BREAKING NEWS

ದೇಶದ ಮೊದಲ ಶಿಕ್ಷಣ ಮಂತ್ರಿ ಮೌಲಾನಾ ಅಬುಲ್‌ ಕಲಾಂ ಆಜಾದ್‌ ಉಲ್ಲೇಖ ಕೈಬಿಟ್ಟ NCERT

ನವದೆಹಲಿ: ಸ್ವಾತಂತ್ರ್ಯ ಹೋರಾಟಗಾರ ಮತ್ತು ಭಾರತದ ಮೊದಲ ಶಿಕ್ಷಣ ಸಚಿವ ಮೌಲಾನಾ ಅಬುಲ್ ಕಲಾಂ ಆಜಾದ್ ಅವರಿಗೆ ಸಂಬಂಧಿಸಿದ ಉಲ್ಲೇಖಗಳನ್ನು 11 ನೇ ತರಗತಿಯ ಹೊಸ ರಾಜ್ಯಶಾಸ್ತ್ರ ಪಠ್ಯಪುಸ್ತಕದಿಂದ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ತೆಗೆದುಹಾಕಿದೆ.

ಕಳೆದ ವರ್ಷ ತನ್ನ ‘ಪಠ್ಯ ತರ್ಕಬದ್ಧಗೊಳಿಸುವ ಕಾರ್ಯ ನಡೆಸಿರುವ ಎನ್‌ಸಿಇಆರ್‌ಟಿ, ಅಪ್ರಸ್ತುತ ಮತ್ತು ವ್ಯಾಪ್ತಿಮೀರಿದ ವಿಷಯ ಎಂಬ ಕಾರಣ ನೀಡಿ ಗುಜರಾತ್ ಗಲಭೆಗಳು, ಮೊಘಲ್ ಯುಗ, ತುರ್ತು ಪರಿಸ್ಥಿತಿ, ಶೀತಲ ಸಮರ, ನಕ್ಸಲ್‌ ಚಳವಳಿಯೂ ಸೇರಿದಂತೆ ಹಲವು ವಿಷಯಗಳನ್ನು ಪಠ್ಯದಿಂದ ಕೈ ಬಿಟ್ಟಿದೆ.

ಆದರೆ, ತರ್ಕಬದ್ಧಗೊಳಿಸುವಿಕೆಯ ಟಿಪ್ಪಣಿಯಲ್ಲಿ 11 ನೇ ತರಗತಿಯ ರಾಜ್ಯಶಾಸ್ತ್ರ ಪಠ್ಯಪುಸ್ತಕದಲ್ಲಾದ ಬದಲಾವಣೆಗಳ ಉಲ್ಲೇಖವಿಲ್ಲ.

ಈ ವರ್ಷ ಯಾವುದೇ ಪಠ್ಯಕ್ರಮವನ್ನು ಪರಿಷ್ಕರಣೆ ಮಾಡಿಲ್ಲ. ಕಳೆದ ವರ್ಷ ಜೂನ್‌ನಲ್ಲಿ ಪಠ್ಯಕ್ರಮವನ್ನು ತರ್ಕಬದ್ಧಗೊಳಿಸಲಾಗಿದೆ ಎಂದು ಎನ್‌ಸಿಇಆರ್‌ಟಿ ಹೇಳಿಕೊಂಡಿದೆ.

‘ತರ್ಕಬದ್ಧಗೊಂಡ ಪುಸ್ತಕದಲ್ಲಿ ಬದಲಾವಣೆಗಳನ್ನು ಉಲ್ಲೇಖಿಸದಿರುವುದು ಮೇಲ್ವಿಚಾರಣೆ ಕೊರತೆಯಿಂದ ಆಗಿದ್ದಿರಬಹುದು’ ಎಂದು ಎನ್‌ಸಿಇಆರ್‌ಟಿ ನಿರ್ದೇಶಕ ದಿನೇಶ್ ಸಕ್ಲಾನಿ ತಿಳಿಸಿದ್ದಾರೆ.

11 ನೇ ತರಗತಿಯ ರಾಜ್ಯಶಾಸ್ತ್ರ ಪಠ್ಯಪುಸ್ತಕದ ಮೊದಲ ಅಧ್ಯಾಯದಲ್ಲಿದ್ದ ‘ಸಂವಿಧಾನ – ಏಕೆ ಮತ್ತು ಹೇಗೆ’ ಎಂಬ ಶೀರ್ಷಿಕೆಯ ಪಾಠದಲ್ಲಿದ್ದ ಸಂವಿಧಾನದ ಶಾಸನ ಸಮಿತಿಗೆ ಸಂಬಂಧಿಸಿದ ಭಾಗದಲ್ಲಿದ್ದ ವಾಕ್ಯವೊಂದನ್ನು ಪರಿಷ್ಕರಣೆ ಮಾಡಲಾಗಿದ್ದು, ಆಜಾದ್ ಅವರ ಹೆಸರನ್ನು ತೆಗೆದು ಹಾಕಲಾಗಿದೆ.

