ಬೆಂಗಳೂರು : ‘ಪ್ರಾದೇಶಿಕ ಭಾಷೆಗಳಿಗೆ ಸ್ಥಾನ ಕಲ್ಪಿಸುವ ರಾಷ್ಟ್ರೀಯ ಭಾಷಾ ನೀತಿ ಅಗತ್ಯವಿದೆ. ಈ ನೀತಿಯಲ್ಲಿ ಬ್ಯಾಂಕ್ಗಳನ್ನೂ ಒಳಗೊಂಡಂತೆ ಎಲ್ಲ ನೇಮಕಾತಿಯಲ್ಲಿ ಪ್ರಾದೇಶಿಕ ಭಾಷೆಗಳಿಗೆ ಅವಕಾಶ ಕಲ್ಪಿಸುವುದು ಕಡ್ಡಾಯವಾಗಬೇಕು’ ಎಂದು ಸಾಹಿತಿ ಬರಗೂರು ರಾಮಚಂದ್ರಪ್ಪ ಆಗ್ರಹಿಸಿದ್ದಾರೆ.
‘ಸಿಆರ್ಪಿಎಫ್ ಹುದ್ದೆಗಳ ನೇಮಕಾತಿಗೆ ನಡೆಸಲಿರುವ ಪರೀಕ್ಷೆಯಲ್ಲಿ ಕನ್ನಡಕ್ಕೆ ಅವಕಾಶ ಕೊಡದೆ, ಇಂಗ್ಲಿಷ್ ಮತ್ತು ಹಿಂದಿ ಭಾಷೆಗಳಲ್ಲಿ ಮಾತ್ರ ಪರೀಕ್ಷೆ ನಡೆಸುತ್ತಿರುವುದು ಖಂಡನೀಯ. ಇದು ಕನ್ನಡದ ಪ್ರಶ್ನೆ ಮಾತ್ರವಲ್ಲ, ದೇಶದ ಎಲ್ಲಾ ಪ್ರಾದೇಶಿಕ ಭಾಷೆಗಳ ಪ್ರಶ್ನೆಯಾಗಿದೆ. ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದ ಕೇಂದ್ರೀಕರಣ ನೀತಿಯ ಫಲ ಇದಾಗಿದೆ. ಒಕ್ಕೂಟ
ವ್ಯವಸ್ಥೆಯಲ್ಲಿ ಪ್ರತಿ ರಾಜ್ಯಕ್ಕೂ ತನ್ನದೇ ಆದ ಸ್ವಾಯತ್ತ ಅಸ್ತಿತ್ವ ಇರಬೇಕು. ಪ್ರಾದೇಶಿಕ ಭಾಷೆ ಮತ್ತು ಸಾಂಸ್ಕೃತಿಕ ವಿಶಿಷ್ಟತೆಗೆ ಮನ್ನಣೆ ಕೊಡಬೇಕು. ಆದರೆ, ಇತ್ತೀಚಿನ ವರ್ಷಗಳಲ್ಲಿ ರಾಜ್ಯಗಳ ಶೈಕ್ಷಣಿಕ, ಭಾಷಿಕ ಮತ್ತು ಆರ್ಥಿಕ ಸ್ವಾಯತ್ತತೆಗೆ ಧಕ್ಕೆ ತರುವ ನೀತಿಗಳನ್ನು ಜಾರಿ ಮಾಡಲಾಗುತ್ತಿದೆ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
‘ಜಿಎಸ್ಟಿ ಮತ್ತು ನೀಟ್ ಪದ್ಧತಿಗಳು ಕೇಂದ್ರೀಕೃತ ನೀತಿಯ ಫಲವಾಗಿದ್ದಾ, ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ. ಉದ್ಯೋಗಗಳಿಗೆ ನಡೆಸುವ ಪರೀಕ್ಷೆಗಳಲ್ಲಿ ಪ್ರಾದೇಶಿಕ ಭಾಷೆಗಳಿಗೆ ಸ್ಥಾನ ನೀಡದಿರುವುದು ಇದೇ ಕೇಂದ್ರೀಕೃತ ನೀತಿಯ ವಿಸ್ತರಣೆಯಾಗಿದೆ. ಆದ್ದರಿಂದ ನಾವೀಗ ಪ್ರಾದೇಶಿಕ ಭಾಷೆಗಳಿಗೆ ಸ್ಥಾನಮಾನ ಕಲ್ಪಿಸುವ ರಾಷ್ಟ್ರೀಯ ಭಾಷಾ ನೀತಿಗಾಗಿ ಒತ್ತಾಯಿಸಬೇಕು. ಶಿಕ್ಷಣ, ಉದ್ಯೋಗಾದಿ ಕ್ಷೇತ್ರಗಳಲ್ಲಿ ಪ್ರಾದೇಶಿಕ ಭಾಷೆಗಳಿಗೆ ಕಡ್ಡಾಯವಾಗಿ ಸ್ಥಾನ ಕಲ್ಪಿಸುವ ನೀತಿ ರೂಪುಗೊಂಡು, ಅನುಷ್ಠಾನವಾದರೆ ಪ್ರತಿ ಬಾರಿ ಹಕ್ಕೊತ್ತಾಯ ಮಂಡಿಸುವುದು ತಪ್ಪುತ್ತದೆ’ ಎಂದು ಹೇಳಿದ್ದಾರೆ.
‘ಕನ್ನಡವನ್ನೂ ಒಳಗೊಂಡಂತೆ ಪ್ರಾದೇಶಿಕ ಭಾಷೆಗಳಿಗೆ ಸೂಕ್ತ ಸ್ಥಾನ ಕಲ್ಪಿಸಿ, ಒಕ್ಕೂಟ ವ್ಯವಸ್ಥೆಗೆ ಬೆಲೆ ಕೊಡುವ ರಾಷ್ಟ್ರೀಯ ಭಾಷಾ ನೀತಿಗೆ ಹಕ್ಕೊತ್ತಾಯ ಮಂಡಿಸುವುದಾಗಿ ಇಲ್ಲಿನ ರಾಜಕೀಯ ಪಕ್ಷಗಳು ಚುನಾವಣೆ
ಪ್ರಣಾಳಿಕೆಯಲ್ಲಿ ಘೋಷಿಸಬೇಕು’ ಎಂದು ಒತ್ತಾಯಿಸಿದ್ದಾರೆ.
ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…
ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…
ಹನೂರು : ಮೂರ್ಛೆ ತಪ್ಪಿದ್ದ ವೃದ್ದೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಆಂಬುಲೆನ್ಸ್ ಸಿಗದೆ ಡೋಲಿ ಮುಖಾಂತರ ಕರೆದುಕೊಂಡು ಬಂದಿರುವ ಘಟನೆ…
2.5 ವರ್ಷದಲ್ಲಿ 592 ಭರವಸೆಗಳಲ್ಲಿ 243 ಭರವಸೆ ಈಡೇರಿಕೆ ಹಾವೇರಿ : ಏನು ಮಾತು ಕೊಟ್ಟಿದ್ದೆವೋ ಅದರಂತೆ ನಡೆದಿದ್ದೇವೆ. ಸಾವಿರ…
ಜಮ್ಮು : ನೆರೆಯ ಪಾಕಿಸ್ತಾನದಿಂದ ಡ್ರೋನ್ ಮೂಲಕ ಬಂದ ನಾಲ್ಕು ಕೆಜಿಗೂ ಹೆಚ್ಚು ಹೆರಾಯಿನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಅಂತಾರಾಷ್ಟ್ರೀಯ ಗಡಿಯಲ್ಲಿ…
ಮದ್ದೂರು : ಮದ್ದೂರು ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೇರಿಸುವ ಸಲುವಾಗಿ ನಗರಸಭೆಗೆ ಗ್ರಾ.ಪಂ.ಗಳ ಸೇರ್ಪಡೆ ಸಂಬಂಧ ಸರ್ಕಾರದ ಹಂತದಲ್ಲಿ ಮಾತನಾಡಿ ಕ್ರಮ…