BREAKING NEWS

ಮಣಿಪುರದ ನಿರಾಶ್ರಿತರಿಗೆ ವ್ಯವಸ್ಥೆ ಕಲ್ಪಿಸಿ : ಸುಪ್ರೀಂಕೋರ್ಟ್ ನಿರ್ದೇಶನ

ಹೊಸದಿಲ್ಲಿ : ಮಣಿಪುರದಲ್ಲಿ ಕಳೆದ ಐದು ದಿನಗಳಿಂದ ನಡೆಯುತ್ತಿರುವ ಹಿಂಸಾಚಾರಕ್ಕೆ ಸುಪ್ರೀಂಕೋರ್ಟ್‌ ಕಳವಳ ವ್ಯಕ್ತಪಡಿಸಿದೆ. ತಕ್ಷಣವೇ ಸಂತ್ರಸ್ತರಿಗೆ ಸೂಕ್ತ ವಸತಿ, ಆಹಾರ, ಔಷಧ ಹಾಗೂ ಇತರೆ ಮೂಲಸೌಕರ್ಯ ಕಲ್ಪಿಸುವಂತೆ ಕೇಂದ್ರ ಹಾಗೂ ರಾಜ್ಯ ಸರಕಾರಗಳಿಗೆ ನಿರ್ದೇಶನ ನೀಡಿದೆ.

ಮಣಿಪುರ ಹಿಂಸಾಚಾರದ ಬಗ್ಗೆ ಎಸ್‌ಐಟಿ ತನಿಖೆಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಸಿಜೆಐ ಡಿವೈ ಚಂದ್ರಚೂಡ್‌, ನ್ಯಾ ಪಿ.ಎಸ್‌. ನರಸಿಂಹ, ನ್ಯಾ ಜೆ.ಬಿ.ಪರಿಧಿವಾಲ ಅವರಿದ್ದ ನ್ಯಾಯಪೀಠ, ತಕ್ಷಣವೇ ಪರಿಸ್ಥಿತಿ ನಿಯಂತ್ರಿಸಿ, ಜನ ಜೀವನ ಸಹಜ ಸ್ಥಿತಿಗೆ ಮರಳುವಂತೆ ಕ್ರಮ ತೆಗೆದುಕೊಳ್ಳಿ. ಹಿಂಸಾಚಾರ, ನಿಯಂತ್ರಣಕ್ಕೆ ಕೈಗೊಳ್ಳಲಾದ ಕ್ರಮ, ಸಂತ್ರಸ್ಥರ ರಕ್ಷಣಾ ಕಾರ್ಯಾಚರಣೆ, ನಿರಾಶ್ರಿತ ಜನರಿಗೆ ನೀಡಲಾದ ಮೂಲಸೌಕರ್ಯಗಳ ಬಗ್ಗೆ 10 ದಿನದಲ್ಲಿ ವರದಿ ನೀಡಿ, ಎಂದು ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿದೆ.

ಪರಿಸ್ಥಿತಿ ನಿಯಂತ್ರಣ : ಸರಕಾರದ ಪರವಾಗಿ ಕೋರ್ಟ್‌ಗೆ ಉತ್ತರ ನೀಡಿದ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ, ಹಿಂಸಾಚಾರ ಪೀಡಿತ ಪ್ರದೇಶದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಜನ ಜೀವನ ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿದೆ. ಕಳೆದ 48 ಗಂಟೆಯಲ್ಲಿ ಯಾವುದೇ ಅತಿರೇಕದ ಘಟನೆಗಳು ನಡೆದಿಲ್ಲ. ನಿರಾಶ್ರಿತರ ರಕ್ಷಣೆಗೆ ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆ. ಸುಮಾರು 23 ಸಾವಿರ ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ. ವಸತಿ, ಆಹಾರ, ಔಷಧಿ ಸೇರಿ ಅಗತ್ಯ ಸೌಲಭ್ಯ ನೀಡಲಾಗಿದೆ, ಎಂದು ಹೇಳಿದರು.

