BREAKING NEWS

ಮಣಿಪುರ ಹಿಂಸಾಚಾರ: ಸಿಎಂ’ ಬಿರೇನ್ ಸಿಂಗ್ ವಜಾಗೊಳಿಸುವಂತೆ ಖರ್ಗೆ ಆಗ್ರಹ

ನವದೆಹಲಿ: ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬುಧವಾರ ತೀವ್ರ ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್ ಅಧ್ಯಕ್ಷ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು, ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಅಸಮರ್ಥ ಮುಖ್ಯಮಂತ್ರಿಯನ್ನು ಮೊದಲು ವಜಾಗೊಳಿಸುವಂತೆ ಒತ್ತಾಯಿಸಿದರು.

ಸುಂದರ ಮಣಿಪುರ ರಾಜ್ಯವನ್ನು ‘ಯುದ್ಧಭೂಮಿ’ಯನ್ನಾಗಿ ಮಾಡಲಾಗಿದೆ ಎಂದು ಖರ್ಗೆ ಆರೋಪಿಸಿದ್ದಾರೆ.

“147 ದಿನಗಳಿಂದ ಮಣಿಪುರದ ಜನ ನರಳುತ್ತಿದ್ದಾರೆ. ಆದರೆ ಪ್ರಧಾನಿ ಮೋದಿಗೆ ಆ ರಾಜ್ಯಕ್ಕೆ ಭೇಟಿ ನೀಡಲು ಸಮಯವಿಲ್ಲ. ಈ ಹಿಂಸಾಚಾರದಲ್ಲಿ ವಿದ್ಯಾರ್ಥಿಗಳು ಗುರಿಯಾಗುತ್ತಿರುವ ಭಯಾನಕ ಚಿತ್ರಗಳು ಮತ್ತೊಮ್ಮೆ ಇಡೀ ರಾಷ್ಟ್ರವನ್ನು ಬೆಚ್ಚಿಬೀಳಿಸಿದೆ. ಈ ಹಿಂಸಾಚಾರದಲ್ಲಿ ಮಹಿಳೆಯರು ಮತ್ತು ಮಕ್ಕಳನ್ನು ಅಸ್ತ್ರವಾಗಿಸಿಕೊಳ್ಳಲಾಗುತ್ತಿದೆ” ಎಂದು ಖರ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

“ಸುಂದರವಾದ ಮಣಿಪುರ ರಾಜ್ಯ ರಣರಂಗವಾಗಿ ಮಾರ್ಪಟ್ಟಿದೆ, ಎಲ್ಲದಕ್ಕೂ ಬಿಜೆಪಿಯೇ ಕಾರಣ! ಬಿಜೆಪಿಯ ಅಸಮರ್ಥ ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರನ್ನು ಪ್ರಧಾನಿ ಮೋದಿ ವಜಾಗೊಳಿಸಿಬೇಕು. ಯಾವುದೇ ಪ್ರಕ್ಷುಬ್ಧತೆಯನ್ನು ನಿಯಂತ್ರಿಸಲು ತೆಗೆದುಕೊಳ್ಳಬೇಕಾದ ಮೊದಲ ಕ್ರಮ ಇದಾಗಿದೆ” ಎಂದು ಖರ್ಗೆ ಹೇಳಿದ್ದಾರೆ.

ಮಣಿಪುರದಲ್ಲಿ ಇಬ್ಬರು ಯುವಕರ ಮೃತ ದೇಹಗಳನ್ನು ತೋರಿಸುವ ವಿಡಿಯೋ ವೈರಲ್ ಆದ ನಂತರ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಇಂಟರ್ ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

10 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

10 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

10 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

10 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

10 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

10 hours ago