BREAKING NEWS

ಮುಸ್ಲಿಂ ಯುವಕನೊಂದಿಗಿನ ಬಿಜೆಪಿ ಮುಖಂಡನ ಮಗಳ ಮದುವೆ ರದ್ದು

ಉತ್ತರಾಖಂಡ್‌ : ಇತ್ತೀಚೆಗಷ್ಟೇ ಮುಸ್ಲಿಂ ಯುವಕನ ಜೊತೆ ಬಿಜೆಪಿ ಮುಖಂಡನ ಮಗಳ ಮದುವೆಗೆ ಸಂಬಂಧಿಸಿದ ಸುದ್ದಿ ಭಾರೀ ವೈರಲ್​​ ಆಗಿತ್ತು. ಇದೀಗ ಭಾರೀ ಟೀಕೆಗೆ ಕಾರಣವಾಗಿರುವುದರಿಂದ ತನ್ನ ಮಗಳ ಮದುವೆಯನ್ನು ರದ್ದುಗೊಳಿಸಲಾಗಿದೆ ಎಂದು ಬಿಜೆಪಿ ಮುಖಂಡ ತಿಳಿಸಿದ್ದಾರೆ.

ಉತ್ತರಾಖಂಡದಲ್ಲಿ ಬಿಜೆಪಿ ಮುಖಂಡ ಹಾಗೂ ನಗರಸಭೆ ಅಧ್ಯಕ್ಷ ಯಶಪಾಲ್ ಬೇನಂ ಅವರ ಪುತ್ರಿ ಮೋನಿಕಾ ಅವರ ಮದುವೆ ಮೇ 28 ರಂದು ರೈಸ್ ಅಹ್ಮದ್ ಅವರ ಮಗ ಮೋನಿಸ್ ಅಹ್ಮದ್ ಅವರೊಂದಿಗೆ ನಡೆಯಬೇಕಿತ್ತು. ಮದುವೆಗೆ ಸಂಬಂಧಿಸಿದಂತೆ ಲಗ್ನ ಪತ್ರಿಕೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿತ್ತು. ಲಗ್ನ ಪತ್ರಿಕೆ ಎಲ್ಲೆಡೆ ಹರಿದಾಡುತ್ತಿದ್ದಂತೆ ಈ ಮದುವೆಗೆ ಹಲವು ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ಯಶ್ಪಾಲ್ ಬೇನಾಮ್ ಪಕ್ಷದ ಅನೇಕರು ಮದುವೆ ನಿಲ್ಲಿಸುವಂತೆ ಒತ್ತಾಯಿಸಿದ್ದರು.

ವಿವಾದ ವಿರೋಧಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇದೇ ತಿಂಗಳು 28 ರಂದು ನಡೆಯಬೇಕಿದ್ದ ಮದುವೆಗೆ ತೆರೆಬಿದ್ದಿದೆ.ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಯಶ್ಪಾಲ್ ಬೇನಮ್, ಮಗಳ ಸಂತೋಷಕ್ಕಾಗಿ ಮುಸ್ಲಿಂ ಯುವಕನೊಂದಿಗೆ ಮದುವೆ ಮಾಡಲು ಒಪ್ಪಿಕೊಂಡಿದ್ದೇನೆ. ಆದರೆ ಮದುವೆಗೆ ಸಾಮಾಜಿಕ ಮಾಧ್ಯಮ ಬಳಕೆದಾರರು ಪ್ರತಿಕ್ರಿಯಿಸಿದ ರೀತಿಯನ್ನು ಗಮನದಲ್ಲಿಟ್ಟುಕೊಂಡು ಮದುವೆ ನಿಲ್ಲಿಸಲಾಗಿದೆ. ಈಗ ನಾನು ಸಾರ್ವಜನಿಕರ ಧ್ವನಿಯನ್ನೂ ಕೇಳಬೇಕಾಗಿದೆ ಎಂದು ಬೇನಾಮ್ ಹೇಳಿದ್ದಾರೆ.

lokesh

Recent Posts

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಕ್ಕೆ ಅನುಮತಿ : ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು  ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…

16 mins ago

ಅಧಿಕಾರ ಹಂಚಿಕೆ ಚರ್ಚೆ ಮಧ್ಯೆ ರಾಜ್ಯ ಬಜೆಟ್‌ಗೆ ದಿನಾಂಕ ನಿಗದಿ

ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…

1 hour ago

ಭಾರತದೊಂದಿಗಿನ ವ್ಯಾಪಾರ ಒಪ್ಪಂದ ಐತಿಹಾಸಿಕ : ಟ್ರಂಪ್ ಬಣ್ಣನೆ

ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…

3 hours ago

ಬಿಕ್ಲು ಶಿವ ಕೊಲೆ ಪ್ರಕರಣ : ಪೊಲೀಸರ ವಶವಾದ ಬೈರತಿ ಬಸವರಾಜು

ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…

4 hours ago

ಸರ್ಕಾರಿ ಅಧಿಕಾರಿಗಳಿಗೆ ಲೋಕಾ ಶಾಕ್‌ : ಮೈಸೂರು ಸೇರಿ ಹಲವೆಡೆ ದಾಳಿ

ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…

4 hours ago

ಭಾರತ್‌ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

ಹೊಸದಿಲ್ಲಿ : ಕೇಂದ್ರ ಸರ್ಕಾರದ ಕಾರ್ಮಿಕ, ರೈತ ಮತ್ತು ’ಕಾರ್ಪೊರೇಟ್ ಪರ’ ನೀತಿಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಗಳ ಜಂಟಿ…

5 hours ago