BREAKING NEWS

ಮಂಡ್ಯ: ಜೂನ್‌ 30 ರಿಂದ ಮೈಶುಗರ್ ಆರಂಭ: 14 ದಿನಗಳಿಗೊಮ್ಮೆ ರೈತರಿಗೆ ಹಣ ಪಾವತಿ

ಮಂಡ್ಯ: ಮೈಸೂರು ಸಕ್ಕರೆ ಕಾರ್ಖಾನೆಯಲ್ಲಿ(ಮೈಶುಗರ್‌) 2023-23ನೇ ಸಾಲಿನ ಕಬ್ಬು ಅರೆಯುವಿಕೆ ಕಾರ‍್ಯವನ್ನು ಜೂನ್ 30ರಿಂದ ಆರಂಭಿಸಲಾಗುವುದು. ಕಬ್ಬು ಪೂರೈಸಿದರೆ ರೈತರಿಗೆ ನಿಯಮದಂತೆ 14 ದಿನಗಳಿಗೊಮ್ಮೆ ಹಣ ಪಾವತಿಸಲಾಗುವುದು ಎಂದು ಮೈಶುಗರ್‌ ವ್ಯವಸ್ಥಾಪಕ ನಿರ್ದೇಶಕ ಅಪ್ಪಾ ಸಾಹೇಬ್‌ ಚನ್ನಪ್ಪಗೌಡ ಪಾಟೀಲ್‌ ತಿಳಿಸಿದರು.

‘ಕಬ್ಬು ಅರೆಯಲು ಕಾರ್ಖಾನೆಯಲ್ಲಿ ಎಲ್ಲ ರೀತಿಯಿಂದಲೂ ಸರ್ವಸನ್ನದ್ಧವಾಗಿದೆ. ಯಾವುದೇ ತಾಂತ್ರಿಕ ದೋಷಗಳಿಲ್ಲ. ಎಲ್ಲ ಯಂತ್ರೋಪಕರಣಗಳನ್ನು ದುರಸ್ತಿ, ಓವರ್‌ಆಯಿಲ್‌ ಮಾಡಲಾಗಿದೆ. ಕಬ್ಬು ಕಟಾವು ಕಾರ್ಮಿಕರ ವ್ಯವಸ್ಥೆಯನ್ನೂ ಮಾಡಿಕೊಳ್ಳಲಾಗಿದೆ. ಕಬ್ಬು ಸಾಗಾಣಿಕೆಗೆ, ಟ್ರ್ಯಾಕ್ಟರ್‌, ಲಾರಿಗಳನ್ನು ಗೊತ್ತುಪಡಿಸಲಾಗಿದೆ,’’ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

‘‘ಕಬ್ಬು ಕಟಾವು ಮಾಡುವವರು, ಸಾಗಣೆದಾರರಿಗೆ ವಾರಕ್ಕೊಮ್ಮೆ ಹಣ ಪಾವತಿಸಲಾಗುವುದು. ಕಳೆದ ವರ್ಷ 12 ತಾಸುಗಳ ಕಾಲ ಕಾರ್ಖಾನೆಯನ್ನು ನಿರಂತರ ಚಾಲನೆ ಮಾಡಿ 1800 ಟನ್‌ ಕಬ್ಬು ಅರೆದು ಪರಿಶೀಲನೆ ಮಾಡಲಾಗಿದೆ. ಹೀಗಾಗಿ ಈ ವರ್ಷ ಕಾರ್ಖಾನೆಯು ನಿತ್ಯ 5000 ಟನ್‌ ಕಬ್ಬು ಅರೆಯುವ ಸಾಮರ್ಥ್ಯವಿದ್ದರೂ ಪ್ರತಿದಿನ 3000 ರಿಂದ 3500 ಟನ್‌ ಕಬ್ಬು ಅರೆಯಲು ಗುರಿ ಹೊಂದಲಾಗಿದೆ,’’ ಎಂದರು.

