BREAKING NEWS

ಸಿದ್ಧಗಂಗಾ ಮಠದ ಉತ್ತರಾಧಿಕಾರಿಯಾಗಿ ಮನೋಜ್ ಕುಮಾರ್​ ನೇಮಕ

ತುಮಕೂರು : ಸಿದ್ಧಗಂಗಾ ಮಠದ ಉತ್ತರಾಧಿಕಾರಿಯಾಗಿ ಸಿದ್ಧಗಂಗಾ ಪಾಲಿಟೆಕ್ನಿಕ್​ನಲ್ಲಿ ಉಪನ್ಯಾಸಕನಾಗಿರುವ ಮನೋಜ್ ಕುಮಾರ್​ ಅವರನ್ನು ನೇಮಕ ಮಾಡಿ ಸಿದ್ದಲಿಂಗ ಸ್ವಾಮೀಜಿ ಆದೇಶ ಹೊರಡಿಸಿದ್ದಾರೆ. ಮೈಲನಹಳ್ಳಿಯ ಷಡಕ್ಷರಿ, ವಿರೂಪಾಕ್ಷಮ್ಮ ದಂಪತಿಯ ಪುತ್ರ ಮನೋಜ್​ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಮೈಲನಹಳ್ಳಿ ನಿವಾಸಿ. ಮೇ 23ರ ಬಸವ ಜಯಂತಿಯಂದು ನಿರಂಜನ ಪಟ್ಟಾಧಿಕಾರ ನೆರವೇರಲಿದೆ. ಸಿದ್ದಗಂಗಾ ಮಠದ ಜೊತೆಗೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಕಂಚುಗಲ್​ ಬಂಡೇಮಠಕ್ಕೆ K.M.ಹರ್ಷ ಎನ್ನುವವರು ಉತ್ತರಾಧಿಕಾರಿಯಾಗಿ ನೇಮಕ ಮಾಡಲಾಗಿದೆ. K.M.ಹರ್ಷ ಅವರು ತುಮಕೂರು ತಾಲೂಕಿನ ಕಾಳೇನಹಳ್ಳಿ ನಿವಾಸಿಯಾಗಿದ್ದಾರೆ. ದೇವನಹಳ್ಳಿಯ ಬಸವಕಲ್ಯಾಣ ಮಠಕ್ಕೆ ಮಂಡ್ಯ ಜಿಲ್ಲೆಯ ಬಿಳುಗಲಿ ನಿವಾಸಿ ಗೌರೀಶ್​ ಕುಮಾರ್​ ನೇಮಕ ಮಾಡಲಾಗಿದೆ.
ತ್ರಿವಿಧ ದಾಸೋಹಿ ಮಠ ಎಂದು ವಿಶ್ವಖ್ಯಾತಿ ಪಡೆದಿರುವ ತುಮಕೂರಿನ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳು ಲಿಂಗೈಕ್ಯರಾದ ನಂತರ ಉತ್ತರಾಧಿಕಾರಿಯಾಗಿ ಸಿದ್ಧಲಿಂಗ ಸ್ವಾಮೀಜಿ ಆಡಳಿತ ಮಾಡುತ್ತಿದ್ದಾರೆ. ಹಲವು ವರ್ಷಗಳಿಂದ ಸ್ಥಗಿತಗೊಂಡಿದ್ದ ಉತ್ತರಾಧಿಕಾರಿ ಆಯ್ಕೆ ಪ್ರಕ್ರಿಯೆ ಈಗ ನಡೆದಿದೆ.

lokesh

Recent Posts

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

2 hours ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

2 hours ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

2 hours ago

ನಡೆಯದ ಸಂಸತ್ ಕಲಾಪ; ಕುಗ್ಗಿದ ಮೋದಿ-ಶಾ ವರ್ಚಸ್ಸು

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…

2 hours ago

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಅಂತ್ಯ

5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)…

11 hours ago