BREAKING NEWS

ಮಣಿಪುರ ಹಿಂಸಾಚಾರ: ಪ್ರಧಾನಿ ಮೋದಿ ಹೇಳಿಕೆಗೆ ಆಗ್ರಹಿಸಿ ‘ಇಂಡಿಯಾ’ದಿಂದ ಅಹೋರಾತ್ರಿ ಧರಣಿ

ನವದೆಹಲಿ: ಎಎಪಿ ನಾಯಕ ಸಂಜಯ್ ಸಿಂಗ್ ಅಮಾನತು ಖಂಡಿಸಿ ಮತ್ತು ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನಲ್ಲಿ ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿ ಪ್ರತಿಪಕ್ಷಗಳ ಮೈತ್ರಿಕೂಟ ಐಎನ್ ಡಿಎಐ(ಇಂಡಿಯಾ) ಸಂಸತ್ತಿನ ಆವರಣದಲ್ಲಿ ಅಹೋರಾತ್ರಿ ಧರಣಿ ನಡೆಸಲು ಸೋಮವಾರ ನಿರ್ಧರಿಸಿದೆ.

ಇಂದು ಬೆಳಗ್ಗೆ ಕಲಾಪ ಆರಂಭಕ್ಕೂ ಮುನ್ನವೇ ಸಂಸತ್ತಿನ ಗಾಂಧಿ ಪ್ರತಿಮೆಯ ಬಳಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರ ನೇತೃತ್ವದಲ್ಲಿ ಪ್ರತಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಆರಂಭಿಸಿದ್ದು, ಇಂಡಿಯಾ ಮೈತ್ರಿಕೂಟದ ನಾಯಕರು ಅಹೋರಾತ್ರಿ ಧರಣಿ ನಡೆಸಲಿದ್ದಾರೆ ಎಂದು ಹಿರಿಯ ಮುಖಂಡರು ತಿಳಿಸಿದ್ದಾರೆ. ಅಲ್ಲದೆ ಮಂಗಳವಾರವೂ ಪ್ರತಿಭಟನೆ ಮುಂದುವರಿಯುತ್ತದೆ ಎಂದು ಹೇಳಿದ್ದಾರೆ.

ಕಳೆದ ವರ್ಷ ಜುಲೈನಲ್ಲಿ 20 ರಾಜ್ಯಸಭಾ ಸದಸ್ಯರನ್ನು ಅಮಾನತುಗೊಳಿಸಿದ ನಂತರ ಪ್ರತಿಪಕ್ಷಗಳು ಸಂಸತ್ತಿನ ಸಂಕೀರ್ಣದೊಳಗೆ 50 ಗಂಟೆಗಳ ಕಾಲ ಅಹೋರಾತ್ರಿ ಧರಣಿ ನಡೆಸಿದ್ದವು.

ಇದೀಗ ಮುಂಗಾರು ಅಧಿವೇಶನದ ಉಳಿದ ಅವಧಿಗೆ ರಾಜ್ಯಸಭೆಯಿಂದ ಅಮಾನತುಗೊಂಡಿರುವ ಎಎಪಿ ಸಂಸದ ಸಂಜಯ್ ಸಿಂಗ್ ಅವರು ಇಂಡಿಯಾದ ಅಹೋರಾತ್ರಿ ಧರಣಿಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಸಂಜಯ್ ಸಿಂಗ್ ಅವರ ಪತ್ನಿ ಈಗಾಗಲೇ ಸ್ಥಳಕ್ಕೆ ಅಗತ್ಯ ವಸ್ತುಗಳನ್ನು ತಂದಿದ್ದಾರೆ.

ಎಲ್ಲ ಪಕ್ಷಗಳು ತಮ್ಮ ನಾಯಕರ ಪಟ್ಟಿಯನ್ನು ಸಿದ್ಧಪಡಿಸಿದ್ದು, ಅವರು ಅಹೋರಾತ್ರಿ ಧರಣಿಯಲ್ಲಿ ಭಾಗವಹಿಸುತ್ತಾರೆ. ಪಕ್ಷಗಳಲ್ಲಿ ಸಂಪೂರ್ಣ ಒಗ್ಗಟ್ಟು ಇದೆ. ಸಿಂಗ್ ಅವರ ಅಮಾನತನ್ನು ಖಂಡಿಸಲಾಗುತ್ತಿದೆ. ಆದರೆ ಇದು ರಾಜ್ಯಸಭೆಯಲ್ಲಾಗಲಿ ಲೋಕಸಭೆಯಲ್ಲಾಗಲಿ ಮಣಿಪುರದ ಬಗ್ಗೆ ಪ್ರಧಾನಿ ಮೋದಿ ಮಾತನಾಡಬೇಕೆಂದು ಒತ್ತಾಯಿಸುವ ಪ್ರತಿಭಟನೆಯಾಗಿದೆ ಎಂದು ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮುಕ್ತ ಚರ್ಚೆಗೆ ಅವಕಾಶ ನೀಡಬೇಕು ಎಂಬ ಬೇಡಿಕೆಗೆ ಇಂಡಿಯಾ ಮೈತ್ರಿಕೂಟದ ಎಲ್ಲಾ ನಾಯಕರು ಅಚಲವಾಗಿದ್ದಾರೆ ಮತ್ತು ಅವರನ್ನು ಸಮಾಧಾನಪಡಿಸುವ ಸರ್ಕಾರದ ಎಲ್ಲಾ ಪ್ರಯತ್ನಗಳನ್ನು ಹಲವು ಪಕ್ಷಗಳು ತಿರಸ್ಕರಿಸಿವೆ ಎಂದು ಮೂಲಗಳು ತಿಳಿಸಿವೆ.

andolanait

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

4 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

4 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

4 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

15 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

16 hours ago