BREAKING NEWS

ಮಣಿಪುರ ಬೆತ್ತಲೆ ಮೆರವಣಿ: ಇಂಡಿಯಾ ಮೌನವಾಗಿರೊಲ್ಲ: ರಾಹುಲ್ ಗಾಂಧಿ ಆಕ್ರೋಶ

ನವದೆಹಲಿ : ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡುವ ಎರಡು ತಿಂಗಳ ಹಿಂದಿನ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದು ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ.

ಮಣಿಪುರದ ಪರಿಸ್ಥಿತಿ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, “ಭಾರತದ ಪರಿಕಲ್ಪನೆ ಮೇಲೆ ದಾಳಿ ನಡೆಯುತ್ತಿರುವಾಗ ‘ಇಂಡಿಯಾ’ ಸುಮ್ಮನೆ ಮೌನವಾಗಿ ಇರುವುದಿಲ್ಲ” ಎನ್ನುವ ಮೂಲಕ ವಿರೋಧ ಪಕ್ಷಗಳ ಮೈತ್ರಿಕೂಟವು ಮಣಿಪುರ ಹಿಂಸಾಚಾರದ ಕುರಿತು ಸುಮ್ಮನಿರುವುದಿಲ್ಲ ಎಂಬ ಸಂದೇಶ ರವಾನಿಸಿದ್ದಾರೆ.

“ಪ್ರಧಾನಿ ಅವರ ಮೌನ ಹಾಗೂ ನಿಷ್ಕ್ರಿಯತೆಯು ಮಣಿಪುರವನ್ನು ಅರಾಜಕತೆಗೆ ತಳ್ಳಿದೆ. ಮಣಿಪುರದಲ್ಲಿ ಭಾರತದ ಪರಿಕಲ್ಪನೆಯ ಮೇಲೆ ನಡೆಯುತ್ತಿರುವಾಗ ‘ಇಂಡಿಯಾ’ ಮೌನವಾಗಿ ಇರುವುದಿಲ್ಲ” ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ, ವೈರಲ್ ವಿಡಿಯೋ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ. ಮಣಿಪುರದಲ್ಲಿ ನಡೆದ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯದ ಚಿತ್ರಗಳು ಹೃದಯ ವಿದ್ರಾವಕವಾಗಿವೆ ಎಂದಿದ್ದಾರೆ.

“ಮಹಿಳೆಯರ ಮೇಲಿನ ಹಿಂಸಾಚಾರದ ಈ ಭಯಾನಕ ಘಟನೆಯನ್ನು ಎಷ್ಟು ಖಂಡಿಸಿದರೂ ಸಾಲದು. ಸಮಾಜದಲ್ಲಿ ಹಿಂಸಾಚಾರದ ಗರಿಷ್ಠ ಸಂಕಷ್ಟಗಳನ್ನು ಮಹಿಳೆಯರು ಮತ್ತು ಮಕ್ಕಳೇ ಅನುಭವಿಸುತ್ತಾರೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

“ಮಣಿಪುರದಲ್ಲಿ ಶಾಂತಿ ಸ್ಥಾಪಿಸುವ ಪ್ರಯತ್ನಗಳನ್ನು ಹೆಚ್ಚಿಸುವುದರ ಜತೆಗೆ ನಾವು ಹಿಂಸಾಚಾರವನ್ನು ಒಂದೇ ಧ್ವನಿಯಲ್ಲಿ ಖಂಡಿಸಬೇಕಿದೆ. ಕೇಂದ್ರ ಸರ್ಕಾರ, ಮಿ. ಪ್ರಧಾನಿ ಅವರು ಮಣಿಪುರದಲ್ಲಿನ ಹಿಂಸಾತ್ಮಕ ಘಟನೆಗಳ ಕಡೆಗೆ ಏಕೆ ತಮ್ಮ ಕಣ್ಣುಗಳನ್ನು ಕುರುಡಾಗಿಸಿಕೊಂಡಿದ್ದಾರೆ? ಅಂತಹ ಚಿತ್ರಗಳು ಮತ್ತು ಹಿಂಸಾತ್ಮಕ ಘಟನೆಗಳು ಅವರನ್ನು ಕಲಕುವುದಿಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

“ಸಾವಿರಾರು ಸಾವುಗಳಲ್ಲಿ ಮಾನವೀಯತೆ ಸತ್ತಿದೆ! ಮಹಿಳೆಯರು ಅವಮಾನ ಹಾಗೂ ಶೋಷಿತರಾಗುವುದು, ಬೆತ್ತಲೆಯಾಗಿ ಮೆರವಣಿಗೆಯಾಗುವುದನ್ನು ತಡೆಯುವುದು ಈ ಬಿಜೆಪಿ ಸರ್ಕಾರಕ್ಕೆ ಸಾಧ್ಯವಾಗದೆ ಇದ್ದರೆ, ಅದನ್ನು ಸುಮ್ಮನೆ ವಜಾಗೊಳಿಸಬೇಕು. ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ಹೇರುವುದಕ್ಕೆ ಮೋದಿ ಸರ್ಕಾರವನ್ನು ತಡೆಯುತ್ತಿರುವುದು ಏನು?” ಎಂದು ಮಹಿಳಾ ಕಾಂಗ್ರೆಸ್ ಮುಖ್ಯಸ್ಥೆ ನೆಟ್ಟಾ ಡಿಸೋಜಾ ಕಿಡಿಕಾರಿದ್ದಾರೆ.

ಪೊಲೀಸರು ಅಪರಿಚಿತ ಶಸ್ತ್ರಸಜ್ಜಿತ ದುಷ್ಕರ್ಮಿಗಳ ವಿರುದ್ಧ ತೌಬುಲ್ ಜಿಲ್ಲೆಯ ನಾಂಗ್‌ಪೊಕ್ ಸೆಕ್ಮೈ ಪೊಲೀಸ್ ಠಾಣೆಯಲ್ಲಿ ಅಪಹರಣ, ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.
andolanait

Recent Posts

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

5 hours ago

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್…

6 hours ago

ಸಿಡಿಲು ಬಡಿದು ರೈತ ಸಾವು

ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…

6 hours ago

ಟಾಟಾ ಏಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…

7 hours ago

ಒಂದು ವಾರ ವಿದೇಶಕ್ಕೆ ಹಾರಿದ ಪ್ರಧಾನಿ ಮೋದಿ: ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…

8 hours ago

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…

9 hours ago