BREAKING NEWS

ಸಿಂಗಾಪುರ ಕಂಪನಿ ತೆಕ್ಕೆಗೆ ಮಣಿಪಾಲ್‌ ಹಾಸ್ಪಿಟಲ್ಸ್‌: 40 ಸಾವಿರ ಕೋಟಿಗೆ ಖರೀದಿ

ಮುಂಬೈ:  ಸಿಂಗಾಪುರದ ಸರಕಾರಿ ಸ್ವಾಮ್ಯದ ಟೆಮಾಸೆಕ್‌ ಹೋಲ್ಡಿಂಗ್ಸ್‌ ಕಂಪನಿಯು ಕರ್ನಾಟಕದ ಮಣಿಪಾಲ್‌ ಹೆಲ್ತ್‌ ಎಂಟರ್‌ಪ್ರೈಸಸ್‌ನ ಶೇ. 59ರಷ್ಟು ಷೇರುಗಳನ್ನು ಖರೀದಿಸಿದೆ. ಸುಮಾರು 40,000 ಕೋಟಿ ರೂ.ಗಳ ಬೃಹತ್‌ ಮೊತ್ತದ ಖರೀದಿ ಒಪ್ಪಂದ ಇದಾಗಿದೆ ಎಂದು ಮೂಲಗಳು ತಿಳಿಸಿವೆ. ಇದರ ಅಧಿಕೃತ ಪ್ರಕಟಣೆಯು ಮುಂದಿನ ವಾರ ಹೊರಬೀಳುವ ನಿರೀಕ್ಷೆ ಇದೆ.

ಮಣಿಪಾಲ್‌ ಹಾಸ್ಪಿಟಲ್ಸ್‌ ಭಾರತದ ಆರೋಗ್ಯ ವಲಯದಲ್ಲಿ ಮುಂಚೂಣಿಯಲ್ಲಿರುವ ಸಂಸ್ಥೆಗಳಲ್ಲಿ ಒಂದಾಗಿದ್ದು, ಹೊಸ ಡೀಲ್‌ ಮೂಲಕ ಮಣಿಪಾಲ್‌ ಹೆಲ್ತ್‌ ಎಂಟರ್‌ಪ್ರೈಸಸ್‌ನಲ್ಲಿನ ಬಹುತೇಕ ಷೇರುಗಳನ್ನು ಟೆಮಾಸೆಕ್‌ ಹೋಲ್ಡಿಂಗ್ಸ್‌ ತನ್ನ ವಶಕ್ಕೆ ಪಡೆದಂತಾಗಿದೆ.

ಟೆಮಾಸೆಕ್‌ ಅಧೀನದ ಶಿಯಾರ್ಸ್ ಹೆಲ್ತ್‌ ಈ ಮೊದಲು ಮಣಿಪಾಲ್‌ನ ಶೇ. 18ರಷ್ಟು ಷೇರುಗಳನ್ನು ಹೊಂದಿತ್ತು. ಈಗ ಮತ್ತೆ ಶೇಕಡಾ 41ರಷ್ಟು ಷೇರುಗಳನ್ನು ಖರೀದಿಸಿದ್ದು, ಒಟ್ಟು ಮಣಿಪಾಲ್‌ನ ಶೇ. 59ರಷ್ಟು ಷೇರುಗಳು ಈಗ ಅದರ ಬಳಿ ಇವೆ.

ಈ ಖರೀದಿ ವಹಿವಾಟಿನ ಬಳಿಕ, ಮಣಿಪಾಲ್‌ ಹೆಲ್ತ್‌ ಎಂಟರ್‌ಪ್ರೈಸಸ್‌ನ ಪ್ರವರ್ತಕ ರಂಜನ್‌ ಪೈ ಮತ್ತು ಅವರ ಕುಟುಂಬದ ಬಳಿ ಷೇರುಗಳ ಸಂಖ್ಯೆ ಶೇ. 30ರಷ್ಟು ಉಳಿಯಲಿವೆ. ಟಿಪಿಜಿ ಇಂಕ್‌ ಬಳಿ ಶೇ. 11ರಷ್ಟು ಷೇರುಗಳು ಇರಲಿವೆ.

