ಗುವಾಹತಿ : ಮಣಿಪುರದ ಹಿಂಸಾಪೀಡಿತ ಜಿಲ್ಲೆಗಳಲ್ಲಿ ಶಾಲೆಗಳ ಮರು ಆರಂಭಕ್ಕೆ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಮತ್ತೆ ಹೊಸ ಸವಾಲು ಎದುರಾಗಿದೆ. ಚುರಚಂದಪುರ ಮತ್ತು ಬಿಷ್ಣುಪುರ ಗಡಿಯ ಶಾಲಾ ಕಟ್ಟಡಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಇದೇ ಪ್ರದೇಶದಲ್ಲಿ ಎರಡು ಗುಂಪುಗಳ ನಡುವೆ ಗುಂಡಿನ ಕಾಳಗ ಕೂಡಾ ನಡೆದ ಬಗ್ಗೆ ವರದಿಯಾಗಿದೆ.
ಬಿಷ್ಣುಪುರ ಜಿಲ್ಲೆಯ ಕ್ವಾಟ್ಕಾದಲ್ಲಿ ಸಂಭವಿಸಿದ ಹಿಂಸಾಚಾರದಲ್ಲಿ ಗುಂಡೇಟಿನಿಂದ ಮಹಿಳೆ ಗಾಯಗೊಂಡಿದ್ದಾರೆ. ರಾಜ್ಯದಲ್ಲಿ ಪರಿಸ್ಥಿತಿ ಮತ್ತೆ ಬಿಗುಡಾಯಿಸಿದ್ದು, ರವಿವಾರದ ಮುಂಜಾನೆವರೆಗೂ ಗುಂಡಿನ ಕಾಳಗ ನಡೆದಿದೆ. ಪರಿಸ್ಥಿತಿ ನಿಯಂತ್ರಣಕ್ಕಾಗಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಶಾಲೆಗೆ ಬೆಂಕಿ ಹಚ್ಚಿದ ಘಟನೆಯಲ್ಲಿ ಸುಮಾರು 1.5 ಕೋಟಿ ರೂಪಾಯಿ ಮೌಲ್ಯದ ಸ್ವತ್ತುಗಳು ಭಸ್ಮವಾಗಿವೆ. ಪುಸ್ತಕ, ಪೀಠೋಪಕರಣಗಳು ಮತ್ತು ಪಾತ್ರೆ ಪಗಡೆಗಳು ಸುಟ್ಟುಹೋಗಿವೆ ಎಂದು ವಸತಿ ಶಾಲೆಯ ಆಡಳಿತ ಮಂಡಳಿ ಹೇಳಿದೆ. ರಾಜ್ಯದಲ್ಲಿ ಮೇ 3ರಂದು ಹಿಂಸಾಚಾರ ಆರಂಭವಾದ ಬಳಿಕ ಶಾಲೆ ನಿರ್ಜನ ಪ್ರದೇಶವಾಗಿತ್ತು. ದಾಳಿಯ ಭೀತಿಯಿಂದ ವಾಚ್ ಮನ್ ಹಾಗೂ ಆತನ ಕುಟುಂಬ ಎರಡು ವಾರದ ಹಿಂದೆ ಪಲಾಯನ ಮಾಡಿತ್ತು.
“ಅದೃಷ್ಟವಶಾತ್ ಶಾಲೆಯ ಮೊದಲ ಮಹಡಿಯಲ್ಲಿ ಯಾರೂ ಇರಲಿಲ್ಲ. ನಮ್ಮ ಕ್ಯಾಂಪಸ್ ಬಳಿ ಹಲವು ಮನೆಗಳಿಗೆ ಬೆಂಕಿ ಹಚ್ಚಿದ ಹಿನ್ನೆಲೆಯಲ್ಲಿ ಶಾಲೆಯ ಮೇಲೆಯೂ ದಾಳಿಯಾಬಹುದು ಎಂಬ ನಿರೀಕ್ಷೆ ಇತ್ತು” ಎಂದು ಚಿಲ್ಡ್ರನ್ ಟ್ರೆಶರ್ ಹೈಸ್ಕೂಲ್ನ ಸಂಸ್ಥಾಪಕ ಲಿಯಾನ್ ಖೋ ಥಮ್ಗ್ ವೈಪಿ ಹೇಳಿದ್ದಾರೆ.
ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಈ…
ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…
ಬೆಂಗಳೂರು : ಡಿ.ಕೆ.ಶಿವಕುಮಾರ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…
ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…
ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…
ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…