BREAKING NEWS

ಮಣಿಪುರ ಬೆತ್ತಲೆ ಮೆರವಣಿ: ಇಂಡಿಯಾ ಮೌನವಾಗಿರೊಲ್ಲ: ರಾಹುಲ್ ಗಾಂಧಿ ಆಕ್ರೋಶ

ನವದೆಹಲಿ : ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡುವ ಎರಡು ತಿಂಗಳ ಹಿಂದಿನ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದು ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ.

ಮಣಿಪುರದ ಪರಿಸ್ಥಿತಿ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, “ಭಾರತದ ಪರಿಕಲ್ಪನೆ ಮೇಲೆ ದಾಳಿ ನಡೆಯುತ್ತಿರುವಾಗ ‘ಇಂಡಿಯಾ’ ಸುಮ್ಮನೆ ಮೌನವಾಗಿ ಇರುವುದಿಲ್ಲ” ಎನ್ನುವ ಮೂಲಕ ವಿರೋಧ ಪಕ್ಷಗಳ ಮೈತ್ರಿಕೂಟವು ಮಣಿಪುರ ಹಿಂಸಾಚಾರದ ಕುರಿತು ಸುಮ್ಮನಿರುವುದಿಲ್ಲ ಎಂಬ ಸಂದೇಶ ರವಾನಿಸಿದ್ದಾರೆ.

“ಪ್ರಧಾನಿ ಅವರ ಮೌನ ಹಾಗೂ ನಿಷ್ಕ್ರಿಯತೆಯು ಮಣಿಪುರವನ್ನು ಅರಾಜಕತೆಗೆ ತಳ್ಳಿದೆ. ಮಣಿಪುರದಲ್ಲಿ ಭಾರತದ ಪರಿಕಲ್ಪನೆಯ ಮೇಲೆ ನಡೆಯುತ್ತಿರುವಾಗ ‘ಇಂಡಿಯಾ’ ಮೌನವಾಗಿ ಇರುವುದಿಲ್ಲ” ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ, ವೈರಲ್ ವಿಡಿಯೋ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ. ಮಣಿಪುರದಲ್ಲಿ ನಡೆದ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯದ ಚಿತ್ರಗಳು ಹೃದಯ ವಿದ್ರಾವಕವಾಗಿವೆ ಎಂದಿದ್ದಾರೆ.

“ಮಹಿಳೆಯರ ಮೇಲಿನ ಹಿಂಸಾಚಾರದ ಈ ಭಯಾನಕ ಘಟನೆಯನ್ನು ಎಷ್ಟು ಖಂಡಿಸಿದರೂ ಸಾಲದು. ಸಮಾಜದಲ್ಲಿ ಹಿಂಸಾಚಾರದ ಗರಿಷ್ಠ ಸಂಕಷ್ಟಗಳನ್ನು ಮಹಿಳೆಯರು ಮತ್ತು ಮಕ್ಕಳೇ ಅನುಭವಿಸುತ್ತಾರೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

“ಮಣಿಪುರದಲ್ಲಿ ಶಾಂತಿ ಸ್ಥಾಪಿಸುವ ಪ್ರಯತ್ನಗಳನ್ನು ಹೆಚ್ಚಿಸುವುದರ ಜತೆಗೆ ನಾವು ಹಿಂಸಾಚಾರವನ್ನು ಒಂದೇ ಧ್ವನಿಯಲ್ಲಿ ಖಂಡಿಸಬೇಕಿದೆ. ಕೇಂದ್ರ ಸರ್ಕಾರ, ಮಿ. ಪ್ರಧಾನಿ ಅವರು ಮಣಿಪುರದಲ್ಲಿನ ಹಿಂಸಾತ್ಮಕ ಘಟನೆಗಳ ಕಡೆಗೆ ಏಕೆ ತಮ್ಮ ಕಣ್ಣುಗಳನ್ನು ಕುರುಡಾಗಿಸಿಕೊಂಡಿದ್ದಾರೆ? ಅಂತಹ ಚಿತ್ರಗಳು ಮತ್ತು ಹಿಂಸಾತ್ಮಕ ಘಟನೆಗಳು ಅವರನ್ನು ಕಲಕುವುದಿಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

“ಸಾವಿರಾರು ಸಾವುಗಳಲ್ಲಿ ಮಾನವೀಯತೆ ಸತ್ತಿದೆ! ಮಹಿಳೆಯರು ಅವಮಾನ ಹಾಗೂ ಶೋಷಿತರಾಗುವುದು, ಬೆತ್ತಲೆಯಾಗಿ ಮೆರವಣಿಗೆಯಾಗುವುದನ್ನು ತಡೆಯುವುದು ಈ ಬಿಜೆಪಿ ಸರ್ಕಾರಕ್ಕೆ ಸಾಧ್ಯವಾಗದೆ ಇದ್ದರೆ, ಅದನ್ನು ಸುಮ್ಮನೆ ವಜಾಗೊಳಿಸಬೇಕು. ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ಹೇರುವುದಕ್ಕೆ ಮೋದಿ ಸರ್ಕಾರವನ್ನು ತಡೆಯುತ್ತಿರುವುದು ಏನು?” ಎಂದು ಮಹಿಳಾ ಕಾಂಗ್ರೆಸ್ ಮುಖ್ಯಸ್ಥೆ ನೆಟ್ಟಾ ಡಿಸೋಜಾ ಕಿಡಿಕಾರಿದ್ದಾರೆ.

ಪೊಲೀಸರು ಅಪರಿಚಿತ ಶಸ್ತ್ರಸಜ್ಜಿತ ದುಷ್ಕರ್ಮಿಗಳ ವಿರುದ್ಧ ತೌಬುಲ್ ಜಿಲ್ಲೆಯ ನಾಂಗ್‌ಪೊಕ್ ಸೆಕ್ಮೈ ಪೊಲೀಸ್ ಠಾಣೆಯಲ್ಲಿ ಅಪಹರಣ, ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.
andolanait

Recent Posts

‘ಸಾವಿನ ನಂತರವೂ ಜನಮಾನಸದಲ್ಲಿ ಉಳಿದ ವೀರಭದ್ರಪ್ಪ’

ಯಳಂದೂರು: ನುಡಿನಮನ ಕಾರ್ಯಕ್ರಮದಲ್ಲಿ ಸುತ್ತೂರು ಶ್ರೀ ಬಣ್ಣನೆ  ಯಳಂದೂರು: ಜನರ ಪ್ರೀತಿ ಗಳಿಕೆಯೇ ಸಾರ್ಥಕಜೀವನವಾಗಿದ್ದು, ಮನುಕುಲವನ್ನು ಕೃತಾರ್ಥ ಮಾಡುವ ಕೆಲಸವನ್ನು…

3 hours ago

ಓದುಗರ ಪತ್ರ: ಮಹಿಳೆ ವಿವಸ ಪ್ರಕರಣ ತನಿಖೆಯಲ್ಲಿ ಪೂರ್ವಗ್ರಹ ಬೇಡ

ಹುಬ್ಬಳ್ಳಿಯಲ್ಲಿ ನಡೆದ ಮಹಿಳೆಯ ವಿವಸ ಪ್ರಕರಣ ಅತ್ಯಂತ ಅಮಾನವೀಯವಾದುದು. ಸಂತ್ರಸ್ತ ಮಹಿಳೆ ಬಿಜೆಪಿಯೋ, ಕಾಂಗ್ರೆಸ್ಸೋ ಎನ್ನುವುದು ನಂತರದ ವಿಚಾರ. ಮೊದಲಿಗೆ…

3 hours ago

ಓದುಗರ ಪತ್ರ: ಶಾಲೆ ಬಳಿಯೇ ಕಸದ ಗುಡ್ಡೆ!

ನಂಜನಗೂಡು ಬಜಾರ್ ರಸ್ತೆಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆ ಇದೆ. ಇದನ್ನು ದಳವಾಯಿ ಶಾಲೆ…

3 hours ago

ಓದುಗರ ಪತ್ರ: ಬಹುರೂಪಿ ಬಾಬಾಸಾಹೇಬ್… ಅರ್ಥಪೂರ್ಣ ಆಶಯ

ಮೈಸೂರಿನ ರಂಗಾಯಣದಲ್ಲಿ ಜ.೧೧ರಿಂದ ಆರಂಭವಾಗಲಿರುವ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವದ ಧ್ಯೇಯವಾಕ್ಯ ಅತ್ಯಂತ ಸಮಂಜಸವಾಗಿದೆ. ‘ಬಾಬಾಸಾಹೇಬ್ -ಸಮತೆಯೆಡೆಗೆ ನಡಿಗೆ’ ಎಂಬ ಆಶಯದ…

3 hours ago

ದೊಡ್ಡ ಹೆಜ್ಜೂರು ಆಂಜನೇಯಸ್ವಾಮಿ ರಥೋತ್ಸವಕ್ಕೆ ಸಿದ್ಧತೆ

ದಾ.ರಾ.ಮಹೇಶ್ ಜ.೧೫ರಿಂದ ೧೮ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು; ಗಿರಿಜನರು ಹೆಚ್ಚಾಗಿ ಭಾಗಿಯಾಗುವ ಜಾತ್ರೆ ವೀರನಹೊಸಹಳ್ಳಿ: ನಾಗರಹೊಳೆ ರಾಷ್ಟ್ರೀಯ ಉದ್ಯಾನಕ್ಕೆ ಹೊಂದಿಕೊಂಡಿರುವ…

3 hours ago

ಜನವರಿ.21ರಿಂದ ಮುಡುಕುತೊರೆ ಜಾತ್ರಾ ಮಹೋತ್ಸವ ಸಂಭ್ರಮ

ಎಂ.ನಾರಾಯಣ ದೇವಾಲಯದ ಜೀರ್ಣೋದ್ಧಾರ ಹಿನ್ನೆಲೆಯಲ್ಲಿ ಈ ಬಾರಿಯೂ ರಥೋತ್ಸವ ಇಲ್ಲ  ತಿ.ನರಸೀಪುರ: ಕಾವೇರಿ ನದಿ ದಡದಲ್ಲಿರುವ ತಾಲ್ಲೂಕಿನ ಪ್ರಸಿದ್ಧ ಪುಣ್ಯ…

3 hours ago