ಕೊಡಗು : ನೆರೆಯ ರಾಜ್ಯಗಳಲ್ಲಿ ಮಹಾಮಾರಿ ಕೊರೊನಾ ಉಪಟಳ ಹೆಚ್ಚಾಗಿದ್ದು, ರಾಜ್ಯದಲ್ಲಿಯೂ ಕೊರೊನಾ ರೂಪಾಂತರ ತಳಿ ಕಂಡುಬಂದಿರುವ ಹಿನ್ನಲೆಯಲ್ಲಿ ರಾಜ್ಯಾದ್ಯಂತ 60 ವರ್ಷದ ಮೇಲ್ಪಟ್ಟವರೆಲ್ಲರೂ ಮಾಸ್ಕ್ ಬಳಸುವಂತೆ ಕಡ್ಡಾಯಗೊಳಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಕುಶಾಲ ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊರೊನಾ ರೂಪಾಂತರ ತಳಿ ಬಗ್ಗೆ ಯಾರು ಭಯಪಡಬೇಕಾಗಿಲ್ಲ. ಈ ಬಗ್ಗೆ ಒಂದು ಸುತ್ತಿನ ಸಭೆ ನಡೆಸಲಾಗಿದ್ದು, ಕೋವಿಡ್ ವಿಚಾರವಾಗಿ ಮುಂಜಾಗ್ರತ ಕ್ರಮಗಳ ಬಗ್ಗೆ ಇಲಾಖೆಯಿಂದ ಇಂದು ಮಾರ್ಗಸೂಚಿ ಹೊರಡಿಸಲಾಗುವುದು. ನೆನ್ನೆಯೆ ಡಾ. ರವಿ ನೇತೃತ್ವದಲ್ಲಿ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿದ್ದು, ಕೆಲವು ಸಲಹೆಗಳನ್ನು ಪಡೆಯಲಾಗಿದೆ. 60 ವರ್ಷ ಮೇಲ್ಪಟ್ಟವರು, ಕಫ, ಜ್ವರ, ಕಿಡ್ನಿ ಸಮಸ್ಯೆ, ಉಸಿರಾಟ ತೊಂದರೆ, ಹೃದಯ ಸಂಬಂಧಿ ಕಾಯಿಲೆ ಇರುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಸಮಿತಿ ಸಲಹೆ ನೀಡಿದೆ. ಸಮಿತಿ ಸಲಹೆಗಳನ್ನಾಧರಿಸಿ ಇಲಾಖೆಯಿಂದ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಆರೋಗ್ಯ ಸಚಿವರು ಹೇಳಿದ್ದಾರೆ.
ಹೆಚ್ಚು ಟೆಸ್ಟಿಂಗ್ ಮಾಡುವಂತೆ ಆರೋಗ್ಯ ಇಲಾಖೆಗೆ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಹೆಚ್ಚು ಪಾಸಿಟಿವ್ ಬಂದರೆ ಮಾತ್ರ ಸಾರ್ವಜನಿಕ ಸ್ಥಳಗಳಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನ ಕೈಗೊಳ್ಳುವುದು ಅನಿವಾರ್ಯವಾಗಲಿದೆ. ಸದ್ಯಕ್ಕೆ ಅಂತಹ ಪರಿಸ್ಥಿತಿ ಇಲ್ಲ, ಯಾರೂ ಆತಂಕಪಡುವ ಅಗತ್ಯವಿಲ್ಲ ಅಗತ್ಯವಿರುವ ಬೆಡ್, ಪಿಪಿಇ ಕಿಟ್, ಸನ್ನದ್ದ ಸ್ಥಿತಿಯಲ್ಲಿ ಇರಿಸಿಕೊಳ್ಳಲು ಎಲ್ಲ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ತಿಳಿಸಲಾಗಿದೆ.
ಕೇರಳ ಗಡಿ ಜಿಲ್ಲೆಗಳಲ್ಲಿ ಹೆಚ್ಚು ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದ್ದು, ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಪಡೆದು ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯಗೊಳಿಸಲಾಗಿದೆ ಎಂದರು.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…