ಈ ಖರೀದಿ ವ್ಯವಹಾರದ ಬಗ್ಗೆ ‘ಎಕನಾಮಿಕ್‌ ಟೈಮ್ಸ್‌’ ಕಳೆದ ವರ್ಷದ ಅಕ್ಟೋಬರ್‌ನಲ್ಲಿಯೇ ವರದಿ ಮಾಡಿತ್ತು. ಇದೀಗ ಒಪ್ಪಂದ ಅಂತಿಮ ಹಂತಕ್ಕೆ ಬಂದಿದ್ದರು, ಕರ್ನಾಟಕ ಉಡುಪಿ ಮೂಲದ ಮಣಿಪಾಲ್‌ ಹಾಸ್ಪಿಟಲ್ಸ್‌ ವಿದೇಶಿ ಕಂಪನಿ ತೆಕ್ಕೆಗೆ ಜಾರುತ್ತಿದೆ.

ಉಡುಪಿಯ ಮಣಿಪಾಲ ಮೂಲದ ಪೈ ಕುಟುಂಬವು ಭಾರತದ ಮೊದಲ ಖಾಸಗಿ ಮೆಡಿಕಲ್‌ ಕಾಲೇಜನ್ನು ಕರ್ನಾಟಕದ ಮಣಿಪಾಲದಲ್ಲಿ 1953ರಲ್ಲಿ ಆರಂಭಿಸಿತ್ತು. ಮಣಿಪಾಲ್‌ ಹಾಸ್ಟಿಟಲ್ಸ್‌ ಎನ್ನುವುದು ಅಪೋಲೋ ಹಾಸ್ಪಿಟಲ್ಸ್‌ ನಂತರದ ಸ್ಥಾನದಲ್ಲಿದ್ದು, ದೇಶದ ಎರಡನೇ ದೊಡ್ಡ ಆಸ್ಪತ್ರೆಗಳ ಸರಣಿಯಾಗಿದೆ. ಇದು ಮಣಿಪಾಲ್‌ ಎಜುಕೇಷನ್‌ ಮತ್ತು ಮೆಡಿಕಲ್‌ ಗ್ರೂಪ್‌ನ ಭಾಗವಾಗಿದೆ.

ಮಣಿಪಾಲ್‌ ಖರೀದಿ ವ್ಯವಹಾರ

ಮಣಿಪಾಲ್‌ ಹೆಲ್ತ್‌ ಎಂಟರ್‌ಪ್ರೈಸಸ್‌ ಇತ್ತೀಚೆಗಷ್ಟೇ ಕೋಲ್ಕೊತಾ ಮೂಲದ ಎಎಂಆರ್‌ಐ ಹಾಸ್ಪಿಟಲ್ಸ್‌ ಅನ್ನು 2,400 ಕೋಟಿ ರೂ.ಗೆ ಖರೀದಿಸಿತ್ತು. 2020ರಲ್ಲಿ ಭಾರತದಲ್ಲಿನ ಕೊಲಂಬಿಯಾ ಏಷ್ಯಾ ಹಾಸ್ಪಿಟಲ್ಸ್‌ ಅನ್ನು 2,100 ಕೋಟಿ ರೂ.ಗಳಿಗೆ ಖರೀದಿಸಿತ್ತು. ಜತೆಗೆ ಬೆಂಗಳೂರಿನ ವಿಕ್ರಂ ಹಾಸ್ಪಿಟಲ್‌ ಸೇರಿ ಹಲವು ಆಸ್ಪತ್ರೆಗಳನ್ನು ಖರೀದಿಸಿತ್ತು. ಹೀಗೆ ಹಲವು ಖರೀದಿ, ಸ್ವಾಧೀನಗಳ ಮೂಲಕ ಭಾರತದ ಎರಡನೇ ಅತಿದೊಡ್ಡ ಆಸ್ಪತ್ರೆಗಳ ಸಮೂಹವಾಗಿ ಬೆಳೆದಿದ್ದ ಮಣಿಪಾಲ್‌ ಹಾಸ್ಪಿಟಲ್ಸ್ ಇದೀಗ ಸಿಂಗಾಪುರ ಕಂಪನಿಯ ವಶವಾಗುತ್ತಿದೆ.

andolanait

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

2 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago