BREAKING NEWS

ದೇಶದ ಮೊದಲ ಶಿಕ್ಷಣ ಮಂತ್ರಿ ಮೌಲಾನಾ ಅಬುಲ್‌ ಕಲಾಂ ಆಜಾದ್‌ ಉಲ್ಲೇಖ ಕೈಬಿಟ್ಟ NCERT

ನವದೆಹಲಿ: ಸ್ವಾತಂತ್ರ್ಯ ಹೋರಾಟಗಾರ ಮತ್ತು ಭಾರತದ ಮೊದಲ ಶಿಕ್ಷಣ ಸಚಿವ ಮೌಲಾನಾ ಅಬುಲ್ ಕಲಾಂ ಆಜಾದ್ ಅವರಿಗೆ ಸಂಬಂಧಿಸಿದ ಉಲ್ಲೇಖಗಳನ್ನು 11 ನೇ ತರಗತಿಯ ಹೊಸ ರಾಜ್ಯಶಾಸ್ತ್ರ ಪಠ್ಯಪುಸ್ತಕದಿಂದ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ತೆಗೆದುಹಾಕಿದೆ.

ಕಳೆದ ವರ್ಷ ತನ್ನ ‘ಪಠ್ಯ ತರ್ಕಬದ್ಧಗೊಳಿಸುವ ಕಾರ್ಯ ನಡೆಸಿರುವ ಎನ್‌ಸಿಇಆರ್‌ಟಿ, ಅಪ್ರಸ್ತುತ ಮತ್ತು ವ್ಯಾಪ್ತಿಮೀರಿದ ವಿಷಯ ಎಂಬ ಕಾರಣ ನೀಡಿ ಗುಜರಾತ್ ಗಲಭೆಗಳು, ಮೊಘಲ್ ಯುಗ, ತುರ್ತು ಪರಿಸ್ಥಿತಿ, ಶೀತಲ ಸಮರ, ನಕ್ಸಲ್‌ ಚಳವಳಿಯೂ ಸೇರಿದಂತೆ ಹಲವು ವಿಷಯಗಳನ್ನು ಪಠ್ಯದಿಂದ ಕೈ ಬಿಟ್ಟಿದೆ.

ಆದರೆ, ತರ್ಕಬದ್ಧಗೊಳಿಸುವಿಕೆಯ ಟಿಪ್ಪಣಿಯಲ್ಲಿ 11 ನೇ ತರಗತಿಯ ರಾಜ್ಯಶಾಸ್ತ್ರ ಪಠ್ಯಪುಸ್ತಕದಲ್ಲಾದ ಬದಲಾವಣೆಗಳ ಉಲ್ಲೇಖವಿಲ್ಲ.

ಈ ವರ್ಷ ಯಾವುದೇ ಪಠ್ಯಕ್ರಮವನ್ನು ಪರಿಷ್ಕರಣೆ ಮಾಡಿಲ್ಲ. ಕಳೆದ ವರ್ಷ ಜೂನ್‌ನಲ್ಲಿ ಪಠ್ಯಕ್ರಮವನ್ನು ತರ್ಕಬದ್ಧಗೊಳಿಸಲಾಗಿದೆ ಎಂದು ಎನ್‌ಸಿಇಆರ್‌ಟಿ ಹೇಳಿಕೊಂಡಿದೆ.

‘ತರ್ಕಬದ್ಧಗೊಂಡ ಪುಸ್ತಕದಲ್ಲಿ ಬದಲಾವಣೆಗಳನ್ನು ಉಲ್ಲೇಖಿಸದಿರುವುದು ಮೇಲ್ವಿಚಾರಣೆ ಕೊರತೆಯಿಂದ ಆಗಿದ್ದಿರಬಹುದು’ ಎಂದು ಎನ್‌ಸಿಇಆರ್‌ಟಿ ನಿರ್ದೇಶಕ ದಿನೇಶ್ ಸಕ್ಲಾನಿ ತಿಳಿಸಿದ್ದಾರೆ.

11 ನೇ ತರಗತಿಯ ರಾಜ್ಯಶಾಸ್ತ್ರ ಪಠ್ಯಪುಸ್ತಕದ ಮೊದಲ ಅಧ್ಯಾಯದಲ್ಲಿದ್ದ ‘ಸಂವಿಧಾನ – ಏಕೆ ಮತ್ತು ಹೇಗೆ’ ಎಂಬ ಶೀರ್ಷಿಕೆಯ ಪಾಠದಲ್ಲಿದ್ದ ಸಂವಿಧಾನದ ಶಾಸನ ಸಮಿತಿಗೆ ಸಂಬಂಧಿಸಿದ ಭಾಗದಲ್ಲಿದ್ದ ವಾಕ್ಯವೊಂದನ್ನು ಪರಿಷ್ಕರಣೆ ಮಾಡಲಾಗಿದ್ದು, ಆಜಾದ್ ಅವರ ಹೆಸರನ್ನು ತೆಗೆದು ಹಾಕಲಾಗಿದೆ.

