BREAKING NEWS

ಕಬ್ಬು ತೂಕದಲ್ಲಿ ವಂಚನೆ ಆರೋಪ: ರಾಜ್ಯದ 21 ಸಕ್ಕರೆ ಕಾರ್ಖಾನೆಗಳ ಮೇಲೆ ದಾಳಿ

ಬೆಂಗಳೂರು: ಸಕ್ಕರೆ ಕಾರ್ಖಾನೆಗಳಲ್ಲಿ ಕಬ್ಬು ತೂಕ ಮಾಡುವಾಗ ಮೋಸ ಮಾಡಲಾಗುತ್ತಿದೆ ಎಂಬ ರೈತರ ದೂರು ಆಧರಿಸಿ ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶನಾಲಯದ ಆಯುಕ್ತರು ಬೆಳಗ್ಗೆ

ಉತ್ತರ ಕರ್ನಾಟಕದ 21 ಸಕ್ಕರೆ ಕಾರ್ಖಾನೆಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದರು.ಬೆಳಗಾವಿ ಜಿಲ್ಲೆಯ 8 ಕಾರ್ಖಾನೆಗಳು, ಬಾಗಲಕೋಟೆ ಜಿಲ್ಲೆಯ 4 ಕಾರ್ಖಾನೆಗಳು, ವಿಜಾಪುರ ಜಿಲ್ಲೆಯ 4 ಕಾರ್ಖಾನೆಗಳು, ಬೀದರ್ ಮತ್ತು ಕಲಬುರ್ಗಿಯ 2 ಕಾರ್ಖಾನೆಗಳು ಮತ್ತು ಕಾರವಾರ ಜಿಲ್ಲೆಯ 1 ಕಾರ್ಖಾನೆ ಮೇಲೆ ಮೊಟ್ಟಮೊದಲ ಬಾರಿಗೆ ಸಕ್ಕರೆ ಆಯುಕ್ತರ ನೇತೃತ್ವದಲ್ಲಿಏಕಕಾಲಕ್ಕೆ ಬೃಹತ್‌ ಪರಿಶೀಲನೆ ಕೈಗೊಳ್ಳಲಾಯಿತು.ಸಕ್ಕರೆ ಇಲಾಖೆ ಸಿಬ್ಬಂದಿ, ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ, ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಜಿಲ್ಲಾಡಳಿತ ಮತ್ತು ಪೊಲೀಸ್ ಸಿಬ್ಬಂದಿ ಸಹಾಯದಿಂದ ಕಾರ್ಯಾಚರಣೆ ನಡೆಸಲಾಯಿತು.

ಬೆಳಗ್ಗೆ 7 ಗಂಟೆಗೆ ಏಕಕಾಲಕ್ಕೆ ಎಲ್ಲ ಕಾರ್ಖಾನೆಗಳ ಮೇಲೆ ದಾಳಿ ಮಾಡಲಾಯಿತು. ತನಿಖೆ ಪ್ರಗತಿಯಲ್ಲಿದೆ ಎಂದು ಆಯುಕ್ತರು ತಿಳಿಸಿದ್ದಾರೆ. ರೈತರ ದೂರುಗಳನ್ನು ಆಧರಿಸಿ, ಜವಳಿ ಮತ್ತು ಸಕ್ಕರೆ ಸಚಿವರ ನಿರ್ದೇಶನದ ಮೇರೆಗೆ ಈ ದಾಳಿ ಸಂಘಟಿಸಲಾಗಿದೆ.

andolanait

Recent Posts

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

19 mins ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

6 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

12 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

12 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

12 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

12 hours ago