191 ಕೋಟಿ ರೂ. ಹೊಣೆಗಾರಿಕೆ
‘‘ಸೆಸ್ಕ್‌ಗೆ ಪಾವತಿಸಬೇಕಾದ 40 ಕೋಟಿ ರೂ. ವಿದ್ಯುತ್‌ ಬಾಕಿ ಕೆಎಸ್‌ಐಡಿಸಿ ಬಾಕಿ 90 ಕೋಟಿ ರೂ., ಆದಾಯ ತೆರಿಗೆ 37 ಕೋಟಿ ರೂ. ಸೇರಿದಂತೆ ಒಟ್ಟು 191 ಕೋಟಿ ರೂ.ಗಳನ್ನು ಸರಕಾರದ ನಾನಾ ಸಂಸ್ಥೆಗಳಿಗೆ ಮೈಶುಗರ್‌ ಪಾವತಿಸಬೇಕಿದೆ. ಮೈಶುಗರ್‌ನಲ್ಲಿ ಉತ್ಪಾದನೆಯಾಗುವ ಹೆಚ್ಚುವರಿ ವಿದ್ಯುತ್‌ ಮಾರಾಟದಿಂದ ಸೆಸ್ಕ್‌ ಬಾಕಿಯನ್ನು ಕಡಿಮೆ ಮಾಡಲು ಆಲೋಚಿಸಲಾಗಿದೆ,’’ ಎಂದು ಹೇಳಿದರು.

ಕಳೆದ ವರ್ಷ ಜಿಲ್ಲೆಯ ಬೇರೆ ಸಕ್ಕರೆ ಕಾರ್ಖಾನೆಗಳು ಕಬ್ಬು ಅರೆಯುವಿಕೆ ಆರಂಭಿಸಿದಾಗ ನಾವು ಮೈಶುಗರ್‌ ದುರಸ್ತಿ ಕಾರ‍್ಯ ಕೈಗೊಂಡಿದ್ದೆವು, ಜತೆಗೆ, ಯಂತ್ರೋಪಕರಣಗಳ ಸಮಸ್ಯೆ ಹೆಚ್ಚಾಗಿತ್ತು. ಅದೆಲ್ಲವನ್ನೂ ಪರಿಹರಿಸಿಕೊಳ್ಳುವಲ್ಲಿ ವಿಳಂಬವಾಯಿತು. ಹೀಗಾಗಿ ಹಿಂದಿನ ವರ್ಷ 1 ಲಕ್ಷ ಟನ್‌ ಕಬ್ಬನ್ನಷ್ಟೇ ಅರೆಯಲು ಸಾಧ್ಯವಾಯಿತು. ಆದರೆ, ಈ ವರ್ಷ 5.50 ಲಕ್ಷ ಟನ್‌ ಕಬ್ಬನ್ನು ರೈತರಿಂದ ಒಪ್ಪಿಗೆ ಮಾಡಿಕೊಳ್ಳಲಾಗಿದ್ದು, ಕನಿಷ್ಟ 4 ಲಕ್ಷ ಟನ್‌ ಕಬ್ಬು ಅರೆಯುವ ಗುರಿ ಹೊಂದಲಾಗಿದೆ ಎಂದರು.

ಪ್ರಸ್ತುತ ಪ್ರಮುಖ ಯಂತ್ರೋಪಕರಣಗಳನ್ನು ಮೂಲ ತಯಾರಿಕಾ ಕಂಪನಿಗಳಿಗೆ(ಪೂನಾ, ಕೊಲ್ಲಾಪುರ ಇತರ) ಕಳುಹಿಸಿ ದುರಸ್ತಿಮಾಡಿಸಿ, ಪರೀಕ್ಷಿಸಲಾಗಿದೆ. ಶೇ.90ರಷ್ಟು ಯಾವುದೇ ತಾಂತ್ರಿಕ ಸಮಸ್ಯೆಗಳಿಲ್ಲ. ಏನೇ ಸಮಸ್ಯೆ ಎದುರಾದರೂ ಅದನ್ನು ಸ್ಥಳದಲ್ಲೇ ಪರಿಹರಿಸಲು ನಮ್ಮಲ್ಲಿ ತಾಂತ್ರಿಕ ತಂಡ ಸಿದ್ಧವಾಗಿದೆ. ಈಗಾಗಲೇ ಕಳೆದೆರಡು ದಿನಗಳಿಂದ ಟ್ರಯಲ್‌ ರನ್‌ ಕೂಡ ನಡೆಯುತ್ತಿದ್ದು, ಜೂನ್ 30 ರಿಂದ ಅಧಿಕೃತವಾಗಿ ಕಬ್ಬು ಅರೆಯುವಿಕೆ ಆರಂಭಿಸಲಾಗುವುದು.

