ಹೊಸ ದಿಲ್ಲಿ: ಕೊರೊನಾ ವೈರಸ್ ಹೊಸ ಅಲೆಯ ಸಾಧ್ಯತೆಯ ಆತಂಕವನ್ನು ವಿಶ್ವ ಆರೋಗ್ಯ ಸಂಸ್ಥೆ ಹೊರಹಾಕಿದೆ. ಈ ಕುರಿತಾಗಿ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯ ವಿಜ್ಞಾನಿ ಡಾ. ಸೌಮ್ಯ ಸ್ವಾಮಿನಾಥನ್, ಕೆಲವು ದೇಶಗಳು ಕೋವಿಡ್ ಹೊಸ ಅಲೆಯನ್ನು ಎದುರಿಸಬೇಕಾಗಿ ಬರಬಹುದು ಎಂದು ಎಚ್ಚರಿಕೆ ನೀಡಿದ್ದಾರೆ. ಅದೂ ಕೂಡಾ ಓಮಿಕ್ರಾನ್ನ ಉಪ ರೂಪಾಂತರಿ ತಳಿ ಎಕ್ಸ್ಬಿಬಿ ವೈರಸ್ನಿಂದ ಹೊಸ ಅಲೆ ಸೃಷ್ಟಿಯಾಗುವ ಆತಂಕವನ್ನು ಅವರು ಹೊರ ಹಾಕಿದ್ದಾರೆ.
ಓಮಿಕ್ರಾನ್ ವೈರಾಣು ಈಗಾಗಲೇ 300ಕ್ಕೂ ಹೆಚ್ಚು ಉಪ ರೂಪಾಂತರಿಗಳನ್ನು ಸೃಷ್ಟಿಸಿದೆ. ಆದರೆ ಈ ಎಲ್ಲ ಉಪ ರೂಪಾಂತರಿಗಳಿಗಳ ಪೈಕಿ ಎಕ್ಸ್ಬಿಬಿ ವೈರಾಣು ಅಪಾಯಕಾರಿ ಆಗಬಲ್ಲದು ಎಂದು ವಿಶ್ವ ಆರೋಗ್ಯ ಸಂಸ್ಥೆ ಅಂದಾಜಿಸಿದೆ. ಏಕೆಂದರೆ ಇದು ಮಿಶ್ರ ತಳಿಯ ವೈರಾಣು ಆಗಿದ್ದು, ಬೇರೆ ರೀತಿಯ ಸಂಯೋಜನೆ ಹೊಂದಿದೆ. ಈ ರೀತಿಯ ಹಲವು ತಳಿಗಳು ಈಗಾಗಲೇ ಪತ್ತೆಯಾಗಿವೆ. ಈ ವೈರಣು ಅತಿ ಸುಲಭವಾಗಿ ರೋಗ ನಿರೋಧಕ ಶಕ್ತಿಯನ್ನು ಭೇದಿಸುವ ಸಾಮರ್ಥ್ಯ ಹೊಂದಿವೆ.
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…
ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…
ಮೈಸೂರಿನ ದಟ್ಟಗಳ್ಳಿ ೩ ನೇ ಹಂತದ ಕನಕದಾಸನಗರವು, ಬಡಾವಣೆ ನಿರ್ಮಾಣವಾದ ಆರಂಭದಲ್ಲಿ ರಾಮಕೃಷ್ಣ ನಗರ ಉಪ ಅಂಚೆ ಕಚೇರಿಗೆ ಸೇರಿತ್ತು.…
ಪುನೀತ್ ಮಡಿಕೇರಿ ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆ; ಅಗತ್ಯವಿರುವಷ್ಟು ವಿದ್ಯುತ್ ಕಂಬಗಳು, ಪರಿವರ್ತಕಗಳು, ವಾಹಕಗಳ ದಾಸ್ತಾನು ಮಡಿಕೇರಿ: ಗುಡ್ಡಗಾಡು ಪ್ರದೇಶವಾಗಿರುವ ಕೊಡಗು…