BREAKING NEWS

ಮಣಿಪುರ ಹಿಂಸಾಚಾರ : ಶಾಲೆಗೆ ಬೆಂಕಿ, ಗುಂಡಿನ ಕಾಳಗ

ಗುವಾಹತಿ : ಮಣಿಪುರದ ಹಿಂಸಾಪೀಡಿತ ಜಿಲ್ಲೆಗಳಲ್ಲಿ ಶಾಲೆಗಳ ಮರು ಆರಂಭಕ್ಕೆ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಮತ್ತೆ ಹೊಸ ಸವಾಲು ಎದುರಾಗಿದೆ. ಚುರಚಂದಪುರ ಮತ್ತು ಬಿಷ್ಣುಪುರ ಗಡಿಯ ಶಾಲಾ ಕಟ್ಟಡಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಇದೇ ಪ್ರದೇಶದಲ್ಲಿ ಎರಡು ಗುಂಪುಗಳ ನಡುವೆ ಗುಂಡಿನ ಕಾಳಗ ಕೂಡಾ ನಡೆದ ಬಗ್ಗೆ ವರದಿಯಾಗಿದೆ.

ಬಿಷ್ಣುಪುರ ಜಿಲ್ಲೆಯ ಕ್ವಾಟ್ಕಾದಲ್ಲಿ ಸಂಭವಿಸಿದ ಹಿಂಸಾಚಾರದಲ್ಲಿ ಗುಂಡೇಟಿನಿಂದ ಮಹಿಳೆ ಗಾಯಗೊಂಡಿದ್ದಾರೆ. ರಾಜ್ಯದಲ್ಲಿ ಪರಿಸ್ಥಿತಿ ಮತ್ತೆ ಬಿಗುಡಾಯಿಸಿದ್ದು, ರವಿವಾರದ ಮುಂಜಾನೆವರೆಗೂ ಗುಂಡಿನ ಕಾಳಗ ನಡೆದಿದೆ. ಪರಿಸ್ಥಿತಿ ನಿಯಂತ್ರಣಕ್ಕಾಗಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಶಾಲೆಗೆ ಬೆಂಕಿ ಹಚ್ಚಿದ ಘಟನೆಯಲ್ಲಿ ಸುಮಾರು 1.5 ಕೋಟಿ ರೂಪಾಯಿ ಮೌಲ್ಯದ ಸ್ವತ್ತುಗಳು ಭಸ್ಮವಾಗಿವೆ. ಪುಸ್ತಕ, ಪೀಠೋಪಕರಣಗಳು ಮತ್ತು ಪಾತ್ರೆ ಪಗಡೆಗಳು ಸುಟ್ಟುಹೋಗಿವೆ ಎಂದು ವಸತಿ ಶಾಲೆಯ ಆಡಳಿತ ಮಂಡಳಿ ಹೇಳಿದೆ. ರಾಜ್ಯದಲ್ಲಿ ಮೇ 3ರಂದು ಹಿಂಸಾಚಾರ ಆರಂಭವಾದ ಬಳಿಕ ಶಾಲೆ ನಿರ್ಜನ ಪ್ರದೇಶವಾಗಿತ್ತು. ದಾಳಿಯ ಭೀತಿಯಿಂದ ವಾಚ್ ಮನ್ ಹಾಗೂ ಆತನ ಕುಟುಂಬ ಎರಡು ವಾರದ ಹಿಂದೆ ಪಲಾಯನ ಮಾಡಿತ್ತು.

“ಅದೃಷ್ಟವಶಾತ್ ಶಾಲೆಯ ಮೊದಲ ಮಹಡಿಯಲ್ಲಿ ಯಾರೂ ಇರಲಿಲ್ಲ. ನಮ್ಮ ಕ್ಯಾಂಪಸ್ ಬಳಿ ಹಲವು ಮನೆಗಳಿಗೆ ಬೆಂಕಿ ಹಚ್ಚಿದ ಹಿನ್ನೆಲೆಯಲ್ಲಿ ಶಾಲೆಯ ಮೇಲೆಯೂ ದಾಳಿಯಾಬಹುದು ಎಂಬ ನಿರೀಕ್ಷೆ ಇತ್ತು” ಎಂದು ಚಿಲ್ಡ್ರನ್ ಟ್ರೆಶರ್ ಹೈಸ್ಕೂಲ್ನ ಸಂಸ್ಥಾಪಕ ಲಿಯಾನ್ ಖೋ ಥಮ್ಗ್ ವೈಪಿ ಹೇಳಿದ್ದಾರೆ.

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

2 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

3 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

4 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

7 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

8 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

8 hours ago