ಪರಿಷ್ಕೃತ ಸಾಲಿನಲ್ಲಿ, ‘ಸಾಮಾನ್ಯವಾಗಿ, ಜವಾಹರಲಾಲ್ ನೆಹರು, ರಾಜೇಂದ್ರ ಪ್ರಸಾದ್, ಸರ್ದಾರ್ ಪಟೇಲ್ ಅಥವಾ ಬಿ.ಆರ್ ಅಂಬೇಡ್ಕರ್ ಈ ಸಮಿತಿಗಳ ಅಧ್ಯಕ್ಷರಾಗಿದ್ದರು’ ಎಂದು ಮಾಡಲಾಗಿದೆ.

ಅದೇ ಪಠ್ಯಪುಸ್ತಕದ ಹತ್ತನೇ ಅಧ್ಯಾಯದ ‘ಸಂವಿಧಾನದ ತತ್ವಶಾಸ್ತ್ರ’ ಎಂಬ ಶೀರ್ಷಿಕೆಯ ಪಾಠದಲ್ಲಿ ಜಮ್ಮು ಮತ್ತು ಕಾಶ್ಮೀರದ ಷರತ್ತುಬದ್ಧ ಸೇರ್ಪಡೆಯ ಉಲ್ಲೇಖವನ್ನು ಸಹ ಅಳಿಸಲಾಗಿದೆ.

‘ಸಂವಿಧಾನದ 370 ನೇ ವಿಧಿಯ ಅಡಿಯಲ್ಲಿ ಸ್ವಾಯತ್ತತೆಯನ್ನು ಕಾಪಾಡುವ ಬದ್ಧತೆಯ ಆಧಾರದಲ್ಲಿ ಜಮ್ಮು ಮತ್ತು ಕಾಶ್ಮೀರವನ್ನು ಭಾರತೀಯ ಒಕ್ಕೂಟಕ್ಕೆ ಸೇರಿಸಲಾಯಿತು’ ಎಂದು ಈ ಹಿಂದೆ ವಿವರಿಸಲಾಗಿತ್ತು.

2009ರಲ್ಲಿ ಪ್ರಾರಂಭಿಸಲಾಗಿದ್ದ ಮೌಲಾನಾ ಆಜಾದ್ ಫೆಲೋಶಿಪ್ ಅನ್ನು ಕಳೆದ ವರ್ಷ, ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು ಸ್ಥಗಿತಗೊಳಿಸಿತ್ತು. ಈ ಫೆಲೋಶಿಪ್‌ ಅಡಿಯಲ್ಲಿ ಆರು ಅನುಸೂಚಿತ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಐದು ವರ್ಷಗಳವರೆಗೆ ಹಣಕಾಸಿನ ನೆರವು ನೀಡಲಾಗುತ್ತಿತ್ತು.

andolanait

Recent Posts

ಕೊಡಗು‌ ಸಿದ್ದಾಪುರ ದರೋಡೆ ಪ್ರಕರಣ ಭೇದಿಸಲು ವಿಶೇಷ ಕಾರ್ಯಪಡೆ ಸಜ್ಜು

ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…

2 hours ago

ಚಿರತೆ ಮರಿ ಸೆರೆ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ ಗ್ರಾಮಸ್ಥರು

ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…

2 hours ago

ಹುಣಸೂರಿನಲ್ಲಿ ಹಾಡಹಗಲೇ ಚಿನ್ನಭರಣ ದರೋಡೆ : ಐಜಿಪಿ ಬೋರಲಿಂಗಯ್ಯ ಹೇಳಿದ್ದೇನು?

ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್‌ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್‌…

4 hours ago

ವರುಣಾ ನಾಲೆಯಲ್ಲಿ ಮಹಿಳೆ ಶವ ಪತ್ತೆ : ಚಿನ್ನಕ್ಕಾಗಿ ಕೊಲೆ ಶಂಕೆ?

ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…

4 hours ago

ವಾಯುನೆಲೆ ಮೇಲೆ ಭಾರತದ ದಾಳಿ ಒಪ್ಪಿಕೊಂಡ ಪಾಕಿಸ್ತಾನ

ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…

4 hours ago

ಸಿನಿ ಪಯಣಕ್ಕೆ ದಳಪತಿ ವಿಜಯ್‌ ವಿದಾಯ : ಭಾವುಕರಾಗಿ ಅಭಿಮಾನಿಗಳಿಗೆ ಹೇಳಿದ್ದೇನು?

ಚೆನ್ನೈ : ದಳಪತಿ ವಿಜಯ್‌ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…

4 hours ago