ನವೆದಹಲಿ: ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿ ಅವರ ಮೇಲೆ ಹಲ್ಲೆ ನಡೆಸಿದ ಅವಮಾನಕರ ಕೃತ್ಯ ತೋರಿಸುವ ವೀಡಿಯೊವನ್ನು ತೆಗೆದು ಹಾಕುವಂತೆ ಟ್ವಿಟರ್ ಇಂಡಿಯಾಗೆ ನಿರ್ದೇಶನ ನೀಡಿರುವುದಾಗಿ ರಾಷ್ಟ್ರೀಯ ಮಹಿಳಾ ಆಯೋಗ ಗುರುವಾರ ಹೇಳಿದೆ.
ಈ ಕುರಿತು ಟ್ವೀಟ್ ಮಾಡಿರುವ ರಾಷ್ಟ್ರೀಯ ಮಹಿಳಾ ಆಯೋಗ, ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡುವ ಅವಮಾನಕರ ಕೃತ್ಯವನ್ನು ತೋರಿಸುವ ವೀಡಿಯೊವನ್ನು ತೆಗೆದುಹಾಕಲು ಟ್ವೀಟರ್ ಇಂಡಿಯಾದ ಸಾರ್ವಜನಿಕ ನೀತಿಯ ಮುಖ್ಯಸ್ಥರಿಗೆ ಔಪಚಾರಿಕವಾಗಿ ನಿರ್ದೇಶನ ನೀಡಲಾಗಿದೆ. ಈ ವೀಡಿಯೊದಲ್ಲಿ ಸಂತ್ರಸ್ತರನ್ನು ಗುರುತಿಸಬಹುದಾಗಿದ್ದು, ಶಿಕ್ಷಾರ್ಹ ಅಪರಾಧವಾಗಿದೆ ಎಂದು ಹೇಳಿದೆ.
ಈ ಹೀನಕೃತ್ಯವೆಸಗಿದ ಅಪರಿಚಿತ ಶಸ್ತ್ರಸಜ್ಜಿತ ವ್ಯಕ್ತಿಗಳ ವಿರುದ್ಧ ತೌಬಲ್ ಜಿಲ್ಲೆಯ ನಾಂಗ್ಪೋಕ್ ಸೆಕ್ಮೈ ಪೊಲೀಸ್ ಠಾಣೆಯಲ್ಲಿ ಅಪಹರಣ, ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೇ 3 ರಂದು ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ನಂತರ 150 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಹಲವಾರು ಮಂದಿ ಗಾಯಗೊಂಡಿದ್ದಾರೆ.
ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…
ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…
ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…
ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…
ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…
ನಾಗಮಂಗಲ : ಮಂಡ್ಯ ಜಿಲ್ಲೆ ಸಾಕಷ್ಟು ಅಭಿವೃದ್ಧಿ ಹೊಂದಿದೆ. ಮತ್ತಷ್ಟು ಅಭಿವೃದ್ಧಿ ಹೊಂದಬೇಕಾಗಿದೆ. ಪಕ್ಷಾತೀತವಾಗಿ ನನ್ನನ್ನು ಈ ಕ್ಷೇತ್ರದ ಜನರು…