BREAKING NEWS

ಬೆಂಗಳೂರಿನಲ್ಲಿ ನಾಳೆಯಿಂದ ಎರಡು ದಿನ ವಿಪಕ್ಷಗಳ ಸಭೆಗೆ ಭರ್ಜರಿ ತಯಾರಿ

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿಯನ್ನು ಕಟ್ಟಿ ಹಾಕಲು ವಿರೋಧ ಪಕ್ಷಗಳು ತಮ್ಮ ಶಕ್ತಿ ಪ್ರದರ್ಶಿಸಲು ಮುಂದಾಗಿದೆ. ಪಾಟ್ನಾ ಸಭೆ ಬಳಿಕ ಬೆಂಗಳೂರಿನಲ್ಲಿ ನಾಳೆ ಮತ್ತು ನಾಡಿದ್ದು ಎರಡು ದಿನಗಳ ಕಾಲ ಮಹತ್ವದ ಸಭೆ ನಡೆಯಲಿದೆ.

ಪಾಟ್ನಾದಲ್ಲಿ ನಡೆದ ಪ್ರತಿಪಕ್ಷಗಳ ಸಭಯಲ್ಲಿ ೧೫ ವಿವಿಧ ಪಕ್ಷಗಳು ಹಾಜರಾಗಿದ್ದವು. ಈ ಬಾರಿ ಇನ್ನೂ ೯ ಪಕ್ಷಗಳು ಸೇರಿ ೨೪ ಹೆಚ್ಚು ಪಕ್ಷಗಳು ಭಾಗವಹಿಸುವ ನಿರೀಕ್ಷೆ ಇದೆ. ಸಾರ್ವತ್ರಿಕ ಚುನಾವಣೆಗೆ ರಣನೀತಿ ರೂಪಿಸಲು ಮುಂದಾಗಿರುವುದು ಕುತೂಹಲಕ್ಕೆಡೆ ಮಾಡಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ಪಕ್ಷದ ವರಿಷ್ಟೇ ಸೋನಿಯಾ ಗಾಂಧಿ ಅವರ ಸಮ್ಮುಖದಲ್ಲಿ ಸಭೆ ನಡೆಯುತ್ತಿದೆ ಎರಡು ದಿನಗಳ ಸಭೆ ಮುಂಬರುವ ಲೋಕಸಭಾ ಚುನಾವಣೆಯ ಸೀಟು ಹಂಚಿಕೆ, ಹೊಂದಾಣಿಕೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆಗಳಿವೆ

ಸಿಎಂ ಔತಣ ಕೂಟ: ಸಭೆಯ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರದ ಖಾಸಗಿ ಹೋಟೆಲ್‌ನಲ್ಲಿ ನಾಳೆ ರಾತ್ರಿ ಔತಣಕೂಟ ಆಯೋಜಿಸಿದ್ದಾರೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷದ ಮೈತ್ರಿಕೂಟದ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಆದರೆ, ಔತಣಕೂಟದಲ್ಲಿ ಮಾತ್ರ ಪಾಲ್ಗೊಳ್ಳುವುದಿಲ್ಲ ಎಂದು ಹೇಳಲಾಗಿದೆ.

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ನೇತೃತ್ವದಲ್ಲಿ ಜುಲೈ ೧೮ ರಂದು ನಡೆದ ಸಭೆ ನಡೆಯಲಿದೆ. ಔತಣಕೂಟದಲ್ಲಿ ೨೦ಕ್ಕೂ ಪ್ರತಿಪಕ್ಷಗಳ ಎಲ್ಲಾ ಪ್ರಮುಖ ನಾಯಕರು ಉಪಸ್ಥಿತರಿರಲಿದ್ದಾರೆ ಎನ್ನಲಾಗಿದೆ.

ಜೂನ್ ೨೩ರಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದಲ್ಲಿ ಪಾಟ್ನಾದಲ್ಲಿ ಮೊದಲ ಪ್ರತಿಪಕ್ಷ ಸಭೆ ನಡೆದಿತ್ತು. ಅದರ ನಂತರ, ಪ್ರತಿ ಪಕ್ಷಗಳು ಜುಲೈ ೧೭ ಮತ್ತು ೧೮ ರಂದು ಎರಡು ದಿನಗಳ ಸಭೆ ನಡೆಸಲಿದ್ದು, ಮೊದಲು ಶಿಮ್ಲಾದಲ್ಲಿ ಮತ್ತು ನಂತರ ಬೆಂಗಳೂರಿನಲ್ಲಿ ನಡೆಯಲಿದೆ.

ಮಮತಾ ಬ್ಯಾನರ್ಜಿ ಶಸ್ತ್ರಚಿಕಿತ್ಸೆ: ಮುಖ್ಯಮಂತ್ರಿಯ ಮಮತಾ ಬ್ಯಾನರ್ಜಿ ಶಸ್ತ್ರಚಿಕಿತ್ಸೆಯ ನಂತರ ಅನುಸರಿಸಬೇಕಾದ ಹಲವಾರು ನಿಯಮಗಳ ಹಿನ್ನೆಲೆಯಲ್ಲಿ ಔತಣಕೂಟದಲ್ಲಿ ಗೈರುಹಾಜರಾಗಲಿದೆ. ಆದರೆ, ಜುಲೈ ೧೮ರಂದು ದಿನಪೂರ್ತಿ ನಡೆಯುವ ಸಭೆಯಲ್ಲಿ ಅವರು ಭಾಗಿಯಾಗಲಿದ್ದಾರೆ ಎಂದು ಹೇಳಲಾಗಿದೆ.

ಜೂನ್ ೨೭ ರಂದು, ಉತ್ತರ ಬಂಗಾಳದ ಸೇವಕ್ ಏರ್‌ಬೇಸ್‌ನಲ್ಲಿ ಹೆಲಿಕಾಪ್ಟರ್ ತುರ್ತು ಲ್ಯಾಂಡಿಂಗ್ ಸಮಯದಲ್ಲಿ ಮಮತಾ ಬ್ಯಾನರ್ಜಿ ಅವರ ಎಡ ಮೊಣಕಾಲಿಗೆ ಗಾಯವಾಗಿತ್ತು. ಆ ನಂತರ ಎಸ್‌ಎಎಸ್‌ಕೆಎಂ ಆಸ್ಪತ್ರೆಯಲ್ಲಿ ಮುಖ್ಯಮಂತ್ರಿಯವರ ಎಡ ಮೊಣಕಾಲಿಗೆ ಮೈಕ್ರೋಸರ್ಜರಿ ಕೂಡ ಮಾಡಲಾಯಿತು.

ಮೊಣಕಾಲಿನ ಗಾಯದಿಂದಾಗಿ ಮಮತಾ ಅವರು ಪಂಚಾಯತ್ ಚುನಾವಣೆಯ ಪ್ರಚಾರಕ್ಕೆ ಹೋಗಲು ಸಾಧ್ಯವಾಗಲಿಲ್ಲ. ಆದರೆ, ಮುಖ್ಯಮಂತ್ರಿಗೆ ವಿಮಾನ ಹತ್ತಲು ಹಾಗೂ ವಿರೋಧ ಪಕ್ಷಗಳ ಸಭೆಯಲ್ಲಿ ಪಾಲ್ಗೊಳ್ಳಲು ವೈದ್ಯರು ಅನುಮತಿ ನೀಡಿದ್ದಾರೆ ಎಂದು ತೃಣಮೂಲ ಮೂಲಗಳು ತಿಳಿಸಿವೆ.

andolanait

Recent Posts

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

4 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

6 hours ago

ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ : ಮಾಜಿ ಸಚಿವ ಎನ್.ಮಹೇಶ್‌

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ…

7 hours ago

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

7 hours ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

8 hours ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

10 hours ago