BREAKING NEWS

ಮಣಿಪುರ ಹಿಂಸಾಚಾರ: ಕೇಂದ್ರ ಸಚಿವ ಆರ್‌ಕೆ ರಂಜನ್ ನಿವಾಸದ ಮೇಲೆ ಪೆಟ್ರೋಲ್ ಬಾಂಬ್ ದಾಳಿ

ಇಂಫಾಲ: ಗುರುವಾರ ತಡರಾತ್ರಿ ಇಂಫಾಲ್‌ನ ಕೊಂಗ್ಬಾದಲ್ಲಿರುವ ಕೇಂದ್ರ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಆರ್‌ಕೆ ರಂಜನ್ ಸಿಂಗ್ ಅವರ ನಿವಾಸಕ್ಕೆ ಗುಂಪೊಂದು ಬೆಂಕಿ ಹಚ್ಚಿದೆ ಎಂದು ಮಣಿಪುರ ಸರ್ಕಾರ ಖಚಿತಪಡಿಸಿದೆ.

ಎಎನ್‌ಐ ಜೊತೆ ಮಾತನಾಡಿದ ಸಿಂಗ್, ‘ನಾನು ಸದ್ಯ ಅಧಿಕೃತ ಕೆಲಸಕ್ಕಾಗಿ ಕೇರಳದಲ್ಲಿದ್ದೇನೆ. ಅದೃಷ್ಟವಶಾತ್, ನಿನ್ನೆ ರಾತ್ರಿ ನನ್ನ ಇಂಫಾಲ್ ಮನೆಯಲ್ಲಿ ಯಾರೂ ಗಾಯಗೊಂಡಿಲ್ಲ. ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್‌ಗಳೊಂದಿಗೆ ಬಂದಿದ್ದರು ಮತ್ತು ನನ್ನ ಮನೆಯ ನೆಲ ಮಹಡಿ ಮತ್ತು ಮೊದಲ ಮಹಡಿಗೆ ಹಾನಿಯಾಗಿದೆ’ ಎಂದಿದ್ದಾರೆ.

ಈಶಾನ್ಯ ರಾಜ್ಯದಲ್ಲಿ ಶಾಂತಿಗಾಗಿ ಮನವಿ ಮಾಡಿದ ಅವರು, ‘ನನ್ನ ತವರು ರಾಜ್ಯದಲ್ಲಿ ಏನಾಗುತ್ತಿದೆ ಎಂಬುದನ್ನು ನೋಡುವುದು ತುಂಬಾ ದುಃಖಕರವಾಗಿದೆ. ನಾನು ಇನ್ನೂ ಶಾಂತಿಗಾಗಿ ಮನವಿ ಮಾಡುವುದನ್ನು ಮುಂದುವರಿಸುತ್ತೇನೆ. ಈ ರೀತಿಯ ಹಿಂಸಾಚಾರದಲ್ಲಿ ತೊಡಗುವವರು ಸಂಪೂರ್ಣವಾಗಿ ಅಮಾನವೀಯರು’ ಎಂದರು.

ಈ ಪ್ರದೇಶದಲ್ಲಿ ಕರ್ಫ್ಯೂ ಜಾರಿಯಲ್ಲಿದ್ದರೂ ಜನರ ಗುಂಪು ಸಚಿವರ ನಿವಾಸಕ್ಕೆ ಪ್ರವೇಶಿಸುವಲ್ಲಿ ಯಶಸ್ವಿಯಾಗಿದೆ. ಮಣಿಪುರದಲ್ಲಿ ಸಚಿವರೊಬ್ಬರ ಮನೆಗೆ ಬೆಂಕಿ ಹಚ್ಚಿರುವುದು ಇದು ಎರಡನೇ ಬಾರಿ. ಹೆಚ್ಚಿನ ಸಂಖ್ಯೆಯಲ್ಲಿದ್ದ ಗುಂಪು ಆವರಣದೊಳಗೆ ಪ್ರವೇಶಿಸುವುದನ್ನು ಭದ್ರತಾ ಸಿಬ್ಬಂದಿ ತಡೆಯಲು ಸಾಧ್ಯವಾಗಲಿಲ್ಲ. ಇದುವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎನ್ನಲಾಗಿದೆ.

andolanait

Recent Posts

ರಾಜ್ಯದಲ್ಲಿ ವಸತಿ ರಹಿತರಿಗೆ 5 ಲಕ್ಷ ನಿವೇಶನ : ಸಿಎಂ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ 5 ಲಕ್ಷ ನಿವೇಶನ ಹಂಚಿಕೆಗೆ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದ…

8 hours ago

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

11 hours ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

12 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

12 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

18 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

18 hours ago