ಬೆಂಗಳೂರು: ಸಕ್ಕರೆ ಕಾರ್ಖಾನೆಗಳಲ್ಲಿ ಕಬ್ಬು ತೂಕ ಮಾಡುವಾಗ ಮೋಸ ಮಾಡಲಾಗುತ್ತಿದೆ ಎಂಬ ರೈತರ ದೂರು ಆಧರಿಸಿ ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶನಾಲಯದ ಆಯುಕ್ತರು ಬೆಳಗ್ಗೆ
ಉತ್ತರ ಕರ್ನಾಟಕದ 21 ಸಕ್ಕರೆ ಕಾರ್ಖಾನೆಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದರು.ಬೆಳಗಾವಿ ಜಿಲ್ಲೆಯ 8 ಕಾರ್ಖಾನೆಗಳು, ಬಾಗಲಕೋಟೆ ಜಿಲ್ಲೆಯ 4 ಕಾರ್ಖಾನೆಗಳು, ವಿಜಾಪುರ ಜಿಲ್ಲೆಯ 4 ಕಾರ್ಖಾನೆಗಳು, ಬೀದರ್ ಮತ್ತು ಕಲಬುರ್ಗಿಯ 2 ಕಾರ್ಖಾನೆಗಳು ಮತ್ತು ಕಾರವಾರ ಜಿಲ್ಲೆಯ 1 ಕಾರ್ಖಾನೆ ಮೇಲೆ ಮೊಟ್ಟಮೊದಲ ಬಾರಿಗೆ ಸಕ್ಕರೆ ಆಯುಕ್ತರ ನೇತೃತ್ವದಲ್ಲಿಏಕಕಾಲಕ್ಕೆ ಬೃಹತ್ ಪರಿಶೀಲನೆ ಕೈಗೊಳ್ಳಲಾಯಿತು.ಸಕ್ಕರೆ ಇಲಾಖೆ ಸಿಬ್ಬಂದಿ, ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ, ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಜಿಲ್ಲಾಡಳಿತ ಮತ್ತು ಪೊಲೀಸ್ ಸಿಬ್ಬಂದಿ ಸಹಾಯದಿಂದ ಕಾರ್ಯಾಚರಣೆ ನಡೆಸಲಾಯಿತು.
ಬೆಳಗ್ಗೆ 7 ಗಂಟೆಗೆ ಏಕಕಾಲಕ್ಕೆ ಎಲ್ಲ ಕಾರ್ಖಾನೆಗಳ ಮೇಲೆ ದಾಳಿ ಮಾಡಲಾಯಿತು. ತನಿಖೆ ಪ್ರಗತಿಯಲ್ಲಿದೆ ಎಂದು ಆಯುಕ್ತರು ತಿಳಿಸಿದ್ದಾರೆ. ರೈತರ ದೂರುಗಳನ್ನು ಆಧರಿಸಿ, ಜವಳಿ ಮತ್ತು ಸಕ್ಕರೆ ಸಚಿವರ ನಿರ್ದೇಶನದ ಮೇರೆಗೆ ಈ ದಾಳಿ ಸಂಘಟಿಸಲಾಗಿದೆ.
ಮೈಸೂರು: ದೇಶದೊಳಗೆ ಅಕ್ರಮವಾಗಿ ನುಸುಳುವವರ ಸಂಖ್ಯೆ ಹೆಚ್ಚಾಗಿದ್ದು, ಕರ್ನಾಟಕದಲ್ಲಿಯೂ ಬಾಂಗ್ಲಾದೇಶದ ಪ್ರಜೆಗಳು ಉದ್ಧಟತನ ತೋರುತ್ತಿದ್ದಾರೆ ಎಂದು ಸಂಸದ ಯದುವೀರ್ ಕೃಷ್ಣದತ್ತ…
ಬೆಂಗಳೂರು: ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಪ್ರವಾಸಿ ತಾಣಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವ ಹಿನ್ನೆಲೆಯಲ್ಲಿ…
ಮೈಸೂರು: ಹೊಸ ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಕ್ರಮ ಮದ್ಯ ಹಾಗೂ ಮಾದಕ ವಸ್ತುಗಳ ಮಾರಾಟ ತಡೆಯಲು…
ನಂಜನಗೂಡು: ಪಟ್ಟಣದಲ್ಲಿ ಸರಣಿ ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿದ್ದು, ನಗರವಾಸಿಗಳಲ್ಲಿ ಆತಂಕ ಮೂಡಿಸಿದೆ. ನಗರದ ಆರ್.ಪಿ. ರಸ್ತೆಯಲ್ಲಿರುವ ಸುಮಾರು 14…
ಚಾಮರಾಜನಗರ: ಚಾಮರಾಜನಗರ ತಾಲ್ಲೂಕಿನ ಕಲ್ಪುರ ಭಾಗದಲ್ಲಿ ಸಂಚಾರ ಮಾಡುತ್ತಿದ್ದ ಮತ್ತೊಂದು ಹುಲಿಯನ್ನು ಅರವಳಿಕೆ ಚುಚ್ಚುಮದ್ದು ನೀಡಿ ಸೆರೆ ಹಿಡಿಯಲಾಗಿದೆ. ಕಳೆದ…
ಮೈಸೂರಿನ ಜಯನಗರದಲ್ಲಿರುವ ಇಸ್ಕಾನ್ ದೇವಾಲಯದ ಪಕ್ಕದಲ್ಲಿದ್ದ ಕಸದ ರಾಶಿಯನ್ನು ಮೈಸೂರು ಮಹಾನಗರಪಾಲಿಕೆಯಿಂದ ಮಂಗಳವಾರ ತೆರವುಗೊಳಿಸಲಾಗಿದೆ. ಆಂದೋಲನ ದಿನಪತ್ರಿಕೆಯ ಓದುಗರ ಪತ್ರ…