ಹೊಸ ದಿಲ್ಲಿ: ಕೊರೊನಾ ವೈರಸ್ ಹೊಸ ಅಲೆಯ ಸಾಧ್ಯತೆಯ ಆತಂಕವನ್ನು ವಿಶ್ವ ಆರೋಗ್ಯ ಸಂಸ್ಥೆ ಹೊರಹಾಕಿದೆ. ಈ ಕುರಿತಾಗಿ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯ ವಿಜ್ಞಾನಿ ಡಾ. ಸೌಮ್ಯ ಸ್ವಾಮಿನಾಥನ್, ಕೆಲವು ದೇಶಗಳು ಕೋವಿಡ್ ಹೊಸ ಅಲೆಯನ್ನು ಎದುರಿಸಬೇಕಾಗಿ ಬರಬಹುದು ಎಂದು ಎಚ್ಚರಿಕೆ ನೀಡಿದ್ದಾರೆ. ಅದೂ ಕೂಡಾ ಓಮಿಕ್ರಾನ್ನ ಉಪ ರೂಪಾಂತರಿ ತಳಿ ಎಕ್ಸ್ಬಿಬಿ ವೈರಸ್ನಿಂದ ಹೊಸ ಅಲೆ ಸೃಷ್ಟಿಯಾಗುವ ಆತಂಕವನ್ನು ಅವರು ಹೊರ ಹಾಕಿದ್ದಾರೆ.
ಓಮಿಕ್ರಾನ್ ವೈರಾಣು ಈಗಾಗಲೇ 300ಕ್ಕೂ ಹೆಚ್ಚು ಉಪ ರೂಪಾಂತರಿಗಳನ್ನು ಸೃಷ್ಟಿಸಿದೆ. ಆದರೆ ಈ ಎಲ್ಲ ಉಪ ರೂಪಾಂತರಿಗಳಿಗಳ ಪೈಕಿ ಎಕ್ಸ್ಬಿಬಿ ವೈರಾಣು ಅಪಾಯಕಾರಿ ಆಗಬಲ್ಲದು ಎಂದು ವಿಶ್ವ ಆರೋಗ್ಯ ಸಂಸ್ಥೆ ಅಂದಾಜಿಸಿದೆ. ಏಕೆಂದರೆ ಇದು ಮಿಶ್ರ ತಳಿಯ ವೈರಾಣು ಆಗಿದ್ದು, ಬೇರೆ ರೀತಿಯ ಸಂಯೋಜನೆ ಹೊಂದಿದೆ. ಈ ರೀತಿಯ ಹಲವು ತಳಿಗಳು ಈಗಾಗಲೇ ಪತ್ತೆಯಾಗಿವೆ. ಈ ವೈರಣು ಅತಿ ಸುಲಭವಾಗಿ ರೋಗ ನಿರೋಧಕ ಶಕ್ತಿಯನ್ನು ಭೇದಿಸುವ ಸಾಮರ್ಥ್ಯ ಹೊಂದಿವೆ.
ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಜಗಮಗಿಸುವ ದೀಪಾಲಂಕಾರ, ಫಲಪುಷ್ಪ ಪ್ರದರ್ಶನದ ಸೊಬಗಿನ ಮಧ್ಯೆ ಪಾರಂಪರಿಕ ಪೊಲೀಸ್ ಬ್ಯಾಂಡ್ನ ಸದ್ದಿನೊಂದಿಗೆ…
ಕೊಳ್ಳೇಗಾಲ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಯಲ್ಲಿರುವ ಸಾಕಮ್ಮಾಸ್ ಕಾಫಿ ಪುಡಿ ಅಂಗಡಿ ಬುಧವಾರ ರಾತ್ರಿ ಸಂಪೂರ್ಣ…
ಮೈಸೂರು: ರಾಜ್ಯದ ವಿವಿಧೆಡೆ ಸೇವೆ ಸಲ್ಲಿಸುತ್ತಿದ್ದ 25 ಮಂದಿ ಐಪಿಎ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ನೀಡಿದೆ. ಅವರಲ್ಲಿ…
ಕೊಡಗು: ಕರ್ನಾಟಕ ಸರ್ಕಾರದ ಆದೇಶದಂತೆ ಕೊಡಗಿನ ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ಅವರನ್ನು ಬೆಳಗಾವಿ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಖಾಲಿಯಾದ ಸ್ಥಳಕ್ಕೆ…
ಬೆಂಗಳೂರು: ಸಣ್ಣ ವಯಸ್ಸಿನಿಂದಲೇ ಬರವಣಿಗೆ ರೂಢಿಸಿಕೊಂಡು 9ನೇ ವಯಸ್ಸಿಗೆ 'ಟೇಲ್ಸ್ ಬೈ ಪರಿ' ಪುಸ್ತಕವನ್ನು ಬರೆದು ಹೆಸರು ಮಾಡಿರುವ ನಮ್ಮ…
ನವದೆಹಲಿ: ಕೋಗಿಲು ಲೇಔಟ್ನಲ್ಲಿ ಅಕ್ರಮ ನಿವಾಸಿಗಳಿಗೆ ಮನೆ ನೀಡುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ದಡ್ಡತನದ ಪರಮಾವಧಿ ಎಂದು ಕೇಂದ್ರ ಸಚಿವ…