ಪರಿಶಿಷ್ಟ ಪಂಗಡ ಸ್ಥಾನಮಾನದ ವಿಚಾರವಾಗಿ ಮೈತಿ ಹಾಗೂ ಬುಡಕಟ್ಟು ಸಮುದಾಯದ ನಡುವಿನ ಸಂಘರ್ಷದಿಂದ ಹಿಂಸಾಚಾರ ಸಂಭವಿಸಿದೆ, ಎಂದು ತುಷಾರ್‌ ಮೆಹ್ತಾ ನ್ಯಾಯಪೀಠದ ಗಮನಕ್ಕೆ ತಂದರು.

ವಿದ್ಯಾರ್ಥಿಗಳ ರಕ್ಷಣೆ : ಹಿಂಸಾಚಾರ ಪೀಡಿತ ಮಣಿಪುರದಿಂದ ಹಲವು ರಾಜ್ಯಗಳ ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಲಾಗಿದೆ. ಬಂಗಾಳದ 18 ವಿದ್ಯಾರ್ಥಿಗಳನ್ನು ವಿಶೇಷ ವಿಮಾನದ ಮೂಲಕ ರಾಜ್ಯಕ್ಕೆ ಕರೆ ತರಲಾಗಿದೆ ಎಂದು ಸಿಎಂ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ. ದಿಲ್ಲಿ ಮೂಲದ 4 ವಿದ್ಯಾರ್ಥಿಗಳ ರಕ್ಷಣೆಗೆ ಸಿಎಂ ಅರವಿಂದ್‌ ಕೇಜ್ರಿವಾಲ್‌ ಮುಂದಾಗಿದ್ದಾರೆ. ಸಿಎಂ ಬಿರೇನ್‌ ಸಿಂಗ್‌ ಜತೆ ಮಾತುಕತೆ ನಡೆಸಿದ್ದು, ವಿದ್ಯಾರ್ಥಿಗಳ ಸುರಕ್ಷತೆಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು. ಆಂಧ್ರಪ್ರದೇಶದ 157 ವಿದ್ಯಾರ್ಥಿಗಳನ್ನು ಸರಕಾರ ರಕ್ಷಣೆ ಮಾಡಿದೆ. ಎರಡು ವಿಶೇಷ ವಿಮಾನದ ಮೂಲಕ ಮಣಿಪುರದಿಂದ ಮರಳಿ ರಾಜ್ಯಕ್ಕೆ ಕರೆ ತಂದಿದೆ. ಬಿಹಾರ, ಮಹಾರಾಷ್ಟ್ರ , ತೆಲಂಗಾಣ ಸರಕಾರಗಳು ಸಹ ಹಿಂಸಾಚಾರ ಪೀಡಿತ ಪ್ರದೇಶದಲ್ಲಿರುವ ತಮ್ಮ ರಾಜ್ಯದ ವಿದ್ಯಾರ್ಥಿಗಳ ರಕ್ಷಣೆಗೆ ವಿಶೇಷ ವ್ಯವಸ್ಥೆ ಮಾಡಿವೆ.

ರಾಜ್ಯದಲ್ಲಿ ಜನಾಂಗೀಯ ಹಿಂಸಾಚಾರದಿಂದ 60 ಮಂದಿ ಸಾವನ್ನಪ್ಪಿದ್ದಾರೆ. 231 ಜನ ಗಾಯಗೊಂಡಿದ್ದಾರೆ. 1700 ಮನೆಗಳು ಬೆಂಕಿಗೆ ಆಹುತಿಯಾಗಿವೆ. ರಾಜ್ಯದ ಜನತೆ ಶಾಂತಿ ಕಾಪಾಡಲು ಸಹಕರಿಸಬೇಕು. ಸಂಕಷ್ಟದಲ್ಲಿರುವವರಿಗೆ ಮೂಲಸ್ಥಾನಕ್ಕೆ ಮರಳಲು ಸರಕಾರ ಅಗತ್ಯ ಸಾರಿಗೆ ವ್ಯವಸ್ಥೆ ಕಲ್ಪಿಸಲಿದೆ ಎಂದು ಮಣಿಪುರ ಮುಖ್ಯಮಂತ್ರಿ ಬಿರೇನ್‌ ಸಿಂಗ್‌ ಹೇಳಿದ್ದಾರೆ.

lokesh

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

3 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

3 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

3 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

3 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

15 hours ago