BREAKING NEWS

ಮಣಿಪುರ ಹಿಂಸಾಚಾರ: ಕೇಂದ್ರ ಸಚಿವ ಆರ್‌ಕೆ ರಂಜನ್ ನಿವಾಸದ ಮೇಲೆ ಪೆಟ್ರೋಲ್ ಬಾಂಬ್ ದಾಳಿ

ಇಂಫಾಲ: ಗುರುವಾರ ತಡರಾತ್ರಿ ಇಂಫಾಲ್‌ನ ಕೊಂಗ್ಬಾದಲ್ಲಿರುವ ಕೇಂದ್ರ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಆರ್‌ಕೆ ರಂಜನ್ ಸಿಂಗ್ ಅವರ ನಿವಾಸಕ್ಕೆ ಗುಂಪೊಂದು ಬೆಂಕಿ ಹಚ್ಚಿದೆ ಎಂದು ಮಣಿಪುರ ಸರ್ಕಾರ ಖಚಿತಪಡಿಸಿದೆ.

ಎಎನ್‌ಐ ಜೊತೆ ಮಾತನಾಡಿದ ಸಿಂಗ್, ‘ನಾನು ಸದ್ಯ ಅಧಿಕೃತ ಕೆಲಸಕ್ಕಾಗಿ ಕೇರಳದಲ್ಲಿದ್ದೇನೆ. ಅದೃಷ್ಟವಶಾತ್, ನಿನ್ನೆ ರಾತ್ರಿ ನನ್ನ ಇಂಫಾಲ್ ಮನೆಯಲ್ಲಿ ಯಾರೂ ಗಾಯಗೊಂಡಿಲ್ಲ. ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್‌ಗಳೊಂದಿಗೆ ಬಂದಿದ್ದರು ಮತ್ತು ನನ್ನ ಮನೆಯ ನೆಲ ಮಹಡಿ ಮತ್ತು ಮೊದಲ ಮಹಡಿಗೆ ಹಾನಿಯಾಗಿದೆ’ ಎಂದಿದ್ದಾರೆ.

ಈಶಾನ್ಯ ರಾಜ್ಯದಲ್ಲಿ ಶಾಂತಿಗಾಗಿ ಮನವಿ ಮಾಡಿದ ಅವರು, ‘ನನ್ನ ತವರು ರಾಜ್ಯದಲ್ಲಿ ಏನಾಗುತ್ತಿದೆ ಎಂಬುದನ್ನು ನೋಡುವುದು ತುಂಬಾ ದುಃಖಕರವಾಗಿದೆ. ನಾನು ಇನ್ನೂ ಶಾಂತಿಗಾಗಿ ಮನವಿ ಮಾಡುವುದನ್ನು ಮುಂದುವರಿಸುತ್ತೇನೆ. ಈ ರೀತಿಯ ಹಿಂಸಾಚಾರದಲ್ಲಿ ತೊಡಗುವವರು ಸಂಪೂರ್ಣವಾಗಿ ಅಮಾನವೀಯರು’ ಎಂದರು.

ಈ ಪ್ರದೇಶದಲ್ಲಿ ಕರ್ಫ್ಯೂ ಜಾರಿಯಲ್ಲಿದ್ದರೂ ಜನರ ಗುಂಪು ಸಚಿವರ ನಿವಾಸಕ್ಕೆ ಪ್ರವೇಶಿಸುವಲ್ಲಿ ಯಶಸ್ವಿಯಾಗಿದೆ. ಮಣಿಪುರದಲ್ಲಿ ಸಚಿವರೊಬ್ಬರ ಮನೆಗೆ ಬೆಂಕಿ ಹಚ್ಚಿರುವುದು ಇದು ಎರಡನೇ ಬಾರಿ. ಹೆಚ್ಚಿನ ಸಂಖ್ಯೆಯಲ್ಲಿದ್ದ ಗುಂಪು ಆವರಣದೊಳಗೆ ಪ್ರವೇಶಿಸುವುದನ್ನು ಭದ್ರತಾ ಸಿಬ್ಬಂದಿ ತಡೆಯಲು ಸಾಧ್ಯವಾಗಲಿಲ್ಲ. ಇದುವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎನ್ನಲಾಗಿದೆ.

andolanait

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

8 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

8 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

9 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

9 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

21 hours ago