BREAKING NEWS

ಬೆಂಗಳೂರಿನಲ್ಲಿ ನಾಳೆಯಿಂದ ಎರಡು ದಿನ ವಿಪಕ್ಷಗಳ ಸಭೆಗೆ ಭರ್ಜರಿ ತಯಾರಿ

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿಯನ್ನು ಕಟ್ಟಿ ಹಾಕಲು ವಿರೋಧ ಪಕ್ಷಗಳು ತಮ್ಮ ಶಕ್ತಿ ಪ್ರದರ್ಶಿಸಲು ಮುಂದಾಗಿದೆ. ಪಾಟ್ನಾ ಸಭೆ ಬಳಿಕ ಬೆಂಗಳೂರಿನಲ್ಲಿ ನಾಳೆ ಮತ್ತು ನಾಡಿದ್ದು ಎರಡು ದಿನಗಳ ಕಾಲ ಮಹತ್ವದ ಸಭೆ ನಡೆಯಲಿದೆ.

ಪಾಟ್ನಾದಲ್ಲಿ ನಡೆದ ಪ್ರತಿಪಕ್ಷಗಳ ಸಭಯಲ್ಲಿ ೧೫ ವಿವಿಧ ಪಕ್ಷಗಳು ಹಾಜರಾಗಿದ್ದವು. ಈ ಬಾರಿ ಇನ್ನೂ ೯ ಪಕ್ಷಗಳು ಸೇರಿ ೨೪ ಹೆಚ್ಚು ಪಕ್ಷಗಳು ಭಾಗವಹಿಸುವ ನಿರೀಕ್ಷೆ ಇದೆ. ಸಾರ್ವತ್ರಿಕ ಚುನಾವಣೆಗೆ ರಣನೀತಿ ರೂಪಿಸಲು ಮುಂದಾಗಿರುವುದು ಕುತೂಹಲಕ್ಕೆಡೆ ಮಾಡಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ಪಕ್ಷದ ವರಿಷ್ಟೇ ಸೋನಿಯಾ ಗಾಂಧಿ ಅವರ ಸಮ್ಮುಖದಲ್ಲಿ ಸಭೆ ನಡೆಯುತ್ತಿದೆ ಎರಡು ದಿನಗಳ ಸಭೆ ಮುಂಬರುವ ಲೋಕಸಭಾ ಚುನಾವಣೆಯ ಸೀಟು ಹಂಚಿಕೆ, ಹೊಂದಾಣಿಕೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆಗಳಿವೆ

ಸಿಎಂ ಔತಣ ಕೂಟ: ಸಭೆಯ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರದ ಖಾಸಗಿ ಹೋಟೆಲ್‌ನಲ್ಲಿ ನಾಳೆ ರಾತ್ರಿ ಔತಣಕೂಟ ಆಯೋಜಿಸಿದ್ದಾರೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷದ ಮೈತ್ರಿಕೂಟದ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಆದರೆ, ಔತಣಕೂಟದಲ್ಲಿ ಮಾತ್ರ ಪಾಲ್ಗೊಳ್ಳುವುದಿಲ್ಲ ಎಂದು ಹೇಳಲಾಗಿದೆ.

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ನೇತೃತ್ವದಲ್ಲಿ ಜುಲೈ ೧೮ ರಂದು ನಡೆದ ಸಭೆ ನಡೆಯಲಿದೆ. ಔತಣಕೂಟದಲ್ಲಿ ೨೦ಕ್ಕೂ ಪ್ರತಿಪಕ್ಷಗಳ ಎಲ್ಲಾ ಪ್ರಮುಖ ನಾಯಕರು ಉಪಸ್ಥಿತರಿರಲಿದ್ದಾರೆ ಎನ್ನಲಾಗಿದೆ.

ಜೂನ್ ೨೩ರಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದಲ್ಲಿ ಪಾಟ್ನಾದಲ್ಲಿ ಮೊದಲ ಪ್ರತಿಪಕ್ಷ ಸಭೆ ನಡೆದಿತ್ತು. ಅದರ ನಂತರ, ಪ್ರತಿ ಪಕ್ಷಗಳು ಜುಲೈ ೧೭ ಮತ್ತು ೧೮ ರಂದು ಎರಡು ದಿನಗಳ ಸಭೆ ನಡೆಸಲಿದ್ದು, ಮೊದಲು ಶಿಮ್ಲಾದಲ್ಲಿ ಮತ್ತು ನಂತರ ಬೆಂಗಳೂರಿನಲ್ಲಿ ನಡೆಯಲಿದೆ.

