BREAKING NEWS

ಬೆಂಗಳೂರಿನಲ್ಲಿ ನಾಳೆಯಿಂದ ಎರಡು ದಿನ ವಿಪಕ್ಷಗಳ ಸಭೆಗೆ ಭರ್ಜರಿ ತಯಾರಿ

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿಯನ್ನು ಕಟ್ಟಿ ಹಾಕಲು ವಿರೋಧ ಪಕ್ಷಗಳು ತಮ್ಮ ಶಕ್ತಿ ಪ್ರದರ್ಶಿಸಲು ಮುಂದಾಗಿದೆ. ಪಾಟ್ನಾ ಸಭೆ ಬಳಿಕ ಬೆಂಗಳೂರಿನಲ್ಲಿ ನಾಳೆ ಮತ್ತು ನಾಡಿದ್ದು ಎರಡು ದಿನಗಳ ಕಾಲ ಮಹತ್ವದ ಸಭೆ ನಡೆಯಲಿದೆ.

ಪಾಟ್ನಾದಲ್ಲಿ ನಡೆದ ಪ್ರತಿಪಕ್ಷಗಳ ಸಭಯಲ್ಲಿ ೧೫ ವಿವಿಧ ಪಕ್ಷಗಳು ಹಾಜರಾಗಿದ್ದವು. ಈ ಬಾರಿ ಇನ್ನೂ ೯ ಪಕ್ಷಗಳು ಸೇರಿ ೨೪ ಹೆಚ್ಚು ಪಕ್ಷಗಳು ಭಾಗವಹಿಸುವ ನಿರೀಕ್ಷೆ ಇದೆ. ಸಾರ್ವತ್ರಿಕ ಚುನಾವಣೆಗೆ ರಣನೀತಿ ರೂಪಿಸಲು ಮುಂದಾಗಿರುವುದು ಕುತೂಹಲಕ್ಕೆಡೆ ಮಾಡಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ಪಕ್ಷದ ವರಿಷ್ಟೇ ಸೋನಿಯಾ ಗಾಂಧಿ ಅವರ ಸಮ್ಮುಖದಲ್ಲಿ ಸಭೆ ನಡೆಯುತ್ತಿದೆ ಎರಡು ದಿನಗಳ ಸಭೆ ಮುಂಬರುವ ಲೋಕಸಭಾ ಚುನಾವಣೆಯ ಸೀಟು ಹಂಚಿಕೆ, ಹೊಂದಾಣಿಕೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆಗಳಿವೆ

ಸಿಎಂ ಔತಣ ಕೂಟ: ಸಭೆಯ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರದ ಖಾಸಗಿ ಹೋಟೆಲ್‌ನಲ್ಲಿ ನಾಳೆ ರಾತ್ರಿ ಔತಣಕೂಟ ಆಯೋಜಿಸಿದ್ದಾರೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷದ ಮೈತ್ರಿಕೂಟದ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಆದರೆ, ಔತಣಕೂಟದಲ್ಲಿ ಮಾತ್ರ ಪಾಲ್ಗೊಳ್ಳುವುದಿಲ್ಲ ಎಂದು ಹೇಳಲಾಗಿದೆ.

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ನೇತೃತ್ವದಲ್ಲಿ ಜುಲೈ ೧೮ ರಂದು ನಡೆದ ಸಭೆ ನಡೆಯಲಿದೆ. ಔತಣಕೂಟದಲ್ಲಿ ೨೦ಕ್ಕೂ ಪ್ರತಿಪಕ್ಷಗಳ ಎಲ್ಲಾ ಪ್ರಮುಖ ನಾಯಕರು ಉಪಸ್ಥಿತರಿರಲಿದ್ದಾರೆ ಎನ್ನಲಾಗಿದೆ.

ಜೂನ್ ೨೩ರಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದಲ್ಲಿ ಪಾಟ್ನಾದಲ್ಲಿ ಮೊದಲ ಪ್ರತಿಪಕ್ಷ ಸಭೆ ನಡೆದಿತ್ತು. ಅದರ ನಂತರ, ಪ್ರತಿ ಪಕ್ಷಗಳು ಜುಲೈ ೧೭ ಮತ್ತು ೧೮ ರಂದು ಎರಡು ದಿನಗಳ ಸಭೆ ನಡೆಸಲಿದ್ದು, ಮೊದಲು ಶಿಮ್ಲಾದಲ್ಲಿ ಮತ್ತು ನಂತರ ಬೆಂಗಳೂರಿನಲ್ಲಿ ನಡೆಯಲಿದೆ.

