BREAKING NEWS

ಮುಸ್ಲಿಂ ಯುವಕನೊಂದಿಗಿನ ಬಿಜೆಪಿ ಮುಖಂಡನ ಮಗಳ ಮದುವೆ ರದ್ದು

ಉತ್ತರಾಖಂಡ್‌ : ಇತ್ತೀಚೆಗಷ್ಟೇ ಮುಸ್ಲಿಂ ಯುವಕನ ಜೊತೆ ಬಿಜೆಪಿ ಮುಖಂಡನ ಮಗಳ ಮದುವೆಗೆ ಸಂಬಂಧಿಸಿದ ಸುದ್ದಿ ಭಾರೀ ವೈರಲ್​​ ಆಗಿತ್ತು. ಇದೀಗ ಭಾರೀ ಟೀಕೆಗೆ ಕಾರಣವಾಗಿರುವುದರಿಂದ ತನ್ನ ಮಗಳ ಮದುವೆಯನ್ನು ರದ್ದುಗೊಳಿಸಲಾಗಿದೆ ಎಂದು ಬಿಜೆಪಿ ಮುಖಂಡ ತಿಳಿಸಿದ್ದಾರೆ.

ಉತ್ತರಾಖಂಡದಲ್ಲಿ ಬಿಜೆಪಿ ಮುಖಂಡ ಹಾಗೂ ನಗರಸಭೆ ಅಧ್ಯಕ್ಷ ಯಶಪಾಲ್ ಬೇನಂ ಅವರ ಪುತ್ರಿ ಮೋನಿಕಾ ಅವರ ಮದುವೆ ಮೇ 28 ರಂದು ರೈಸ್ ಅಹ್ಮದ್ ಅವರ ಮಗ ಮೋನಿಸ್ ಅಹ್ಮದ್ ಅವರೊಂದಿಗೆ ನಡೆಯಬೇಕಿತ್ತು. ಮದುವೆಗೆ ಸಂಬಂಧಿಸಿದಂತೆ ಲಗ್ನ ಪತ್ರಿಕೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿತ್ತು. ಲಗ್ನ ಪತ್ರಿಕೆ ಎಲ್ಲೆಡೆ ಹರಿದಾಡುತ್ತಿದ್ದಂತೆ ಈ ಮದುವೆಗೆ ಹಲವು ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ಯಶ್ಪಾಲ್ ಬೇನಾಮ್ ಪಕ್ಷದ ಅನೇಕರು ಮದುವೆ ನಿಲ್ಲಿಸುವಂತೆ ಒತ್ತಾಯಿಸಿದ್ದರು.

ವಿವಾದ ವಿರೋಧಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇದೇ ತಿಂಗಳು 28 ರಂದು ನಡೆಯಬೇಕಿದ್ದ ಮದುವೆಗೆ ತೆರೆಬಿದ್ದಿದೆ.ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಯಶ್ಪಾಲ್ ಬೇನಮ್, ಮಗಳ ಸಂತೋಷಕ್ಕಾಗಿ ಮುಸ್ಲಿಂ ಯುವಕನೊಂದಿಗೆ ಮದುವೆ ಮಾಡಲು ಒಪ್ಪಿಕೊಂಡಿದ್ದೇನೆ. ಆದರೆ ಮದುವೆಗೆ ಸಾಮಾಜಿಕ ಮಾಧ್ಯಮ ಬಳಕೆದಾರರು ಪ್ರತಿಕ್ರಿಯಿಸಿದ ರೀತಿಯನ್ನು ಗಮನದಲ್ಲಿಟ್ಟುಕೊಂಡು ಮದುವೆ ನಿಲ್ಲಿಸಲಾಗಿದೆ. ಈಗ ನಾನು ಸಾರ್ವಜನಿಕರ ಧ್ವನಿಯನ್ನೂ ಕೇಳಬೇಕಾಗಿದೆ ಎಂದು ಬೇನಾಮ್ ಹೇಳಿದ್ದಾರೆ.

lokesh

Recent Posts

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

2 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

2 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

3 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

3 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

4 hours ago

ವಿಕಸಿತ ಭಾರತಕ್ಕೆ ಕೈಜೋಡಿಸಿ : ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…

6 hours ago