BREAKING NEWS

ಮಹಾತ್ಮ ಗಾಂಧಿ ಮೊಮ್ಮಗ ಅರುಣ್ ಗಾಂಧಿ ವಿಧಿವಶ

ಮುಂಬೈ : ರಾಷ್ಟ್ರಪಿತ ಮಹಾತ್ಮಾ ಗಾಂಧಿ ಮೊಮ್ಮಗ, ಲೇಖಕ ಅರುಣ್ ಗಾಂಧಿ (89 ) ಅನಾರೋಗ್ಯದಿಂದ ಇಂದು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ನಿಧನರಾಗಿದ್ದಾರೆ. ಮೃತದೇಹದ ಅಂತ್ಯಕ್ರಿಯೆ ಇಂದು ಕೊಲ್ಲಾಪುರದಲ್ಲಿ ನಡೆಯಲಿದೆ ಎಂದು ಪುತ್ರ ತುಷಾರ್ ಗಾಂಧಿ ತಿಳಿಸಿದ್ದಾರೆ.

ಲೇಖಕ ಮತ್ತು ಸಾಮಾಜಿಕ-ರಾಜಕೀಯ ಕಾರ್ಯಕರ್ತರಾದ ಅರುಣ್ ಗಾಂಧಿ ಏಪ್ರಿಲ್ 14, 1934 ರಂದು ಡರ್ಬನ್‌ನಲ್ಲಿ ಮಣಿಲಾಲ್ ಗಾಂಧಿ ಮತ್ತು ಸುಶೀಲಾ ಮಶ್ರುವಾಲಾ ದಂಪತಿಗೆ ಮಗನಾಗಿ ಜನಿಸಿದರು. ಸಾಮಾಜಿಕ ಕಾರ್ಯಕರ್ತನಾಗಿ ತಮ್ಮ ಅಜ್ಜ ಮಹಾತ್ಮಾ ಗಾಂಧಿ ಹಾದಿಯಲ್ಲಿ ಸಾಗಿದವರು.
ಅರುಣ್ ಗಾಂಧಿಯವರು ಹಲವು ಪುಸ್ತಕಗಳನ್ನು ಬರೆದಿದ್ದಾರೆ. ಅವುಗಳಲ್ಲಿ, ‘ದಿ ಗಿಫ್ಟ್ ಆಫ್ ಆಂಗರ್, ಅಂಡ್ ಅದರ್ ಲೆಸನ್ಸ್ ಫ್ರಂ ಮೈ ಗ್ರ್ಯಾಂಡ್ ಫಾದರ್ ಮಹಾತ್ಮ ಗಾಂಧಿ ಅವರ ಪ್ರಮುಖ ಪುಸ್ತಕಗಳಾಗಿವೆ.

ಮೃತರ ಅಂತ್ಯಕ್ರಿಯೆ ಸಂಜೆ 05:00 ರಿಂದ 06:30 ರವರೆಗೆ ಕೊಲ್ಲಾಪುರ ಜಿಲ್ಲೆಯ ಕರ್ವೀರ್, ನಂದವಾಲ್ ರಸ್ತೆಯಲ್ಲಿರುವ ಗಾಂಧಿ ಫೌಂಡೇಶನ್ ಆವರಣದಲ್ಲಿ ನಡೆಯಲಿದೆ ಎಂದು ತಿಳಿದು ಬಂದಿದೆ.
ತುಂಬಾ ದಿನಗಳಿಂದ ಅವರಿಗೆ ಅನಾರೋಗ್ಯ ಕಾಡುತ್ತಿತ್ತು ಎನ್ನಲಾಗಿದೆ, ಅವರು ಸಾಮಾಜಿಕ ಕಾರ್ಯಕರ್ತರಾಗಿದ್ದರು. ಅವರ ಅಂತ್ಯಕ್ರಿಯೆ ಕೊಲ್ಹಾಪುರದಲ್ಲಿ ನೆರವೇರಲಿದೆ ಎಂದು ಪುತ್ರ ತುಷಾರ್ ಗಾಂಧಿ ತಿಳಿಸಿದ್ದಾರೆ.
ಅರುಣ್ ಗಾಂಧಿ 1987ರಲ್ಲಿ ಕುಟುಂಬ ಸಮೇತ ಅಮೆರಿಕದಲ್ಲಿ ನೆಲೆಸಿದ್ದರು. ಇಲ್ಲಿ ಅವರು ಟೆನ್ನೆಸ್ಸೀಯ ಮೆಂಫಿಸ್‌ನಲ್ಲಿ ತಮ್ಮ ಜೀವನದ ಹಲವು ವರ್ಷಗಳನ್ನು ಕಳೆದರು. ಇಲ್ಲಿ ಅವರು ಕ್ರಿಶ್ಚಿಯನ್ ಬ್ರದರ್ಸ್ ವಿಶ್ವವಿದ್ಯಾಲಯದಲ್ಲಿ ಅಹಿಂಸೆಗೆ ಸಂಬಂಧಿಸಿದ ಸಂಸ್ಥೆಯನ್ನು ಸ್ಥಾಪಿಸಿದರು.

lokesh

Recent Posts

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ

ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…

2 hours ago

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

3 hours ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

3 hours ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

3 hours ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

3 hours ago

ಮೈಸೂರು ಸ್ವಚ್ಛವಾಗಿಡಲು ಜನರಿಗೆ ಕೆಲ ಅಭ್ಯಾಸ ಅಗತ್ಯ

ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…

3 hours ago