ಪರಿಷ್ಕೃತ ಸಾಲಿನಲ್ಲಿ, ‘ಸಾಮಾನ್ಯವಾಗಿ, ಜವಾಹರಲಾಲ್ ನೆಹರು, ರಾಜೇಂದ್ರ ಪ್ರಸಾದ್, ಸರ್ದಾರ್ ಪಟೇಲ್ ಅಥವಾ ಬಿ.ಆರ್ ಅಂಬೇಡ್ಕರ್ ಈ ಸಮಿತಿಗಳ ಅಧ್ಯಕ್ಷರಾಗಿದ್ದರು’ ಎಂದು ಮಾಡಲಾಗಿದೆ.

ಅದೇ ಪಠ್ಯಪುಸ್ತಕದ ಹತ್ತನೇ ಅಧ್ಯಾಯದ ‘ಸಂವಿಧಾನದ ತತ್ವಶಾಸ್ತ್ರ’ ಎಂಬ ಶೀರ್ಷಿಕೆಯ ಪಾಠದಲ್ಲಿ ಜಮ್ಮು ಮತ್ತು ಕಾಶ್ಮೀರದ ಷರತ್ತುಬದ್ಧ ಸೇರ್ಪಡೆಯ ಉಲ್ಲೇಖವನ್ನು ಸಹ ಅಳಿಸಲಾಗಿದೆ.

‘ಸಂವಿಧಾನದ 370 ನೇ ವಿಧಿಯ ಅಡಿಯಲ್ಲಿ ಸ್ವಾಯತ್ತತೆಯನ್ನು ಕಾಪಾಡುವ ಬದ್ಧತೆಯ ಆಧಾರದಲ್ಲಿ ಜಮ್ಮು ಮತ್ತು ಕಾಶ್ಮೀರವನ್ನು ಭಾರತೀಯ ಒಕ್ಕೂಟಕ್ಕೆ ಸೇರಿಸಲಾಯಿತು’ ಎಂದು ಈ ಹಿಂದೆ ವಿವರಿಸಲಾಗಿತ್ತು.

2009ರಲ್ಲಿ ಪ್ರಾರಂಭಿಸಲಾಗಿದ್ದ ಮೌಲಾನಾ ಆಜಾದ್ ಫೆಲೋಶಿಪ್ ಅನ್ನು ಕಳೆದ ವರ್ಷ, ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು ಸ್ಥಗಿತಗೊಳಿಸಿತ್ತು. ಈ ಫೆಲೋಶಿಪ್‌ ಅಡಿಯಲ್ಲಿ ಆರು ಅನುಸೂಚಿತ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಐದು ವರ್ಷಗಳವರೆಗೆ ಹಣಕಾಸಿನ ನೆರವು ನೀಡಲಾಗುತ್ತಿತ್ತು.

andolanait

Recent Posts

ಅಮೇರಿಕಾದಲ್ಲಿ ಕಾಣೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಮೃತದೇಹ ಪತ್ತೆ

ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್…

6 hours ago

ವಿವಾಹಪೂರ್ವ ದೈಹಿಕ ಸಂಬಂಧದಲ್ಲಿ ಎಚ್ಚರಿಕೆ ಅಗತ್ಯ : ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ವಿವಾಹಪೂರ್ವ ದೈಹಿಕ ಸಂಬಂಧಗಳಲ್ಲಿ ಅತ್ಯಂತ ಜಾಗರೂಕತೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್‌ ಎಚ್ಚರಿಕೆ ನೀಡಿದೆ. ಮದುವೆಯ ಸುಳ್ಳು…

7 hours ago

ಎಕ್ಸ್‌ ವೆಬ್‌ಸೈಟ್‌ ಸ್ಥಗಿತ : ಜಾಗತಿಕ ಬಳಕೆದಾರರ ಪರದಾಟ

ಮೈಸೂರು : ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ಎಕ್ಸ್ (X, ಹಿಂದಿನ ಟ್ವಿಟರ್) ಇಂದು ಸಂಜೆ (ಫೆಬ್ರವರಿ 16)…

7 hours ago

ರಾಹುಲ್‌ ಗಾಂಧಿ ಪ್ರಶ್ನೆಗೆ ಪ್ರಾಮಾಣಿಕವಾಗಿ ಉತ್ತರಿಸಿ : ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ…

8 hours ago

ಕಾಡಾನೆಗಳ ದಾಳಿ ; ಗುಡಿಸಲು, ಸೋಲಾರ್ ತಂತಿಬೇಲಿ ನಾಶ

ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ…

8 hours ago

ಮೈಸೂರು | ಅಪರಾಧ ನಿಯಂತ್ರಣ ಕುರಿತು ಎಡಿಜಿಪಿ ಸಭೆ

ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…

9 hours ago