ನವದೆಹಲಿ : ಮಣಿಪುರ ಹೊತ್ತಿ ಉರಿಯುತ್ತಿದೆ. ಆದರೆ, ಬಿಜೆಪಿ ಇತರ ರಾಜ್ಯಗಳಲ್ಲಿ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುರುವಾರ ಆರೋಪಿಸಿದ್ದಾರೆ.
ನವದೆಹಲಿಯ ತಾಲಕ್ಟೋರಾ ಕ್ರೀಡಾಂಗಣದಲ್ಲಿ ಮಹಿಳಾ ಕಾಂಗ್ರೆಸ್ ಸದಸ್ಯರು ಹಾಗೂ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಪಕ್ಷದ ನಾಯಕಿಯರು ಕಷ್ಟಪಟ್ಟು ಕೆಲಸ ಮಾಡಬೇಕು ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸರಕಾರವನ್ನು ಅಧಿಕಾರದಿಂದ ಕಿತ್ತೊಗೆಯಬೇಕು ಎಂದರು.
‘‘ರಾಹುಲ್ ಗಾಂಧಿ ಅವರಿಗೆ ಮಣಿಪುರಕ್ಕೆ ಭೇಟಿ ನೀಡಲು ಸಾಧ್ಯವಾಗುವುದಾದರೆ, ಪ್ರಧಾನಿ ಅವರಿಗೆ ಭೇಟಿ ನೀಡಲು ಯಾಕೆ ಸಾಧ್ಯವಾಗುವುದಿಲ್ಲ? ಮಣಿಪುರದಲ್ಲಿ ಮಹಿಳೆಯರಿಗೆ ಬಿಜೆಪಿ ಯಾವ ರಕ್ಷಣೆ ನೀಡಿದೆ? ಅಲ್ಲಿನ ಮಹಿಳೆಯರು ಮನೆಯಿಂದ ಪರಾರಿಯಾಗುತ್ತಿದ್ದಾರೆ, ಅತ್ಯಾಚಾರಕ್ಕೆ ಒಳಗಾಗುತ್ತಿದ್ದಾರೆ, ಹತ್ಯೆಯಾಗುತ್ತಿದ್ದಾರೆ. ಆದರೆ, ಬಿಜೆಪಿ ಇತರ ರಾಜ್ಯಗಳಲ್ಲಿ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದೆ’’ ಎಂದು ಖರ್ಗೆ ಹೇಳಿದರು.
‘‘2024ರ ಚುನಾವಣೆ ಕಾರ್ಯತಂತ್ರದ ಬಗ್ಗೆ ನಮ್ಮ ಪಕ್ಷದ ಮಹಿಳಾ ಕಾರ್ಯಕರ್ತರು ಚರ್ಚೆ ನಡೆಸಲಿದ್ದಾರೆ. ಮುಂದಿನ ವರ್ಷ ಅವರು ಬಿಜೆಪಿ ಸರಕಾರವನ್ನು ಕಿತ್ತೊಗೆಯಲಿದ್ದಾರೆ ಎಂಬುದು ನಾನು ಖಚಿತವಾಗಿ ಹೇಳುತ್ತೇನೆ’’ ಎಂದು ಖರ್ಗೆ ತಿಳಿಸಿದರು. ಮಣಿಪುರದಲ್ಲಿ ನಡೆಯುತ್ತಿರುವ ದೌರ್ಜನ್ಯದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಮೌನವಾಗಿದ್ದಾರೆ. ಪ್ರತಿಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸಿದ ಬಳಿಕವಷ್ಟೇ ಅವರು ಈ ವಿಷಯದ ಕುರಿತು ಸಂಸತ್ತಿನಲ್ಲಿ ಮಾತನಾಡಿದ್ದಾರೆ ಎಂದು ಅವರು ಹೇಳಿದ್ದಾರೆ.
‘‘ಗಲಭೆಗಳು ದೇಶಾದ್ಯಂತ ನಡೆಯುತ್ತಿರುತ್ತವೆ. ಮಣಿಪುರದಲ್ಲಿ ನಡೆಯುತ್ತಿರುವ ದೌರ್ಜನ್ಯದ ಕುರಿತು ಮಾತನಾಡುವಂತೆ ನಾವು ಪ್ರಧಾನಿ ಅವರಲ್ಲಿ ಮನವಿ ಮಾಡಿದ್ದೆವು. ಆದರೆ, ನಾವು ಅವಿಶ್ವಾಸ ನಿರ್ಣಯ ಮಂಡಿಸಿದ ಬಳಿಕವಷ್ಟೇ ಅವರು ಮಾತನಾಡಿದರು. ಮಣಿಪುರದಲ್ಲಿ ಹಲವು ಜನರು ಸಾವನ್ನಪ್ಪಿದ್ದಾರೆ. ಹಲವು ಮನೆಗಳು ಬೆಂಕಿಗಾಹುತಿಯಾಗಿವೆ, ಸಾವಿರಾರು ಜನರು ನಿರ್ವಸಿತರಾಗಿದ್ದಾರೆ. ಆದರೂ ಪ್ರಧಾನಿ ಅವರು ಈ ಕುರಿತು ಇದುವರೆಗೆ ಮಾತನಾಡಿಲ್ಲ’’ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…
ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…
ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…
ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…
ಮೈಸೂರು : ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…