ನವದೆಹಲಿ : ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡುವ ಎರಡು ತಿಂಗಳ ಹಿಂದಿನ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದು ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ.
ಮಣಿಪುರದ ಪರಿಸ್ಥಿತಿ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, “ಭಾರತದ ಪರಿಕಲ್ಪನೆ ಮೇಲೆ ದಾಳಿ ನಡೆಯುತ್ತಿರುವಾಗ ‘ಇಂಡಿಯಾ’ ಸುಮ್ಮನೆ ಮೌನವಾಗಿ ಇರುವುದಿಲ್ಲ” ಎನ್ನುವ ಮೂಲಕ ವಿರೋಧ ಪಕ್ಷಗಳ ಮೈತ್ರಿಕೂಟವು ಮಣಿಪುರ ಹಿಂಸಾಚಾರದ ಕುರಿತು ಸುಮ್ಮನಿರುವುದಿಲ್ಲ ಎಂಬ ಸಂದೇಶ ರವಾನಿಸಿದ್ದಾರೆ.
“ಪ್ರಧಾನಿ ಅವರ ಮೌನ ಹಾಗೂ ನಿಷ್ಕ್ರಿಯತೆಯು ಮಣಿಪುರವನ್ನು ಅರಾಜಕತೆಗೆ ತಳ್ಳಿದೆ. ಮಣಿಪುರದಲ್ಲಿ ಭಾರತದ ಪರಿಕಲ್ಪನೆಯ ಮೇಲೆ ನಡೆಯುತ್ತಿರುವಾಗ ‘ಇಂಡಿಯಾ’ ಮೌನವಾಗಿ ಇರುವುದಿಲ್ಲ” ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ, ವೈರಲ್ ವಿಡಿಯೋ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ. ಮಣಿಪುರದಲ್ಲಿ ನಡೆದ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯದ ಚಿತ್ರಗಳು ಹೃದಯ ವಿದ್ರಾವಕವಾಗಿವೆ ಎಂದಿದ್ದಾರೆ.
“ಮಹಿಳೆಯರ ಮೇಲಿನ ಹಿಂಸಾಚಾರದ ಈ ಭಯಾನಕ ಘಟನೆಯನ್ನು ಎಷ್ಟು ಖಂಡಿಸಿದರೂ ಸಾಲದು. ಸಮಾಜದಲ್ಲಿ ಹಿಂಸಾಚಾರದ ಗರಿಷ್ಠ ಸಂಕಷ್ಟಗಳನ್ನು ಮಹಿಳೆಯರು ಮತ್ತು ಮಕ್ಕಳೇ ಅನುಭವಿಸುತ್ತಾರೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.
“ಮಣಿಪುರದಲ್ಲಿ ಶಾಂತಿ ಸ್ಥಾಪಿಸುವ ಪ್ರಯತ್ನಗಳನ್ನು ಹೆಚ್ಚಿಸುವುದರ ಜತೆಗೆ ನಾವು ಹಿಂಸಾಚಾರವನ್ನು ಒಂದೇ ಧ್ವನಿಯಲ್ಲಿ ಖಂಡಿಸಬೇಕಿದೆ. ಕೇಂದ್ರ ಸರ್ಕಾರ, ಮಿ. ಪ್ರಧಾನಿ ಅವರು ಮಣಿಪುರದಲ್ಲಿನ ಹಿಂಸಾತ್ಮಕ ಘಟನೆಗಳ ಕಡೆಗೆ ಏಕೆ ತಮ್ಮ ಕಣ್ಣುಗಳನ್ನು ಕುರುಡಾಗಿಸಿಕೊಂಡಿದ್ದಾರೆ? ಅಂತಹ ಚಿತ್ರಗಳು ಮತ್ತು ಹಿಂಸಾತ್ಮಕ ಘಟನೆಗಳು ಅವರನ್ನು ಕಲಕುವುದಿಲ್ಲವೇ?” ಎಂದು ಪ್ರಶ್ನಿಸಿದ್ದಾರೆ.
“ಸಾವಿರಾರು ಸಾವುಗಳಲ್ಲಿ ಮಾನವೀಯತೆ ಸತ್ತಿದೆ! ಮಹಿಳೆಯರು ಅವಮಾನ ಹಾಗೂ ಶೋಷಿತರಾಗುವುದು, ಬೆತ್ತಲೆಯಾಗಿ ಮೆರವಣಿಗೆಯಾಗುವುದನ್ನು ತಡೆಯುವುದು ಈ ಬಿಜೆಪಿ ಸರ್ಕಾರಕ್ಕೆ ಸಾಧ್ಯವಾಗದೆ ಇದ್ದರೆ, ಅದನ್ನು ಸುಮ್ಮನೆ ವಜಾಗೊಳಿಸಬೇಕು. ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ಹೇರುವುದಕ್ಕೆ ಮೋದಿ ಸರ್ಕಾರವನ್ನು ತಡೆಯುತ್ತಿರುವುದು ಏನು?” ಎಂದು ಮಹಿಳಾ ಕಾಂಗ್ರೆಸ್ ಮುಖ್ಯಸ್ಥೆ ನೆಟ್ಟಾ ಡಿಸೋಜಾ ಕಿಡಿಕಾರಿದ್ದಾರೆ.
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…