BREAKING NEWS

ಮಣಿಪುರ ಹಿಂಸಾಚಾರ : ಶಾಲೆಗೆ ಬೆಂಕಿ, ಗುಂಡಿನ ಕಾಳಗ

ಗುವಾಹತಿ : ಮಣಿಪುರದ ಹಿಂಸಾಪೀಡಿತ ಜಿಲ್ಲೆಗಳಲ್ಲಿ ಶಾಲೆಗಳ ಮರು ಆರಂಭಕ್ಕೆ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಮತ್ತೆ ಹೊಸ ಸವಾಲು ಎದುರಾಗಿದೆ. ಚುರಚಂದಪುರ ಮತ್ತು ಬಿಷ್ಣುಪುರ ಗಡಿಯ ಶಾಲಾ ಕಟ್ಟಡಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಇದೇ ಪ್ರದೇಶದಲ್ಲಿ ಎರಡು ಗುಂಪುಗಳ ನಡುವೆ ಗುಂಡಿನ ಕಾಳಗ ಕೂಡಾ ನಡೆದ ಬಗ್ಗೆ ವರದಿಯಾಗಿದೆ.

ಬಿಷ್ಣುಪುರ ಜಿಲ್ಲೆಯ ಕ್ವಾಟ್ಕಾದಲ್ಲಿ ಸಂಭವಿಸಿದ ಹಿಂಸಾಚಾರದಲ್ಲಿ ಗುಂಡೇಟಿನಿಂದ ಮಹಿಳೆ ಗಾಯಗೊಂಡಿದ್ದಾರೆ. ರಾಜ್ಯದಲ್ಲಿ ಪರಿಸ್ಥಿತಿ ಮತ್ತೆ ಬಿಗುಡಾಯಿಸಿದ್ದು, ರವಿವಾರದ ಮುಂಜಾನೆವರೆಗೂ ಗುಂಡಿನ ಕಾಳಗ ನಡೆದಿದೆ. ಪರಿಸ್ಥಿತಿ ನಿಯಂತ್ರಣಕ್ಕಾಗಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಶಾಲೆಗೆ ಬೆಂಕಿ ಹಚ್ಚಿದ ಘಟನೆಯಲ್ಲಿ ಸುಮಾರು 1.5 ಕೋಟಿ ರೂಪಾಯಿ ಮೌಲ್ಯದ ಸ್ವತ್ತುಗಳು ಭಸ್ಮವಾಗಿವೆ. ಪುಸ್ತಕ, ಪೀಠೋಪಕರಣಗಳು ಮತ್ತು ಪಾತ್ರೆ ಪಗಡೆಗಳು ಸುಟ್ಟುಹೋಗಿವೆ ಎಂದು ವಸತಿ ಶಾಲೆಯ ಆಡಳಿತ ಮಂಡಳಿ ಹೇಳಿದೆ. ರಾಜ್ಯದಲ್ಲಿ ಮೇ 3ರಂದು ಹಿಂಸಾಚಾರ ಆರಂಭವಾದ ಬಳಿಕ ಶಾಲೆ ನಿರ್ಜನ ಪ್ರದೇಶವಾಗಿತ್ತು. ದಾಳಿಯ ಭೀತಿಯಿಂದ ವಾಚ್ ಮನ್ ಹಾಗೂ ಆತನ ಕುಟುಂಬ ಎರಡು ವಾರದ ಹಿಂದೆ ಪಲಾಯನ ಮಾಡಿತ್ತು.

