BREAKING NEWS

ಮಹಾರಾಷ್ಟ್ರ: ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್​ರನ್ನು ಭೇಟಿಯಾದ ಅಜಿತ್ ಪವಾರ್

ಮುಂಬೈ: ಮಹತ್ವದ ಬೆಳವಣಿಗೆಯೊಂದರಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಭಾನುವಾರ ಮುಂಬೈನ ವೈಬಿ ಚವಾಣ್ ಸೆಂಟರ್‌ನಲ್ಲಿ ಎನ್‌ಸಿಪಿ ಅಧ್ಯಕ್ಷ ಶರದ್‌ ಪವಾರ್‌ ಅವರನ್ನು ಭೇಟಿಯಾದರು. ಪ್ರಫುಲ್ ಪಟೇಲ್, ಛಗನ್ ಭುಜಬಲ್ ಹಾಗೂ ಎನ್​ಸಿಪಿಯ ಕೆಲವು ಸಚಿವರು ಉಪಸ್ಥಿತರಿದ್ದರು.

ಜುಲೈ 2 ರಂದು ತನ್ನ ಪವಾರ್ ವಿರುದ್ಧ ಬಂಡಾಯವೆದಿದ್ದ ಅಜಿತ್ ಪವಾರ್, ಬೆಂಬಲಿಗ ಶಾಸಕರೊಂದಿಗೆ ಬಿಜೆಪಿ ಬೆಂಬಲಿತ ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರದ ಭಾಗವಾಗಿದ್ದರು. ಆ ನಂತರ ಇದೇ ಮೊದಲ ಬಾರಿ ಎನ್​ಸಿಪಿ ಅಧ್ಯಕ್ಷರನ್ನು ಭೇಟಿಯಾಗಿದ್ದಾರೆ.

ಮಹಾರಾಷ್ಟ್ರ ವಿಧಾನಸಭೆಯ ಮುಂಗಾರು ಅಧಿವೇಶನ ಪ್ರಾರಂಭವಾಗುವ ಒಂದು ದಿನ ಮೊದಲು ಈ ಸಭೆ ನಡೆದಿದೆ.

ಎಲ್ಲರೂ ಶರದ್ ಪವಾರ್ ಅವರ ಆಶೀರ್ವಾದ ಪಡೆಯಲು ಬಂದಿದ್ದಾರೆ ಎಂದು ಪ್ರಫುಲ್ ಪಟೇಲ್ ಪ್ರತಿಕ್ರಿಯಿಸಿದ್ದಾರೆ. ಭೇಟಿ ವೇಳೆ, ಅವರು (ಶರದ್ ಪವಾರ್) ಎನ್‌ಸಿಪಿಯಲ್ಲಿ ಒಗ್ಗಟ್ಟು ಕಾಯ್ದುಕೊಳ್ಳುವಂತೆ ನೋಡಿಕೊಳ್ಳಲು ಪವಾರ್ ಬಳಿ ಕೇಳಿಕೊಂಡರು. ಆದರೆ, ಇದಕ್ಕೆ ಶರದ್ ಪವಾರ್ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ ಎಂದು ಅವರು ಹೇಳಿದರು.

ಸಭೆಯಲ್ಲಿ ಎನ್‌ಸಿಪಿ ಸಚಿವರಾದ ಹಸನ್ ಮುಶ್ರಿಫ್, ಅದಿತಿ ತಟ್ಕರೆ ಮತ್ತು ದಿಲೀಪ್ ವಾಲ್ಸೆ ಪಾಟೀಲ್ ಕೂಡ ಭಾಗವಹಿಸಿದ್ದರು.

ಶರದ್ ಪವಾರ್ ಶಿಬಿರದ ಮೂಲಗಳ ಪ್ರಕಾರ, ಎನ್‌ಸಿಪಿ ರಾಜ್ಯಾಧ್ಯಕ್ಷ ಜಯಂತ್ ಪಾಟೀಲ್ ಮತ್ತು ಪಕ್ಷದ ನಾಯಕ ಜಿತೇಂದ್ರ ಅವ್ಹಾದ್ ಕೂಡ ಸಂಭಾಷಣೆಯ ಸಮಯದಲ್ಲಿ ಶರದ್ ಅವರೊಂದಿಗೆ ಇದ್ದರು.

ಶುಕ್ರವಾರ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರತಿಭಾ ಪವಾರ್ ಶಸ್ತ್ರಚಿಕಿತ್ಸೆಗೆ ಒಳಗಾದ ನಂತರ, ಅವರ ಆರೋಗ್ಯ ವಿಚಾರಿಸಲು ಎನ್‌ಸಿಪಿ ನಾಯಕರ ಅಧಿಕೃತ ಭವನ ಸಿಲ್ವರ್ ಓಕ್‌ಗೆ ಅಜಿತ್ ಪವಾರ್ ಧಾವಿಸಿದ್ದರು.

ವರದಿಗಳ ಪ್ರಕಾರ, ಅಜಿತ್ ಪವಾರ್ ಮತ್ತು ಅವರ ಚಿಕ್ಕಮ್ಮ ಪ್ರತಿಭಾ ಆತ್ಮೀಯರಾಗಿದ್ದಾರೆ ಎಂಬುದು ಎಲ್ಲರಿಗೂ ತಿಳಿದಿದೆ. ವಿಧಾನಸಭೆ ಚುನಾವಣೆಯ ನಂತರ ತರಾತುರಿಯಲ್ಲಿ ದೇವೇಂದ್ರ ಫಡ್ನವೀಸ್ ನೇತೃತ್ವದಲ್ಲಿ ರಚಿಸಿಸಲಾದ ಸಮ್ಮಿಶ್ರ ಸರ್ಕಾರವನ್ನು 2019 ರಲ್ಲಿ ಎನ್‌ಸಿಪಿ ತೆಕ್ಕೆಗೆ ಮರಳಿ ತರುವಲ್ಲಿ ಪ್ರತಿಭಾ ಅವರು ಪ್ರಮುಖ ಪಾತ್ರ ವಹಿಸಿದ್ದರು ಎಂದು ಹೇಳಲಾಗುಗತ್ತಿದೆ.

andolanait

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

4 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

4 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

4 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

4 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

4 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

4 hours ago