BREAKING NEWS

ಮಹಾತ್ಮ ಗಾಂಧಿ ಮೊಮ್ಮಗ ಅರುಣ್ ಗಾಂಧಿ ವಿಧಿವಶ

ಮುಂಬೈ : ರಾಷ್ಟ್ರಪಿತ ಮಹಾತ್ಮಾ ಗಾಂಧಿ ಮೊಮ್ಮಗ, ಲೇಖಕ ಅರುಣ್ ಗಾಂಧಿ (89 ) ಅನಾರೋಗ್ಯದಿಂದ ಇಂದು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ನಿಧನರಾಗಿದ್ದಾರೆ. ಮೃತದೇಹದ ಅಂತ್ಯಕ್ರಿಯೆ ಇಂದು ಕೊಲ್ಲಾಪುರದಲ್ಲಿ ನಡೆಯಲಿದೆ ಎಂದು ಪುತ್ರ ತುಷಾರ್ ಗಾಂಧಿ ತಿಳಿಸಿದ್ದಾರೆ.

ಲೇಖಕ ಮತ್ತು ಸಾಮಾಜಿಕ-ರಾಜಕೀಯ ಕಾರ್ಯಕರ್ತರಾದ ಅರುಣ್ ಗಾಂಧಿ ಏಪ್ರಿಲ್ 14, 1934 ರಂದು ಡರ್ಬನ್‌ನಲ್ಲಿ ಮಣಿಲಾಲ್ ಗಾಂಧಿ ಮತ್ತು ಸುಶೀಲಾ ಮಶ್ರುವಾಲಾ ದಂಪತಿಗೆ ಮಗನಾಗಿ ಜನಿಸಿದರು. ಸಾಮಾಜಿಕ ಕಾರ್ಯಕರ್ತನಾಗಿ ತಮ್ಮ ಅಜ್ಜ ಮಹಾತ್ಮಾ ಗಾಂಧಿ ಹಾದಿಯಲ್ಲಿ ಸಾಗಿದವರು.
ಅರುಣ್ ಗಾಂಧಿಯವರು ಹಲವು ಪುಸ್ತಕಗಳನ್ನು ಬರೆದಿದ್ದಾರೆ. ಅವುಗಳಲ್ಲಿ, ‘ದಿ ಗಿಫ್ಟ್ ಆಫ್ ಆಂಗರ್, ಅಂಡ್ ಅದರ್ ಲೆಸನ್ಸ್ ಫ್ರಂ ಮೈ ಗ್ರ್ಯಾಂಡ್ ಫಾದರ್ ಮಹಾತ್ಮ ಗಾಂಧಿ ಅವರ ಪ್ರಮುಖ ಪುಸ್ತಕಗಳಾಗಿವೆ.

ಮೃತರ ಅಂತ್ಯಕ್ರಿಯೆ ಸಂಜೆ 05:00 ರಿಂದ 06:30 ರವರೆಗೆ ಕೊಲ್ಲಾಪುರ ಜಿಲ್ಲೆಯ ಕರ್ವೀರ್, ನಂದವಾಲ್ ರಸ್ತೆಯಲ್ಲಿರುವ ಗಾಂಧಿ ಫೌಂಡೇಶನ್ ಆವರಣದಲ್ಲಿ ನಡೆಯಲಿದೆ ಎಂದು ತಿಳಿದು ಬಂದಿದೆ.
ತುಂಬಾ ದಿನಗಳಿಂದ ಅವರಿಗೆ ಅನಾರೋಗ್ಯ ಕಾಡುತ್ತಿತ್ತು ಎನ್ನಲಾಗಿದೆ, ಅವರು ಸಾಮಾಜಿಕ ಕಾರ್ಯಕರ್ತರಾಗಿದ್ದರು. ಅವರ ಅಂತ್ಯಕ್ರಿಯೆ ಕೊಲ್ಹಾಪುರದಲ್ಲಿ ನೆರವೇರಲಿದೆ ಎಂದು ಪುತ್ರ ತುಷಾರ್ ಗಾಂಧಿ ತಿಳಿಸಿದ್ದಾರೆ.
ಅರುಣ್ ಗಾಂಧಿ 1987ರಲ್ಲಿ ಕುಟುಂಬ ಸಮೇತ ಅಮೆರಿಕದಲ್ಲಿ ನೆಲೆಸಿದ್ದರು. ಇಲ್ಲಿ ಅವರು ಟೆನ್ನೆಸ್ಸೀಯ ಮೆಂಫಿಸ್‌ನಲ್ಲಿ ತಮ್ಮ ಜೀವನದ ಹಲವು ವರ್ಷಗಳನ್ನು ಕಳೆದರು. ಇಲ್ಲಿ ಅವರು ಕ್ರಿಶ್ಚಿಯನ್ ಬ್ರದರ್ಸ್ ವಿಶ್ವವಿದ್ಯಾಲಯದಲ್ಲಿ ಅಹಿಂಸೆಗೆ ಸಂಬಂಧಿಸಿದ ಸಂಸ್ಥೆಯನ್ನು ಸ್ಥಾಪಿಸಿದರು.

lokesh

Recent Posts

ಹನೂರು| ಆಟೋ ಹಾಗೂ ಕಾರಿನ ನಡುವೆ ಡಿಕ್ಕಿ: ಮೂವರಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ‌ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…

6 hours ago

ನೀಟ್‌ ಪರೀಕ್ಷೆಯ ರದ್ದು, ಕೇಂದ್ರ ಸರ್ಕಾರದ ಬಹು ದೊಡ್ಡ ಹಗರಣ: ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು: ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…

6 hours ago

ಪಾಕಿಸ್ತಾನದಲ್ಲಿ ಭೀಕರ ಬಾಂಬ್‌ ಸ್ಫೋಟ: 9 ಮಂದಿ ಸಾವು

ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್‌ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…

6 hours ago

ನಾಳೆಯಿಂದ ಎರಡು ದಿನ ಸಿದ್ದರಾಮಯ್ಯ ಮೈಸೂರು ಪ್ರವಾಸ

ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…

6 hours ago

ವನ್ಯಜೀವಿ ಸಂಚಾರವಿರುವ ಚಾರಣಪಥ, ಸಂಚಾರಪಥ ಸ್ಥಗಿತಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…

6 hours ago

ನಾಗಮಲೆ ಗ್ರಾಮದಲ್ಲಿ ಎರಡು ಮೇಕೆ ಹೊತ್ತೊಯ್ದ ಚಿರತೆ: ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…

6 hours ago