧ್ಯಕ್ಷ ಶರದ್‌ ಪವಾರ್‌ ಅವರನ್ನು ಭೇಟಿಯಾದರು. ಪ್ರಫುಲ್ ಪಟೇಲ್, ಛಗನ್ ಭುಜಬಲ್ ಹಾಗೂ ಎನ್​ಸಿಪಿಯ ಕೆಲವು ಸಚಿವರು ಉಪಸ್ಥಿತರಿದ್ದರು.

ಜುಲೈ 2 ರಂದು ತನ್ನ ಪವಾರ್ ವಿರುದ್ಧ ಬಂಡಾಯವೆದಿದ್ದ ಅಜಿತ್ ಪವಾರ್, ಬೆಂಬಲಿಗ ಶಾಸಕರೊಂದಿಗೆ ಬಿಜೆಪಿ ಬೆಂಬಲಿತ ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರದ ಭಾಗವಾಗಿದ್ದರು. ಆ ನಂತರ ಇದೇ ಮೊದಲ ಬಾರಿ ಎನ್​ಸಿಪಿ ಅಧ್ಯಕ್ಷರನ್ನು ಭೇಟಿಯಾಗಿದ್ದಾರೆ.

ಮಹಾರಾಷ್ಟ್ರ ವಿಧಾನಸಭೆಯ ಮುಂಗಾರು ಅಧಿವೇಶನ ಪ್ರಾರಂಭವಾಗುವ ಒಂದು ದಿನ ಮೊದಲು ಈ ಸಭೆ ನಡೆದಿದೆ.

ಎಲ್ಲರೂ ಶರದ್ ಪವಾರ್ ಅವರ ಆಶೀರ್ವಾದ ಪಡೆಯಲು ಬಂದಿದ್ದಾರೆ ಎಂದು ಪ್ರಫುಲ್ ಪಟೇಲ್ ಪ್ರತಿಕ್ರಿಯಿಸಿದ್ದಾರೆ. ಭೇಟಿ ವೇಳೆ, ಅವರು (ಶರದ್ ಪವಾರ್) ಎನ್‌ಸಿಪಿಯಲ್ಲಿ ಒಗ್ಗಟ್ಟು ಕಾಯ್ದುಕೊಳ್ಳುವಂತೆ ನೋಡಿಕೊಳ್ಳಲು ಪವಾರ್ ಬಳಿ ಕೇಳಿಕೊಂಡರು. ಆದರೆ, ಇದಕ್ಕೆ ಶರದ್ ಪವಾರ್ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ ಎಂದು ಅವರು ಹೇಳಿದರು.

ಸಭೆಯಲ್ಲಿ ಎನ್‌ಸಿಪಿ ಸಚಿವರಾದ ಹಸನ್ ಮುಶ್ರಿಫ್, ಅದಿತಿ ತಟ್ಕರೆ ಮತ್ತು ದಿಲೀಪ್ ವಾಲ್ಸೆ ಪಾಟೀಲ್ ಕೂಡ ಭಾಗವಹಿಸಿದ್ದರು.

ಶರದ್ ಪವಾರ್ ಶಿಬಿರದ ಮೂಲಗಳ ಪ್ರಕಾರ, ಎನ್‌ಸಿಪಿ ರಾಜ್ಯಾಧ್ಯಕ್ಷ ಜಯಂತ್ ಪಾಟೀಲ್ ಮತ್ತು ಪಕ್ಷದ ನಾಯಕ ಜಿತೇಂದ್ರ ಅವ್ಹಾದ್ ಕೂಡ ಸಂಭಾಷಣೆಯ ಸಮಯದಲ್ಲಿ ಶರದ್ ಅವರೊಂದಿಗೆ ಇದ್ದರು.

ಶುಕ್ರವಾರ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರತಿಭಾ ಪವಾರ್ ಶಸ್ತ್ರಚಿಕಿತ್ಸೆಗೆ ಒಳಗಾದ ನಂತರ, ಅವರ ಆರೋಗ್ಯ ವಿಚಾರಿಸಲು ಎನ್‌ಸಿಪಿ ನಾಯಕರ ಅಧಿಕೃತ ಭವನ ಸಿಲ್ವರ್ ಓಕ್‌ಗೆ ಅಜಿತ್ ಪವಾರ್ ಧಾವಿಸಿದ್ದರು.

ವರದಿಗಳ ಪ್ರಕಾರ, ಅಜಿತ್ ಪವಾರ್ ಮತ್ತು ಅವರ ಚಿಕ್ಕಮ್ಮ ಪ್ರತಿಭಾ ಆತ್ಮೀಯರಾಗಿದ್ದಾರೆ ಎಂಬುದು ಎಲ್ಲರಿಗೂ ತಿಳಿದಿದೆ. ವಿಧಾನಸಭೆ ಚುನಾವಣೆಯ ನಂತರ ತರಾತುರಿಯಲ್ಲಿ ದೇವೇಂದ್ರ ಫಡ್ನವೀಸ್ ನೇತೃತ್ವದಲ್ಲಿ ರಚಿಸಿಸಲಾದ ಸಮ್ಮಿಶ್ರ ಸರ್ಕಾರವನ್ನು 2019 ರಲ್ಲಿ ಎನ್‌ಸಿಪಿ ತೆಕ್ಕೆಗೆ ಮರಳಿ ತರುವಲ್ಲಿ ಪ್ರತಿಭಾ ಅವರು ಪ್ರಮುಖ ಪಾತ್ರ ವಹಿಸಿದ್ದರು ಎಂದು ಹೇಳಲಾಗುಗತ್ತಿದೆ.

andolanait

Recent Posts

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…

27 mins ago

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

1 hour ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

3 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

5 hours ago

ಇಂದು ರಾತ್ರಿ ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8.30ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಕುರಿತ…

5 hours ago

ಹಾಸನ: ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ

ಹಾಸನ: ಬೇಲೂರು ತಾಲ್ಲೂಕಿನ ಕಾನಳ್ಳಿ ಅರಣ್ಯ ಪ್ರದೇಶದಲ್ಲಿದ್ದ ದೈತ್ಯಾಕಾರದ ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಮೂರನೇ…

6 hours ago