ಮಮತಾ ಬ್ಯಾನರ್ಜಿ ಶಸ್ತ್ರಚಿಕಿತ್ಸೆ: ಮುಖ್ಯಮಂತ್ರಿಯ ಮಮತಾ ಬ್ಯಾನರ್ಜಿ ಶಸ್ತ್ರಚಿಕಿತ್ಸೆಯ ನಂತರ ಅನುಸರಿಸಬೇಕಾದ ಹಲವಾರು ನಿಯಮಗಳ ಹಿನ್ನೆಲೆಯಲ್ಲಿ ಔತಣಕೂಟದಲ್ಲಿ ಗೈರುಹಾಜರಾಗಲಿದೆ. ಆದರೆ, ಜುಲೈ ೧೮ರಂದು ದಿನಪೂರ್ತಿ ನಡೆಯುವ ಸಭೆಯಲ್ಲಿ ಅವರು ಭಾಗಿಯಾಗಲಿದ್ದಾರೆ ಎಂದು ಹೇಳಲಾಗಿದೆ.

ಜೂನ್ ೨೭ ರಂದು, ಉತ್ತರ ಬಂಗಾಳದ ಸೇವಕ್ ಏರ್‌ಬೇಸ್‌ನಲ್ಲಿ ಹೆಲಿಕಾಪ್ಟರ್ ತುರ್ತು ಲ್ಯಾಂಡಿಂಗ್ ಸಮಯದಲ್ಲಿ ಮಮತಾ ಬ್ಯಾನರ್ಜಿ ಅವರ ಎಡ ಮೊಣಕಾಲಿಗೆ ಗಾಯವಾಗಿತ್ತು. ಆ ನಂತರ ಎಸ್‌ಎಎಸ್‌ಕೆಎಂ ಆಸ್ಪತ್ರೆಯಲ್ಲಿ ಮುಖ್ಯಮಂತ್ರಿಯವರ ಎಡ ಮೊಣಕಾಲಿಗೆ ಮೈಕ್ರೋಸರ್ಜರಿ ಕೂಡ ಮಾಡಲಾಯಿತು.

ಮೊಣಕಾಲಿನ ಗಾಯದಿಂದಾಗಿ ಮಮತಾ ಅವರು ಪಂಚಾಯತ್ ಚುನಾವಣೆಯ ಪ್ರಚಾರಕ್ಕೆ ಹೋಗಲು ಸಾಧ್ಯವಾಗಲಿಲ್ಲ. ಆದರೆ, ಮುಖ್ಯಮಂತ್ರಿಗೆ ವಿಮಾನ ಹತ್ತಲು ಹಾಗೂ ವಿರೋಧ ಪಕ್ಷಗಳ ಸಭೆಯಲ್ಲಿ ಪಾಲ್ಗೊಳ್ಳಲು ವೈದ್ಯರು ಅನುಮತಿ ನೀಡಿದ್ದಾರೆ ಎಂದು ತೃಣಮೂಲ ಮೂಲಗಳು ತಿಳಿಸಿವೆ.

andolanait

Recent Posts

ದೇಶದ ಹಲವು ರಾಜ್ಯಗಳಲ್ಲಿ ಒಂದು ವಾರ ಹೆಚ್ಚಲಿದೆ ತಾಪಮಾನ

ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…

6 mins ago

ಗುರುವಾರ ಅಮೇರಿಕಾ-ಇರಾನ್‌ ಮಧ್ಯೆ 2ನೇ ಹಂತದ ಮಾತುಕತೆ

ಇಸ್ಲಾಮಾಬಾದ್:‌ ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್‌ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…

32 mins ago

ಇಂದು ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಜಯಂತಿ: ಗಣ್ಯಾತಿಗಣ್ಯರಿಂದ ಶುಭಾಶಯ

ನವದೆಹಲಿ: ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.‌ಅಂಬೇಡ್ಕರ್‌ ಅವರ 135ನೇ ಜನ್ಮ ಜಯಂತಿ. ಇದರ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ…

1 hour ago

ರೈತಾಪಿ ವರ್ಗಕ್ಕೆ ಬಿಗ್‌ ಶಾಕ್‌ ಕೊಟ್ಟ ಹವಾಮಾನ ಇಲಾಖೆ: ಏನದು ಗೊತ್ತಾ.?

ನವದೆಹಲಿ: ಈ ವರ್ಷ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.…

2 hours ago

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಜೀರ್‌ ಅಹಮ್ಮದ್‌ ರಾಜೀನಾಮೆ

ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್‌ ಅಹಮ್ಮದ್‌ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್‌ ಅಹಮ್ಮದ್‌ ಅವರು ಸಿಎಂ…

3 hours ago

ಓದುಗರ ಪತ್ರ: ನದಿ ಮಾಲಿನ್ಯ ತಡೆಗಟ್ಟಿ

ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…

6 hours ago