ಮೈಸೂರು: ಮಂಗಳೂರು ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿ ಶಂಕಿತ ಉಗ್ರ ಶಾರಿಖ್ ಜೊತೆ ವಾಸವಿದ್ದ ಸಹಚರನನ್ನು ಮೈಸೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ಶಂಕಿತ ಭಯೋತ್ಪಾಧಕ ಶಾರಿಖ್ನೊಂದಿಗೆ ಒಡನಾಟ ಹೊಂದಿದ್ದ ಆತನ ಸಹಚರನನ್ನು ಮೇಟಗಳ್ಳಿಯ ಲೋಕನಾಯಕನಗರದ ರೂಮ್ನಲ್ಲೇ ಪೊಲೀಸರು ವಶಕ್ಕೆ ಪಡೆದು, ಮೇಟಗಳ್ಳಿ ಠಾಣೆಯಲ್ಲಿ ವಿಚಾರಣೆ ನಡೆಸಿ ಅಜ್ಞಾತ ಸ್ಥಳದಲ್ಲಿ ವಿಚಾರಣೆ ಮುಂದುವರಿಸಿದ್ದಾರೆ ಎನ್ನಲಾಗಿದೆ.
ಸಭ್ಯನಂತೆ ಇದ್ದ ಉಗ್ರ
ಶಂಕಿತ ಉಗ್ರ ತಾನಿದ್ದ ರೂಮ್ನಿಂದ ಹೊರ ಬಂದರೂ ನೆರೆಹೊರೆಯವರೊಂದಿಗೆ ಮಾತನಾಡುತ್ತಿರಲಿಲ್ಲ. ನೋಡಲು ವಿದ್ಯಾರ್ಥಿಯಂತೆ ಹಾಗೂ ಯಾವುದೋ ಕಂಪನಿಯಲ್ಲಿ ಕೆಲಸ ಮಾಡುವವರಂತೆ ಓಡಾಡುತ್ತಿದ್ದ. ಸಂಜೆ ಮನೆ ಸೇರಿದರೆ ಹೊರಗೆ ಬರುತ್ತಿರಲಿಲ್ಲ. ಸರಿಯಾಗಿ ಬಾಡಿಗೆ ನೀಡುತ್ತಿರಲಿಲ್ಲ ಎಂದು ಸ್ಥಳೀಯರು ಮತ್ತು ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಪೊಲೀಸ್ ಆಯುಕ್ತ ರಮೇಶ್ ಅವರ ಮಾರ್ಗದರ್ಶನದಲ್ಲಿ ಮೇಟಗಳ್ಳಿ ಪೊಲೀಸ್, ಸಿಸಿಬಿ ಬೆಂಗಳೂರಿಂದ ಬಾಂಬ್ ನಿಷ್ಕ್ರೀಯ ದಳ, ಭಯೋತ್ಪಾಧಕ ನಿಗ್ರಹ ದಳದ ಸಿಬ್ಬಂದಿ
ಸೇರಿದಂತೆ ವಿವಿಧ ಘಟಕಗಳ ಪೊಲೀಸರು, ಹಿರಿಯ ಅಧಿಕಾರಿಗಳು ಭಾನುವಾರ ಮುಂಜಾನೆ 3 ಗಂಟೆಯಿಂದ ಮಧ್ಯಾಹ್ನ 3ಗಂಟೆವರೆಗೂ ಕಾರ್ಯಾಚರಣೆ ನಡೆಸಿದ್ದಾರೆ. ಶೋಧನೆ ಮಾಡುವ ಸಂದರ್ಭದಲ್ಲಿ ಪೊಲೀಸರು ಸ್ಥಳೀಯರು ಸೇರಿದಂತೆ ಯಾರೊಬ್ಬರೂ ಓಡಾಡದಂತೆ ಮನೆ ಇರುವ ರಸ್ತೆಯಲ್ಲಿ ಬ್ಯಾರಿಕೇಡ್ ಅಳವಡಿಸಿದ್ದರು. ಇದರಿಂದ ಕೆಲಕಾಲ ಸ್ಥಳೀಯರಲ್ಲಿ ಆತಂಕ ನಿರ್ಮಾಣವಾಗಿತ್ತು.
ಲಕ್ಷಾಂತರ ಜನರಿಗೆ ಮೈಂಡ್ ಸೆಟ್ ಕೋಚ್ ಆಗಿ ಮಾರ್ಗದರ್ಶ ಗುಜರಾತಿನ ಅಹ್ಮದ್ನಗರದ ೩೮ ವರ್ಷ ಪ್ರಾಯದ ಜೈಕಿಶನ್ ಶರ್ಮಾ ಒಬ್ಬ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಹಲವು ಅಡೆತಡೆಗಳ ನಡುವೆಯೂ ೩ ವರ್ಷಗಳ ಬಳಿಕ ಕೊಡಗು- ಹಾಸನ ಜಿಲ್ಲೆಗಳ ಗಡಿಭಾಗದ ಯಸಳೂರು ಸಮೀಪ…
ಮಹಾದೇಶ್ ಎಂ.ಗೌಡ ಹನೂರು: ಚಾಮರಾಜನಗರ ಜಿಲ್ಲೆಯಲ್ಲಿ ಸಫಾರಿ ಎಂದರೆ ನೆನಪಾಗುವುದು ಬಂಡೀಪುರ, ಕೆ.ಗುಡಿ ಮಾತ್ರ. ಇತ್ತೀಚಿನ ದಿನಗಳಲ್ಲಿ ಹನೂರು ತಾಲ್ಲೂಕಿನ…
ರಾಜೇಶ್ ಬೆಂಡರವಾಡಿ ಚಾಮರಾಜೇಶ್ವರ ದೇವಸ್ಥಾನಕ್ಕೆ ಸೇರಿದ ಈ ಕಟ್ಟಡದಲ್ಲಿ ಬೆಳೆದಿದೆ ಅರಳಿಮರ; ಶೀಘ್ರದಲ್ಲಿ ಕಟ್ಟಡ ತೆರವುಗೊಳಿಸಲು ಆಗ್ರಹ ಚಾಮರಾಜನಗರ: ಇಲ್ಲಿನ…
ಚಿರಂಜೀವಿ ಸಿ ಹುಲ್ಲಹಳ್ಳಿ ಮೈಸೂರು: ಶತಮಾನಕ್ಕೂ ಹೆಚ್ಚು ಇತಿಹಾಸ ಹೊಂದಿರುವ ಭವ್ಯ ಪಾರಂಪರಿಕ ಕಟ್ಟಡ, ದೊಡ್ಡ ಬಾಗಿಲು-ಕಿಟಕಿಗಳೊಂದಿಗೆ ಇನ್ನೂ ಗಟ್ಟಿಯಾಗಿ…
ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿತ್ಯ ಸಂಚರಿಸುವ ಒಡೆಯರ್ ಎಕ್ಸ್ಪ್ರೆಸ್ ರೈಲಿಗೆ ಈಗ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ…