BREAKING NEWS

ಮಣಿಪುರ ಹಿಂಸಾಚಾರ: ಪ್ರಧಾನಿ ಹೇಳಿಕೆಗೆ ಆಗ್ರಹಿಸಿ ಪ್ರತಿಪಕ್ಷಗಳ ಪ್ರತಿಭಟನೆ

ನವದೆಹಲಿ: ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರು ಸಂಸತ್ತಿನಲ್ಲಿ ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿ ಪ್ರತಿಪಕ್ಷಗಳ ಸದಸ್ಯರು ಪಟ್ಟುಬಿಡದೆ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಲೋಕಸಭೆಯ ಕಲಾಪವನ್ನು ಮಂಗಳವಾರಕ್ಕೆ ಮುಂದೂಡಲಾಗಿದೆ.

ಇಂದು ಕಲಾಪ ಆರಂಭಕ್ಕೂ ಮುನ್ನವೇ ಸಂಸತ್ತಿನ ಗಾಂಧಿ ಪ್ರತಿಮೆಯ ಬಳಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರ ನೇತೃತ್ವದಲ್ಲಿ ಪ್ರತಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಿದವು.

ಈ ವೇಳೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಪ್ರಧಾನಿ ಮೋದಿ ಅವರು ಮಣಿಪುರ ಹಿಂಸಾಚಾರದ ಬಗ್ಗೆ ಸಂಸತ್ತಿನಲ್ಲಿ ಸಮಗ್ರ ಹೇಳಿಕೆ ನೀಡುವುದು ಅವರ ಕರ್ತವ್ಯ ಎಂದು ಹೇಳಿದರು.

ಲೋಕಸಭೆ ಕಲಾಪ ಆರಂಭವಾದ ನಂತರವೂ ಮೋದಿ ಹೇಳಿಕೆಗೆ ಆಗ್ರಹಿಸಿ ಪ್ರತಿಪಕ್ಷಗಳ ಸದಸ್ಯರು ನಿರಂತರ ಪ್ರತಿಭಟನೆ ನಡೆಸಿದರು. ಹೀಗಾಗಿ ಸ್ಪೀಕರ್ ಓಂ ಬಿರ್ಲಾ ಅವರು ಲೋಕಸಭೆಯ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಿದರು.

ಮತ್ತೆ ಸದನ ಸಮಾವೇಶಗೊಳ್ಳುತ್ತಿದ್ದಂತೆಯೇ, ವಿರೋಧಪಕ್ಷಗಳ ಸದಸ್ಯರು ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗುತ್ತಾ ಸ್ಪೀಕರ್ ಪೀಠದತ್ತ ಧಾವಿಸಿ ಪ್ರತಿಭಟನೆಯನ್ನು ಮುಂದುವರೆಸಿದರು.

ಈ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸದನದಲ್ಲಿ ಮಣಿಪುರ ಹಿಂಸಾಚಾರದ ಕುರಿತು ಚರ್ಚಿಸುವುದಾಗಿ ಭರವಸೆ ನೀಡಿದರು. ಇದಕ್ಕೆ ಒಪ್ಪದ ಪ್ರತಿಪಕ್ಷಗಳು ಧರಣಿ ಮುಂದುವರೆಸಿದ ಹಿನ್ನೆಲೆಯಲ್ಲಿ ಸ್ಪೀಕರ್ ಕಲಾಪವನ್ನು ನಾಳೆಗೆ ಮುಂದೂಡಿದರು.

andolanait

Recent Posts

ಕೊಲೆ ಪ್ರಕರಣ | ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್‌ ಮೊರೆ ಹೋದ ಶಾಸಕ ವಿನಯ್‌ ಕುಲಕರ್ಣಿ

ಬೆಂಗಳೂರು : ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಶಾಸಕ ವಿನಯ್…

36 mins ago

ಅಪರಿಚಿತ ವ್ಯಕ್ತಿಯ ಕೊಲೆ ಜಾಡು ಪತ್ತೆ!

ಮೈಸೂರು : ನಗರದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಡೆದಿದ್ದ ವ್ಯಕ್ತಿಯೊಬ್ಬರ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಮದ್ಯ ಸೇವಿಸಿ ಬಂದು ಕಿರುಕುಳ…

50 mins ago

ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಏಕಾಏಕಿ ಕಾಡಾನೆ ದಾಳಿ

ರಾಮನಗರ : ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ಸಂಗಮ ಅರಣ್ಯ ಪ್ರದೇಶದ ಮೇಕೆದಾಟು…

2 hours ago

ಕೊಡಗು | ಜಿಲ್ಲೆಯಲ್ಲಿ 2-3 ಸಾವಿರ ಅನಧಿಕೃತ ಹೋಂಸ್ಟೇ!

ಅನಧಿಕೃತ ಹೋಂಸ್ಟೇಗಳ ವಿರುದ್ಧ ಕ್ರಮಕ್ಕೆ ಒತ್ತಾಯ ; ವಿದೇಶಿ ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮಕ್ಕೆ ಆಗ್ರಹ  ನವೀನ್…

2 hours ago

ಕೋಟೆ | ರೆಸಾರ್ಟ್‌, ಹೋಂ ಸ್ಟೇಗಳ ಮೇಲೆ ಹೆಚ್ಚಿನ ನಿಗಾ

ಸರ್ಕಾರದ ನಿಯಮಗಳನ್ನು ಪಾಲನೆ ಮಾಡುತ್ತಿರುವ ಕುರಿತು ಪರಿಶೀಲಿಸುತ್ತಿರುವ ಅಧಿಕಾರಿಗಳು ಎಚ್.ಡಿ.ಕೋಟೆ : ಕಬಿನಿ ಜಲಾಶಯದ ಹಿನ್ನೀರು ಮತ್ತು ನಾಗರಹೊಳೆ, ಬಂಡೀಪುರ…

2 hours ago

ಆಂದೋಲನ ದಿನಪತ್ರಿಕೆಯ ಗಾಂಧಿ ಅಭಿಯಾನ | ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ಅಸ್ಪೃಶ್ಯರನ್ನು ಅವರ ನೋವುಗಳಿಂದ ಮುಕ್ತಗೊಳಿಸಲು ಶ್ರಮಿಸಿದ ಮಹಾತ್ಮ ಯಾವುದೇ ಸಮಸ್ಯೆಗೆ ಆಯುಧಗಳು ಮಾತ್ರ ಉತ್ತರವಲ್ಲ ಎಂದು ಮಹಾತ್ಮ ಗಾಂಧಿ ಯಾವಾಗಲೂ…

3 hours ago