BREAKING NEWS

ಪತ್ನಿಗೆ 18 ವರ್ಷಕ್ಕಿಂತ ಹೆಚ್ಚಿದ್ದರೆ ವೈವಾಹಿಕ ಅತ್ಯಾಚಾರ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್‌

ಲಕ್ನೋ : ಪತ್ನಿಯ ವಯಸ್ಸು 18 ವರ್ಷಕ್ಕಿಂತ ಹೆಚ್ಚಿದ್ದರೆ ವೈವಾಹಿಕ ಅತ್ಯಾಚಾರವನ್ನು ಅಪರಾಧ ಎಂದು ಪರಿಗಣಿಸಲಾಗುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಪ್ರಕರಣವೊಂದರ ವಿಚಾರಣೆ ನಡೆಸಿದ್ದ ಕೋರ್ಟ್ ಐಪಿಸಿ ಸೆಕ್ಷನ್ 377ರ ಅಡಿಯಲ್ಲಿ ಆರೋಪಿಯನ್ನು ತಪ್ಪಿತಸ್ಥರೆಂದು ಪರಿಗಣಿಸಲಾಗುವುದಿಲ್ಲ. ಐಪಿಸಿಯ ಸೆಕ್ಷನ್ 377ರ ಅಡಿಯಲ್ಲಿ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ವಿಧಿಸಲಾಗುವುದಿಲ್ಲ ಎಂದು ಪ್ರತಿಪಾದಿಸಿದ ನ್ಯಾಯಮೂರ್ತಿ ರಾಮ್ ಮನೋಹರ್ ನಾರಾಯಣ ಮಿಶ್ರಾ ಅವರ ಪೀಠವು ದೇಶದಲ್ಲಿ ವೈವಾಹಿಕ ಅತ್ಯಾಚಾರವನ್ನು ಇನ್ನೂ ಅಪರಾಧವೆಂದು ಪರಿಗಣಿಸಲಾಗಿಲ್ಲ ಎಂದು ಹೇಳಿದ್ದಾರೆ.

ವೈವಾಹಿಕ ಅತ್ಯಾಚಾರವನ್ನು ಅಪರಾಧ ಎಂದು ಪರಿಗಣಿಸುವ ಅರ್ಜಿಗಳು ಸುಪ್ರೀಂ ಕೋರ್ಟ್‌ನಲ್ಲಿ ಇನ್ನೂ ಬಾಕಿ ಉಳಿದಿರುವುದರಿಂದ ಮತ್ತು ಸುಪ್ರೀಂ ಕೋರ್ಟ್ ಪ್ರಕರಣವನ್ನು ನಿರ್ಧರಿಸುವವರೆಗೆ, ಪತ್ನಿಗೆ 18 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನವರಾಗಿದ್ದರೆ ವೈವಾಹಿಕ ಅತ್ಯಾಚಾರಕ್ಕೆ ಯಾವುದೇ ಕ್ರಿಮಿನಲ್ ಶಿಕ್ಷೆಗಳಿಲ್ಲ ಎಂದು ಹೈಕೋರ್ಟ್ ಹೇಳಿದೆ.

ಮಧ್ಯಪ್ರದೇಶ ಹೈಕೋರ್ಟ್‌ನ ಹಿಂದಿನ ಅಭಿಪ್ರಾಯವನ್ನು ಬೆಂಬಲಿಸಿದ ಅಲಹಾಬಾದ್ ಹೈಕೋರ್ಟ್, ವೈವಾಹಿಕ ಸಂಬಂಧದಲ್ಲಿ ಯಾವುದೇ ‘ಅಸ್ವಾಭಾವಿಕ ಅಪರಾಧ’ (ಐಪಿಸಿಯ ಸೆಕ್ಷನ್ 377 ರ ಪ್ರಕಾರ) ಕ್ಕೆ ಅವಕಾಶವಿಲ್ಲ ಎಂದು ಹೇಳಿದೆ.