ಸಹ ವಿದ್ಯುತ್‌ ಘಟಕದ ಸಾಮರ್ಥ್ಯ ಇಳಿಕೆ
ಮೈಶುಗರ್‌ನಲ್ಲಿನ ಸಹ ವಿದ್ಯುತ್‌ ಘಟಕವು 30 ಮೆಗಾವ್ಯಾಟ್‌ ಸಾಮರ್ಥ್ಯದ್ದಾಗಿದೆ. ಆದರೆ, ಅದರ ಸಾಮರ್ಥ್ಯಕ್ಕನುಗುಣವಾಗಿ ಕಬ್ಬು ಅರೆಯುವಿಕೆ ಸಾಧ್ಯವಿಲ್ಲ. ಕಬ್ಬಿನ ಕೊರತೆಯಾಗಲಿದೆ. ಹೀಗಾಗಿ ಸಹ ವಿದ್ಯುತ್‌ ಘಟಕದ ಟರ್ಬೈನ್‌ನ್ನು ಬ್ಯಾಕ್‌ ಪ್ರೆಷರ್‌ ಆಗಿ ಪರಿವರ್ತಿಸಿ, 20 ರಿಂದ 24 ಮೆಗಾವ್ಯಾಟ್‌ಗೆ ಇಳಿಸಲಾಗಿದೆ. ಇದರಿಂದ ಕಡಿಮೆ ಪ್ರಮಾಣದಲ್ಲಿ ಕಬ್ಬು ಪೂರೈಕೆದರೂ ಸಹ ವಿದ್ಯುತ್‌ ಘಟಕವನ್ನು ಚಾಲನೆ ಮಾಡಬಹುದು.

ನಿರೀಕ್ಷೆಯಂತೆ ನಿತ್ಯ ಮೂರ್ನಾಲ್ಕು ಸಾವಿರ ಟನ್‌ ಕಬ್ಬನ್ನು ಕ್ರಷಿಂಗ್‌ ಮಾಡಿದರೆ, ಕಾರ್ಖಾನೆಗೆ ಬೇಕಾದ 6-7 ಮೆಗಾವ್ಯಾಟ್‌ ವಿದ್ಯುತ್‌ನ್ನು ಬಳಸಿಕೊಂಡು, ಉಳಿದಿದ್ದನ್ನು ಸೆಸ್ಕ್‌ಗೆ ಪೂರೈಸಬಹುದು. ಆಗ ಸೆಸ್ಕ್‌ನಿಂದಲೇ ನಮಗೆ ವಿದ್ಯುತ್‌ ಮಾರಾಟ ಮೊತ್ತ ಪಾವತಿಯಾಗುತ್ತದೆ. ಆಗ ಸೆಸ್ಕ್‌ ವಿದ್ಯುತ್‌ ಬಾಕಿ ಮೇಲಿನ ಹೊರೆಯೂ ಕಡಿಮೆಯಾಗಲಿದೆ ಎಂದು ಅಪ್ಪಾ ಸಾಹೇಬ್‌ ಚನ್ನಪ್ಪಗೌಡ ಪಾಟೀಲ್‌ ವಿವರಿಸಿದರು.

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

5 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

6 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

7 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

7 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

13 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

13 hours ago