ಮಮತಾ ಬ್ಯಾನರ್ಜಿ ಶಸ್ತ್ರಚಿಕಿತ್ಸೆ: ಮುಖ್ಯಮಂತ್ರಿಯ ಮಮತಾ ಬ್ಯಾನರ್ಜಿ ಶಸ್ತ್ರಚಿಕಿತ್ಸೆಯ ನಂತರ ಅನುಸರಿಸಬೇಕಾದ ಹಲವಾರು ನಿಯಮಗಳ ಹಿನ್ನೆಲೆಯಲ್ಲಿ ಔತಣಕೂಟದಲ್ಲಿ ಗೈರುಹಾಜರಾಗಲಿದೆ. ಆದರೆ, ಜುಲೈ ೧೮ರಂದು ದಿನಪೂರ್ತಿ ನಡೆಯುವ ಸಭೆಯಲ್ಲಿ ಅವರು ಭಾಗಿಯಾಗಲಿದ್ದಾರೆ ಎಂದು ಹೇಳಲಾಗಿದೆ.

ಜೂನ್ ೨೭ ರಂದು, ಉತ್ತರ ಬಂಗಾಳದ ಸೇವಕ್ ಏರ್‌ಬೇಸ್‌ನಲ್ಲಿ ಹೆಲಿಕಾಪ್ಟರ್ ತುರ್ತು ಲ್ಯಾಂಡಿಂಗ್ ಸಮಯದಲ್ಲಿ ಮಮತಾ ಬ್ಯಾನರ್ಜಿ ಅವರ ಎಡ ಮೊಣಕಾಲಿಗೆ ಗಾಯವಾಗಿತ್ತು. ಆ ನಂತರ ಎಸ್‌ಎಎಸ್‌ಕೆಎಂ ಆಸ್ಪತ್ರೆಯಲ್ಲಿ ಮುಖ್ಯಮಂತ್ರಿಯವರ ಎಡ ಮೊಣಕಾಲಿಗೆ ಮೈಕ್ರೋಸರ್ಜರಿ ಕೂಡ ಮಾಡಲಾಯಿತು.

ಮೊಣಕಾಲಿನ ಗಾಯದಿಂದಾಗಿ ಮಮತಾ ಅವರು ಪಂಚಾಯತ್ ಚುನಾವಣೆಯ ಪ್ರಚಾರಕ್ಕೆ ಹೋಗಲು ಸಾಧ್ಯವಾಗಲಿಲ್ಲ. ಆದರೆ, ಮುಖ್ಯಮಂತ್ರಿಗೆ ವಿಮಾನ ಹತ್ತಲು ಹಾಗೂ ವಿರೋಧ ಪಕ್ಷಗಳ ಸಭೆಯಲ್ಲಿ ಪಾಲ್ಗೊಳ್ಳಲು ವೈದ್ಯರು ಅನುಮತಿ ನೀಡಿದ್ದಾರೆ ಎಂದು ತೃಣಮೂಲ ಮೂಲಗಳು ತಿಳಿಸಿವೆ.

andolanait

Recent Posts

ಮೈಸೂರು | ಬೆಳ್ಳಂಬೆಳಗ್ಗೆ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಹತ್ಯೆ!

ಮೈಸೂರು : ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ಬೆಳ್ಳಂಬೆಳಿಗ್ಗೆಯೇ ಮಚ್ಚು ಲಾಂಗುಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿರುವ ಘಟನೆ…

19 mins ago

ಕೊಲ್ಕತ್ತಾದಲ್ಲಿ ಮೆಸ್ಸಿ ಮೇನಿಯಾ : ಫುಟ್‌ಬಾಲ್‌ ದಂತಕಥೆಗೆ ಭರ್ಜರಿ ಸ್ವಾಗತ

ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…

2 hours ago

ಟ್ರಂಪ್‌ ಸುಂಕ ಹೇರಿದ್ದ ರದ್ದಿಗೆ ಅಮೆರಿಕ ಸಂಸತ್ತು ನಿಲುವಳಿ

ನ್ಯೂಯಾರ್ಕ್‌ : ಭಾರತದ ಮೇಲೆ ಡೊನಾಲ್ಡ್‌ ಟ್ರಂಪ್‌ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…

3 hours ago

ಘೋರ ದುರಂತ | ಕರ್ತವ್ಯ ನಿರತ KSRTC ಮೇಲೆ ಹರಿದ ಲಾರಿ ; ಸ್ಥಳದಲ್ಲೇ ಸಾವು

ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…

3 hours ago

ಹವಾಮಾನ ಏರುಪೇರಿನಿಂದಾಗಿ ಕಾಳುಮೆಣಸಿಗೂ ಕಂಟಕ

ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್‌ ಡಿಸೋಜ ಮಡಿಕೇರಿ: ಈ ಬಾರಿಯ…

5 hours ago

ಅವಳಿ ತಾಲ್ಲೂಕುಗಳಲ್ಲಿ ಭತ್ತದ ಕಟಾವು ಜೋರು

ಭೇರ್ಯ ಮಹೇಶ್‌ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…

5 hours ago