BREAKING NEWS

ಬೆಂಗಳೂರಿನಲ್ಲಿ ನಾಳೆಯಿಂದ ಎರಡು ದಿನ ವಿಪಕ್ಷಗಳ ಸಭೆಗೆ ಭರ್ಜರಿ ತಯಾರಿ

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿಯನ್ನು ಕಟ್ಟಿ ಹಾಕಲು ವಿರೋಧ ಪಕ್ಷಗಳು ತಮ್ಮ ಶಕ್ತಿ ಪ್ರದರ್ಶಿಸಲು ಮುಂದಾಗಿದೆ. ಪಾಟ್ನಾ ಸಭೆ ಬಳಿಕ ಬೆಂಗಳೂರಿನಲ್ಲಿ ನಾಳೆ ಮತ್ತು ನಾಡಿದ್ದು ಎರಡು ದಿನಗಳ ಕಾಲ ಮಹತ್ವದ ಸಭೆ ನಡೆಯಲಿದೆ.

ಪಾಟ್ನಾದಲ್ಲಿ ನಡೆದ ಪ್ರತಿಪಕ್ಷಗಳ ಸಭಯಲ್ಲಿ ೧೫ ವಿವಿಧ ಪಕ್ಷಗಳು ಹಾಜರಾಗಿದ್ದವು. ಈ ಬಾರಿ ಇನ್ನೂ ೯ ಪಕ್ಷಗಳು ಸೇರಿ ೨೪ ಹೆಚ್ಚು ಪಕ್ಷಗಳು ಭಾಗವಹಿಸುವ ನಿರೀಕ್ಷೆ ಇದೆ. ಸಾರ್ವತ್ರಿಕ ಚುನಾವಣೆಗೆ ರಣನೀತಿ ರೂಪಿಸಲು ಮುಂದಾಗಿರುವುದು ಕುತೂಹಲಕ್ಕೆಡೆ ಮಾಡಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ಪಕ್ಷದ ವರಿಷ್ಟೇ ಸೋನಿಯಾ ಗಾಂಧಿ ಅವರ ಸಮ್ಮುಖದಲ್ಲಿ ಸಭೆ ನಡೆಯುತ್ತಿದೆ ಎರಡು ದಿನಗಳ ಸಭೆ ಮುಂಬರುವ ಲೋಕಸಭಾ ಚುನಾವಣೆಯ ಸೀಟು ಹಂಚಿಕೆ, ಹೊಂದಾಣಿಕೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆಗಳಿವೆ

ಸಿಎಂ ಔತಣ ಕೂಟ: ಸಭೆಯ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರದ ಖಾಸಗಿ ಹೋಟೆಲ್‌ನಲ್ಲಿ ನಾಳೆ ರಾತ್ರಿ ಔತಣಕೂಟ ಆಯೋಜಿಸಿದ್ದಾರೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷದ ಮೈತ್ರಿಕೂಟದ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಆದರೆ, ಔತಣಕೂಟದಲ್ಲಿ ಮಾತ್ರ ಪಾಲ್ಗೊಳ್ಳುವುದಿಲ್ಲ ಎಂದು ಹೇಳಲಾಗಿದೆ.

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ನೇತೃತ್ವದಲ್ಲಿ ಜುಲೈ ೧೮ ರಂದು ನಡೆದ ಸಭೆ ನಡೆಯಲಿದೆ. ಔತಣಕೂಟದಲ್ಲಿ ೨೦ಕ್ಕೂ ಪ್ರತಿಪಕ್ಷಗಳ ಎಲ್ಲಾ ಪ್ರಮುಖ ನಾಯಕರು ಉಪಸ್ಥಿತರಿರಲಿದ್ದಾರೆ ಎನ್ನಲಾಗಿದೆ.

ಜೂನ್ ೨೩ರಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದಲ್ಲಿ ಪಾಟ್ನಾದಲ್ಲಿ ಮೊದಲ ಪ್ರತಿಪಕ್ಷ ಸಭೆ ನಡೆದಿತ್ತು. ಅದರ ನಂತರ, ಪ್ರತಿ ಪಕ್ಷಗಳು ಜುಲೈ ೧೭ ಮತ್ತು ೧೮ ರಂದು ಎರಡು ದಿನಗಳ ಸಭೆ ನಡೆಸಲಿದ್ದು, ಮೊದಲು ಶಿಮ್ಲಾದಲ್ಲಿ ಮತ್ತು ನಂತರ ಬೆಂಗಳೂರಿನಲ್ಲಿ ನಡೆಯಲಿದೆ.

