ಮುಂಬೈ: ಹಿರಿಯ ಉದ್ಯಮಿ ರತನ್ ಟಾಟಾ ಅವರಿಗೆ ಮಹಾರಾಷ್ಟ್ರ ಸರ್ಕಾರ ಸ್ಥಾಪಿಸಿದ ಮೊದಲ ‘ಉದ್ಯೋಗ ರತ್ನ’ ಪ್ರಶಸ್ತಿಯನ್ನು ಶನಿವಾರ ಪ್ರದಾನ ಮಾಡಲಾಯಿತು.
ದಕ್ಷಿಣ ಮುಂಬೈನ ಕೊಲಾಬಾದಲ್ಲಿರುವ ರತನ್ ಟಾಟಾ ಅವರ ಮನೆಯಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪ ಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವಿಸ್, ಅಜಿತ್ ಪವಾರ್ ಅವರು 85 ವರ್ಷದ ಟಾಟಾ ಸನ್ಸ್ನ ಅಧ್ಯಕ್ಷರಿಗೆ ‘ಉದ್ಯೋಗ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಿದರು.
ಮಹಾರಾಷ್ಟ್ರ ಕೈಗಾರಿಕಾ ಅಭಿವೃದ್ಧಿ ನಿಗಮ(MIDC) ನೀಡುವ ಈ ಪ್ರಶಸ್ತಿಯು, ಶಾಲು ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ.
ಪ್ರಶಸ್ತಿ ಪ್ರದಾನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಿಂಧೆ, ಟಾಟಾ ಅವರಿಗೆ ‘ಉದ್ಯೋಗ ರತ್ನ’ ಪ್ರಶಸ್ತಿ ನೀಡಿ ಗೌರವಿಸಿರುವುದು ಪ್ರಶಸ್ತಿಯ ಘನತೆಯನ್ನು ಹೆಚ್ಚಿಸಿದೆ ಎಂದರು.
ಎಲ್ಲ ಕ್ಷೇತ್ರಗಳಲ್ಲಿ ಟಾಟಾ ಸಮೂಹದ ಕೊಡುಗೆ ಅಪಾರವಾಗಿದೆ. ಟಾಟಾ ಎಂದರೆ ನಂಬಿಕೆ ಎಂದು ಮಹಾ ಸಿಎಂ ಹೇಳಿದ್ದಾರೆ.
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ…