BREAKING NEWS

ಅಖಂಡ ಕರ್ನಾಟಕ ಬಂದ್ ಗೆ ಮಂಡ್ಯ ಜಿಲ್ಲೆ ಸ್ತಬ್ಧ

ಮಂಡ್ಯ : ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಕನ್ನಡ ಸಂಘಟನೆಗಳ ಒಕ್ಕೂಟ ಕರೆ ನೀಡಿದ್ದ ಅಖಂಡ ಕರ್ನಾಟಕ ಬಂದ್ ಗೆ ಜಿಲ್ಲಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬೆಳ್ಳಂ ಬೆಳಿಗ್ಗೆ ಬೀದಿಗಿಳಿದ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ, ರೈತ ಸಂಘ, ಪ್ರಗತಿಪರ, ದಲಿತ, ಮುಸ್ಲಿಂ ಸಂಘಟನೆಗಳು ಹಾಗೂ ಕನ್ನಡ ಸಂಘಟನೆಗಳ ಕಾರ್ಯಕರ್ತರು ವಿಭಿನ್ನ ಪ್ರತಿಭಟನೆ ನಡೆಸಿ ಕೇಂದ್ರ – ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದರು.

ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಜತೆಗೂಡಿದ ಕಸ್ತೂರಿ ಕರ್ನಾಟಕ ಜನಪರ ವೇದಿಕೆ, ಕನ್ನಡ ಸೇನೆ ಕಾರ್ಯಕರ್ತರು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಭಾವಚಿತ್ರ ಹಿಡಿದು ಧಿಕ್ಕಾರದ ಘೋಷಣೆ ಕೂಗುತ್ತಾ ಕರ್ನಾಟಕದ ರೈತರ ಪಾಲಿಗೆ ಮರಣ ಶಾಸನ ಬರೆಯಲು ಮುಂದಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ ಭಾವಚಿತ್ರಕ್ಕೆ ಚಪ್ಪಲಿ ಸೇವೆ ಮಾಡಲು ಮುಂದಾದಾಗ,ತಕ್ಷಣ ಎಚ್ಚೆತ್ತ ಪೊಲೀಸರು ತಮಿಳುನಾಡು ಮುಖ್ಯಮಂತ್ರಿ ಭಾವಚಿತ್ರವನ್ನು ಪ್ರತಿಭಟನಾಕಾರರಿಂದ ಕಿತ್ತು ತೆಗೆದುಕೊಂಡು ಹೋದರು,

ರಾಜ್ಯದ ಸಂಸದರ ಭಾವಚಿತ್ರ ಹಿಡಿದು ಪ್ರತಿಭಟಿಸಿ ಕಾವೇರಿ ಹೋರಾಟಕ್ಕೆ ಬಾರದ ಬೇಜವಾಬ್ದಾರಿ ಸಂಸದರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಸಂಸದರಿಗೆ ಹಿಡಿ ಶಾಪ ಹಾಕಿದರು
ಉರುಳು ಸೇವೆ ಮಾಡಿ ಆಳುವ ಸರ್ಕಾರಗಳ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಮುಖ್ಯಮಂತ್ರಿ ಉಪಮುಖ್ಯಮಂತ್ರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಾ ತಮಿಳುನಾಡಿಗೆ ಹರಿಸುತ್ತಿರುವ ನೀರು ನಿಲ್ಲಿಸಿ ಎಂದು ಒತ್ತಡ ಹಾಕಿದರು.

ವಿವಿಧ ಸಂಘಟನೆಗಳ ಕಾರ್ಯಕರ್ತರು ಜತೆಗೂಡಿ ಮಾನವ ಸರಪಳಿ ರಚಿಸಿ ಕಾವೇರಿ ವಿಚಾರವಾಗಿ ನಿರ್ಲಕ್ಷ ತೋರಿರುವ ಕೇಂದ್ರ -ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಮುಖಂಡನೊಬ್ಬ ಅಂಗೈ ಕೊಯ್ದು ಕೊಂಡು ರಕ್ತ ಚಿಮ್ಮಿಸಿ ಕಾವೇರಿ ನಮ್ಮದು ರಕ್ತ ಕೊಟ್ಟರೂ ನೀರು ಬಿಡೆವು ಎಂದರು

ಕನ್ನಡ ಸೇನೆ ಕಾರ್ಯಕರ್ತರು ತಲೆ ಮೇಲೆ ಕಲ್ಲು ಹೊತ್ತು ಪ್ರತಿಭಟಿಸಿ ಕಾವೇರಿ ವಿಚಾರದಲ್ಲಿ ಕನ್ನಡಿಗರು ಮತ್ತು ರೈತರಿಗೆ ನ್ಯಾಯ ದೊರಕಿಸಿ ಕೊಡುವಂತೆ ಒತ್ತಾಯಿಸಿದರು.
ಎಸ್ ಡಿ ಪಿ ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಕರ್ನಾಟಕಕ್ಕೆ ನ್ಯಾಯ ದೊರಕಿಸಿಕೊಡಲು ಮುಂದಾಗದ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾ ರೈತ ಹಿತರಕ್ಷಣಾ ಸಮಿತಿ, ಕನ್ನಡಪರ ಸಂಘಟನೆಗಳು, ಎಸ್ ಡಿಪಿಐ,ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಬೈಕ್ ಜಾಥಾ ನಡೆಸಿ ಪ್ರಮುಖ ರಸ್ತೆಗಳಲ್ಲಿ ತೆರಳಿ ಬಂದ್ ಬೆಂಬಲಿಸುವಂತೆ ಮನವಿ ಮಾಡಿದರು.

lokesh

Recent Posts

ಗೂಡ್ಸ್ ಆಟೋ ಉರುಳಿ ಬಿದ್ದು ಮಹಿಳೆ ಸಾವು: ಹಲವರಿಗೆ ಗಾಯ

ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…

4 hours ago

ಹಾಸನ: ಆಟೋ ಪಲ್ಟಿಯಾಗಿ ತಾಯಿ-ಮಗ ಸಾವು

ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…

8 hours ago

ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ವಿಚಾರ: ಅರ್ಚಕ ಸುನೀಲ್ ದೀಕ್ಷಿತ್ ಪ್ರತಿಕ್ರಿಯೆ

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…

8 hours ago

ರೈತರ ಆದಾಯ ಹೆಚ್ಚಿಸುವುದೇ ನಮ್ಮ ಸರ್ಕಾರದ ಗುರಿ: ಎನ್.ಚಲುವರಾಯಸ್ವಾಮಿ.

ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…

9 hours ago

ಸಿಎಂ ಬದಲಾದರೆ ಪರಮೇಶ್ವರ್‌ ಸಿಎಂ ಆಗಲಿ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್‌ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…

10 hours ago

ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ವಿರೋಧಿಸಿ ಪ್ರತಿಭಟನೆ

ಮೈಸೂರು: ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…

11 hours ago