ನವದೆಹಲಿ : ರಾಷ್ಟ್ರಪತಿಗಳು ಶನಿವಾರ ಆಯೋಜಿಸಿರುವ ಜಿ20 ಔತಣಕೂಟಕ್ಕೆ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಹ್ವಾನಿಸಲಾಗಿಲ್ಲ ಎಂದು ಅವರ ಕಚೇರಿ ತಿಳಿಸಿದೆ.
ಮಲ್ಲಿಕಾರ್ಜುನ ಖರ್ಗೆ ಅವರು ಕ್ಯಾಬಿನೆಟ್ ಮಂತ್ರಿ ದರ್ಜೆಯನ್ನು ಹೊಂದಿದ್ದಾರೆ ಮತ್ತು ದೇಶದ ಅತಿದೊಡ್ಡ ವಿರೋಧ ಪಕ್ಷದ ಅಧ್ಯಕ್ಷರಾಗಿದ್ದಾರೆ.
ಬೇರೆ ಯಾವುದೇ ರಾಜಕೀಯ ಪಕ್ಷದ ನಾಯಕರಿಗೂ ಆಹ್ವಾನ ನೀಡಿಲ್ಲ ಎಂದು ಮೂಲಗಳು ತಿಳಿಸಿವೆ.
ಎಲ್ಲಾ ಕ್ಯಾಬಿನೆಟ್ ಮತ್ತು ರಾಜ್ಯ ಸಚಿವರು ಮತ್ತು ಎಲ್ಲಾ ಮುಖ್ಯಮಂತ್ರಿಗಳನ್ನು ಔತಣಕೂಟಕ್ಕೆ ಆಹ್ವಾನಿಸಲಾಗಿದೆ. ಭಾರತ ಸರಕಾರದ ಎಲ್ಲಾ ಕಾರ್ಯದರ್ಶಿಗಳು ಹಾಗೂ ದೊಡ್ಡ ಕೈಗಾರಿಕೋದ್ಯಮಿಗಳು ಸೇರಿದಂತೆ ಇತರ ಗಣ್ಯ ಅತಿಥಿಗಳು ಕೂಡ ಅತಿಥಿ ಪಟ್ಟಿಯಲ್ಲಿದ್ದಾರೆ.
ಮಾಜಿ ಪ್ರಧಾನಿಗಳಾದ ಡಾ.ಮನಮೋಹನ್ ಸಿಂಗ್ ಹಾಗೂ ಎಚ್.ಡಿ.ದೇವೇಗೌಡರಿಗೂ ಆಹ್ವಾನ ನೀಡಲಾಗಿತ್ತು.
ಬಿಹಾರದ ನಿತೀಶ್ ಕುಮಾರ್, ಜಾರ್ಖಂಡ್ ನ ಹೇಮಂತ್ ಸೊರೆನ್, ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ, ತಮಿಳುನಾಡಿನ ಎಂ.ಕೆ. ಸ್ಟಾಲಿನ್, ದೆಹಲಿಯ ಅರವಿಂದ ಕೇಜ್ರಿವಾಲ್ ಮತ್ತು ಪಂಜಾಬ್ ನ ಭಗವಂತ್ ಮಾನ್ ಅವರು ಔತಣಕೂಟದಲ್ಲಿ ಪಾಲ್ಗೊಳ್ಳುವುದಾಗಿ ಖಚಿತಪಡಿಸಿದ ಮುಖ್ಯಮಂತ್ರಿಗಳಲ್ಲಿ ಸೇರಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…