ನವದೆಹಲಿ : ರಾಷ್ಟ್ರಪತಿಗಳು ಶನಿವಾರ ಆಯೋಜಿಸಿರುವ ಜಿ20 ಔತಣಕೂಟಕ್ಕೆ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಹ್ವಾನಿಸಲಾಗಿಲ್ಲ ಎಂದು ಅವರ ಕಚೇರಿ ತಿಳಿಸಿದೆ.
ಮಲ್ಲಿಕಾರ್ಜುನ ಖರ್ಗೆ ಅವರು ಕ್ಯಾಬಿನೆಟ್ ಮಂತ್ರಿ ದರ್ಜೆಯನ್ನು ಹೊಂದಿದ್ದಾರೆ ಮತ್ತು ದೇಶದ ಅತಿದೊಡ್ಡ ವಿರೋಧ ಪಕ್ಷದ ಅಧ್ಯಕ್ಷರಾಗಿದ್ದಾರೆ.
ಬೇರೆ ಯಾವುದೇ ರಾಜಕೀಯ ಪಕ್ಷದ ನಾಯಕರಿಗೂ ಆಹ್ವಾನ ನೀಡಿಲ್ಲ ಎಂದು ಮೂಲಗಳು ತಿಳಿಸಿವೆ.
ಎಲ್ಲಾ ಕ್ಯಾಬಿನೆಟ್ ಮತ್ತು ರಾಜ್ಯ ಸಚಿವರು ಮತ್ತು ಎಲ್ಲಾ ಮುಖ್ಯಮಂತ್ರಿಗಳನ್ನು ಔತಣಕೂಟಕ್ಕೆ ಆಹ್ವಾನಿಸಲಾಗಿದೆ. ಭಾರತ ಸರಕಾರದ ಎಲ್ಲಾ ಕಾರ್ಯದರ್ಶಿಗಳು ಹಾಗೂ ದೊಡ್ಡ ಕೈಗಾರಿಕೋದ್ಯಮಿಗಳು ಸೇರಿದಂತೆ ಇತರ ಗಣ್ಯ ಅತಿಥಿಗಳು ಕೂಡ ಅತಿಥಿ ಪಟ್ಟಿಯಲ್ಲಿದ್ದಾರೆ.
ಮಾಜಿ ಪ್ರಧಾನಿಗಳಾದ ಡಾ.ಮನಮೋಹನ್ ಸಿಂಗ್ ಹಾಗೂ ಎಚ್.ಡಿ.ದೇವೇಗೌಡರಿಗೂ ಆಹ್ವಾನ ನೀಡಲಾಗಿತ್ತು.
ಬಿಹಾರದ ನಿತೀಶ್ ಕುಮಾರ್, ಜಾರ್ಖಂಡ್ ನ ಹೇಮಂತ್ ಸೊರೆನ್, ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ, ತಮಿಳುನಾಡಿನ ಎಂ.ಕೆ. ಸ್ಟಾಲಿನ್, ದೆಹಲಿಯ ಅರವಿಂದ ಕೇಜ್ರಿವಾಲ್ ಮತ್ತು ಪಂಜಾಬ್ ನ ಭಗವಂತ್ ಮಾನ್ ಅವರು ಔತಣಕೂಟದಲ್ಲಿ ಪಾಲ್ಗೊಳ್ಳುವುದಾಗಿ ಖಚಿತಪಡಿಸಿದ ಮುಖ್ಯಮಂತ್ರಿಗಳಲ್ಲಿ ಸೇರಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…