ಮಮತಾ ಬ್ಯಾನರ್ಜಿ ಶಸ್ತ್ರಚಿಕಿತ್ಸೆ: ಮುಖ್ಯಮಂತ್ರಿಯ ಮಮತಾ ಬ್ಯಾನರ್ಜಿ ಶಸ್ತ್ರಚಿಕಿತ್ಸೆಯ ನಂತರ ಅನುಸರಿಸಬೇಕಾದ ಹಲವಾರು ನಿಯಮಗಳ ಹಿನ್ನೆಲೆಯಲ್ಲಿ ಔತಣಕೂಟದಲ್ಲಿ ಗೈರುಹಾಜರಾಗಲಿದೆ. ಆದರೆ, ಜುಲೈ ೧೮ರಂದು ದಿನಪೂರ್ತಿ ನಡೆಯುವ ಸಭೆಯಲ್ಲಿ ಅವರು ಭಾಗಿಯಾಗಲಿದ್ದಾರೆ ಎಂದು ಹೇಳಲಾಗಿದೆ.

ಜೂನ್ ೨೭ ರಂದು, ಉತ್ತರ ಬಂಗಾಳದ ಸೇವಕ್ ಏರ್‌ಬೇಸ್‌ನಲ್ಲಿ ಹೆಲಿಕಾಪ್ಟರ್ ತುರ್ತು ಲ್ಯಾಂಡಿಂಗ್ ಸಮಯದಲ್ಲಿ ಮಮತಾ ಬ್ಯಾನರ್ಜಿ ಅವರ ಎಡ ಮೊಣಕಾಲಿಗೆ ಗಾಯವಾಗಿತ್ತು. ಆ ನಂತರ ಎಸ್‌ಎಎಸ್‌ಕೆಎಂ ಆಸ್ಪತ್ರೆಯಲ್ಲಿ ಮುಖ್ಯಮಂತ್ರಿಯವರ ಎಡ ಮೊಣಕಾಲಿಗೆ ಮೈಕ್ರೋಸರ್ಜರಿ ಕೂಡ ಮಾಡಲಾಯಿತು.

ಮೊಣಕಾಲಿನ ಗಾಯದಿಂದಾಗಿ ಮಮತಾ ಅವರು ಪಂಚಾಯತ್ ಚುನಾವಣೆಯ ಪ್ರಚಾರಕ್ಕೆ ಹೋಗಲು ಸಾಧ್ಯವಾಗಲಿಲ್ಲ. ಆದರೆ, ಮುಖ್ಯಮಂತ್ರಿಗೆ ವಿಮಾನ ಹತ್ತಲು ಹಾಗೂ ವಿರೋಧ ಪಕ್ಷಗಳ ಸಭೆಯಲ್ಲಿ ಪಾಲ್ಗೊಳ್ಳಲು ವೈದ್ಯರು ಅನುಮತಿ ನೀಡಿದ್ದಾರೆ ಎಂದು ತೃಣಮೂಲ ಮೂಲಗಳು ತಿಳಿಸಿವೆ.

andolanait

Recent Posts

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

7 hours ago

ಓದುಗರ ಪತ್ರ: ಬದಲಾಗುತ್ತಿದೆ ಚಾತುರ್ಮಾಸ ಪದದ ಅರ್ಥ

ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…

7 hours ago

ಓದುಗರ ಪತ್ರ: ದಸರಾ ಮಹೋತ್ಸವ ಸರಳವಾಗಿರಲಿ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…

7 hours ago

ಓದುಗರ ಪತ್ರ: ಗೃಹಲಕ್ಷ್ಮಿ: ಅರ್ಹರಿಗೆ ಅನ್ಯಾಯವಾಗದಿರಲಿ

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…

7 hours ago

ಎಚ್೧ಎನ್೧: ಕೊಡಗು ಜಿಲ್ಲೆಯಲ್ಲಿ 4 ಪ್ರಕರಣ ದೃಢ

ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…

7 hours ago

ಮುಂಗಾರು ವೈಫಲ್ಯ: ಬಿತ್ತನೆ ಶೇ.15.95ಕ್ಕೆ ಕುಸಿತ

ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…

7 hours ago