“ಅದೃಷ್ಟವಶಾತ್ ಶಾಲೆಯ ಮೊದಲ ಮಹಡಿಯಲ್ಲಿ ಯಾರೂ ಇರಲಿಲ್ಲ. ನಮ್ಮ ಕ್ಯಾಂಪಸ್ ಬಳಿ ಹಲವು ಮನೆಗಳಿಗೆ ಬೆಂಕಿ ಹಚ್ಚಿದ ಹಿನ್ನೆಲೆಯಲ್ಲಿ ಶಾಲೆಯ ಮೇಲೆಯೂ ದಾಳಿಯಾಬಹುದು ಎಂಬ ನಿರೀಕ್ಷೆ ಇತ್ತು” ಎಂದು ಚಿಲ್ಡ್ರನ್ ಟ್ರೆಶರ್ ಹೈಸ್ಕೂಲ್ನ ಸಂಸ್ಥಾಪಕ ಲಿಯಾನ್ ಖೋ ಥಮ್ಗ್ ವೈಪಿ ಹೇಳಿದ್ದಾರೆ.

andolanait

Recent Posts

ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ : ತ್ವರಿತ ಸೇವೆಗೆ ಕ್ರಮ

ಬೆಂಗಳೂರು : ಇ-ಸ್ವತ್ತು 2.0 ತಂತ್ರಾಂಶದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ…

1 hour ago

‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ ಹೆಜ್ಜೆ : ಪೋಸ್ಟರ್ ಬಿಡುಗಡೆ ಮಾಡಿದ ಗೃಹ ಸಚಿವ

ಮೈಸೂರು : ಡ್ರಗ್ಸ್ ಮುಕ್ತ ಮೈಸೂರು ಮಾಡಲು ಮುಂದಾಗಿರುವ ಮೈಸೂರು ನಗರ ಪೊಲೀಸರು ‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ…

2 hours ago

ರಂಗನತಿಟ್ಟು ಬಳಿ NH-275 ಹೆದ್ದಾರಿ : ವನ್ಯಜೀವಿ ಸುರಕ್ಷತೆಗೆ ನಿರ್ದೇಶನ

ಮಂಡ್ಯ : ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್‌ಎಚ್ 275ರ ವಿಸ್ತೃತ ಮಾರ್ಗವಾದ ಬೆಂಗಳೂರು-ಕುಶಾಲನಗರ ಹೆದ್ದಾರಿಯು ರಂಗನತಿಟ್ಟು ಪಕ್ಷಿಧಾಮದ…

2 hours ago

ಕಿಡಿಗೇಡಿಗಳಿಂದ ಬೆಂಕಿ : ಐದಾರು ಎಕರೆ ಭೂ ಪ್ರದೇಶಕ್ಕೆ ಹಾನಿ

ಹಲಗೂರು : ಪ್ರತ್ಯೇಕ ಎರಡು ಕಡೆಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಐದಾರು ಎಕರೆ ಭೂ ಪ್ರದೇಶದಲ್ಲಿ ಸಣ್ಣಪುಟ್ಟ ಗಿಡಗಳು ಸುಟ್ಟು…

3 hours ago

ಮೈಸೂರು ಮೃಗಾಲಯದ ಜೀಬ್ರಾ ʼಪ್ರಾಚಿʼ ಸಾವು

ಮೈಸೂರು : ಶ್ರೀ  ಚಾಮರಾಜೇಂದ್ರ ಮೃಗಾಲಯದ ಹೆಣ್ಣು ಜೀಬ್ರಾ ‘ಪ್ರಾಚಿ’ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ 11ರ ಸುಮಾರಿಗೆ ಸಾವನ್ನಪ್ಪಿದೆ. ಅದಕ್ಕೆ…

3 hours ago

ಭಾರತ-ಯುಎಸ್ ವ್ಯಾಪಾರ ಒಪ್ಪಂದ ಅಧಿಕೃತ ; ಶೇ.18ಕ್ಕೆ ಸುಂಕ ಇಳಿಕೆ

ವಾಷಿಂಗ್ಟನ್ : ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಚೌಕಟ್ಟನ್ನು ತಲುಪಿವೆ ಎಂದು ಘೋಷಿಸಿವೆ. ಇದರ ಅಡಿಯಲ್ಲಿ ಭಾರತ…

4 hours ago