ಅರ್ಜಿಯಲ್ಲಿ ದೂರುದಾರರು ತಮ್ಮ ವಿವಾಹವು ಅನೈತಿಕ ಸಂಬಂಧವಾಗಿತ್ತು. ಪತಿ ತನ್ನನ್ನು ಮೌಖಿಕ ಮತ್ತು ದೈಹಿಕ ನಿಂದನೆ ಮತ್ತು ಬಲವಂತಕ್ಕೆ ಒಳಪಡಿಸಿದ್ದಾನೆ. ಅಲ್ಲದೇ ಗುದ ಸಂಭೋಗದಂಥ ಅಸ್ವಾಭಾವಿಕ ಕ್ರಿಯೆಗೆ ಒತ್ತಾಯಿಸುವ ಮೂಲಕ ಲೌಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಿದ್ದರು.

ಪತಿ ಅಥವಾ ಪತಿಯ ಸಂಬಂಧಿಕರಿಂದ ಕ್ರೌರ್ಯಕ್ಕೆ ಸಂಬಂಧಿಸಿದ ಸೆಕ್ಷನ್‌ಗಳ ಅಡಿಯಲ್ಲಿ (498-A) ಮತ್ತು ಸ್ವಯಂಪ್ರೇರಣೆಯಿಂದ ನೋವುಂಟು ಮಾಡುವ (IPC 323) ಆರೋಪಕ್ಕಾಗಿ ಪತಿಯನ್ನು ದೋಷಿ ಎಂದು ಸ್ಥಳೀಯ ನ್ಯಾಯಾಲಯವು, ಸೆಕ್ಷನ್ 377ರ ಅಡಿಯಲ್ಲಿ ದಾಖಲಾದ ಆರೋಪದಿಂದ ಅವರನ್ನು ಖುಲಾಸೆಗೊಳಿಸಿದೆ.

andolanait

Recent Posts

ಹೀಲಿಯಂ ಗ್ಯಾಸ್ ಬಲೂನ್ ಮಾರಾಟಕ್ಕಿಲ್ಲ ಕಡಿವಾಣ

ಹಳ್ಳಿಗಳ ಹಬ್ಬ, ಜಾತ್ರೆಗಳಲ್ಲಿ ಬಲೂನ್‌ಗಳ ಮಾರಾಟ ಅವಘಡ ಸಂಭವಿಸಿದರೆ ಯಾರು ಹೊಣೆ? 2025ರ ವರ್ಷಾಂತ್ಯದಲ್ಲಿ ಮೈಸೂರಿನಲ್ಲಿ ನಡೆದಿದ್ದ ಸ್ಫೋಟ ಬಲೂನ್‌ಗಳಿಗೆ…

20 seconds ago

ನಗರೀಕರಣದಿಂದ ಮಾದಗಳ್ಳಿ ಕೆರೆಗೆ ಕಂಟಕ

ಕುಕ್ಕರಹಳ್ಳಿ ಕೆರೆಯ ಜಲಮೂಲ ಉಳಿವಿಕೆ ಅಭಿಯಾನ ಅಭಿಯಾನಕ್ಕೆ ಹೆಚ್ಚುತ್ತಿರುವ ಜನಬೆಂಬಲ ನಾಲಾ ನಡಿಗೆ, ನಾಲಾ ಹಬ್ಬ ಆಚರಿಸಲು ನಿರ್ಧಾರ ಗಿರೀಶ್‌…

46 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಫೆಬ್ರವರಿ 13 ಶುಕ್ರವಾರ  

3 hours ago

T 20 World Cup : ನಮೀಬಿಯ ವಿರುದ್ಧ ಭಾರತಕ್ಕೆ 93 ರನ್‌ಗಳ ಭರ್ಜರಿ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…

11 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಕ್ಕೆ ಅನುಮತಿ : ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು  ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…

11 hours ago

ಅಧಿಕಾರ ಹಂಚಿಕೆ ಚರ್ಚೆ ಮಧ್ಯೆ ರಾಜ್ಯ ಬಜೆಟ್‌ಗೆ ದಿನಾಂಕ ನಿಗದಿ

ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…

12 hours ago