ಬೆಂಗಳೂರು : ಮಂತ್ರಾಲಯದ ರಾಘವೇಂದ್ರ ಸ್ವಾಮಿ ಮಠದಲ್ಲಿ ಕೊಡುತ್ತಿರುವ ತೀರ್ಥ ಚರಂಡಿ ನೀರು ಎಂದು ನಟ ಅನಿರುದ್ಧ ಆರೋಪಿಸಿದ್ದಾರೆ.
ಸುದ್ದಿಗಾರರೋಂದಿಗೆ ಮಾತನಾಡಿದ ಅವರು, ತುಂಗಾ ನದಿಗೆ ಚರಂಡಿ ನೀರು ಸೇರಿ ಕಲುಷಿತವಾಗಿದೆ. ಮಂತ್ರಾಲಯದ ರಾಘವೇಂದ್ರ ಮಠದಲ್ಲಿ ನೀಡುತ್ತಿರುವ ತೀರ್ಥ ರೂಪದಲ್ಲಿ ನಾವೆಲ್ಲಾ ಕುಡಿಯುತ್ತಿರುವುದು ಈ ಚರಂಡಿ ನೀರನ್ನೇ ಎಂದು ಹೇಳಿದ್ದಾರೆ.
ಮುಂದುವರೆದಂತೆ ಹೇಳಿದ ಅವರು, ನನ್ನ ಚಿತ್ರದ ಪ್ರಚಾರಕ್ಕಾಗಿ ಶಿವಮೊಗ್ಗಕ್ಕೆ ಭೇಟಿ ನೀಡಿದ್ದೆ. ಆ ವೇಳೆ ಸ್ಥಳಿಯ ಪತ್ರಕರ್ತರು ತುಂಗಾ ನದಿ ಕಲುಷಿತದ ಬಗ್ಗೆ ನನಗೆ ಮಾಹಿತಿ ನೀಡಿದರು. ಬಳಿಕ ಅವರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ನೋಡಿದಾಗ ಚರಂಡಿ ನೀರು ನದಿಗೆ ಸೇರುತಿರುವುದು ಕಂಡು ಬಂತು.
ಇದೇ ನದಿ ಹರಿದು ಬಳ್ಳಾರಿ, ಮಂತ್ರಾಲಯಕ್ಕೂ ಹರಿದು ಹೋಗುತ್ತದೆ. ಹೀಗಾಗಿ ಮಂತ್ರಾಲಯದಲ್ಲಿ ನೀಡುತ್ತಿರುವ ತೀರ್ಥ ಚರಂಡಿ ನೀರು ಎಂದು ಆರೋಪಿಸಿದ್ದಾರೆ.
ನದಿ ಶುದ್ಧೀಕರಿಸಲು ಸಿಎಂಗೆ ಮನವಿ : ತುಂಗಾ ನದಿ ಕಲುಷಿತವಾಗಿದ್ದು ಕೂಡಲೆ ನದಿಯನ್ನು ಸ್ವಚ್ಛಗೊಳಿಸುವಂತೆ ನಟ ಅನಿರುದ್ಧ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…