BREAKING NEWS

ಶ್ರೀಕಂಠೇಶ್ವರ ಪಂಚಮಹಾರಥೋತ್ಸವ ವಿಜೃಂಭಣೆಯಿಂದ ಆಗಲಿ – ದರ್ಶನ್ ಧ್ರುವನಾರಾಯಣ್‌

ನಂಜನಗೂಡು : ದಕ್ಷಿಣಕಾಶಿ ಪ್ರಖ್ಯಾತಿಯ ನಂಜನಗೂಡು ಶ್ರೀ ನಂಜುಂಡೇಶ್ವರನ ಜಾತ್ರಾ ಮಹೋತ್ಸಮಮಾರ್ಚ್ 22 ರಂದು ಜರುಗಲಿದ್ದು ಜಾತ್ರೆ ಯಶಸ್ಸಿಗೆ ಸುತ್ತಲಿನ ಏಳು ಹಳ್ಳಿ ಗ್ರಾಮಸ್ಥರು, ವಿವಿಧ ಇಲಾಖೆಗಳ ಅಧಿಕಾರಿಗಳು ಸಹಕರಿಸಬೇಕೆಂದು ನಂಜನಗೂಡು ಶಾಸಕರಾದ ದರ್ಶನ್ ಧೃವನಾರಾಯಣ್ ಹೇಳಿದರು.

ನಂಜನಗೂಡು ದೇವಾಲಯದ ದಾಸೋಹ ಭವನದಲ್ಲಿ ನಡೆದ ಪೂರ್ವ ಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತಿವರ್ಷ ನಡೆಯುವ ವೈಭವದ ಜಾತ್ರೆಗೆ ಹೊರರಾಜ್ಯ ಹಾಗೂ ಹೊರದೇಶಗಳಿಂದ ಲಕ್ಷಾಂತರ ಭಕ್ತಾಧಿಗಳು ಆಗಮಿಸುತಿದ್ದು ಅವರುಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದರೊಂದಿಗೆ ರಕ್ಷಣೆಯ ಜವಾಬ್ದಾರಿಯು ನಮ್ಮ ಮೇಲಿದೆ ಎಂದರು.

ನಗರದ ರಸ್ತೆಗಳು, ವಿದ್ಯುತ್ ದೀಪಗಳು, ಜನಸಂದಣಿ ನಿಯಂತ್ರಿಸುವಲ್ಲಿ ಪೊಲೀಸರ ಪಾತ್ರ ಪ್ರಮುಖವಾಗಿದ್ದು, ಜನ ಸ್ನಾನಕ್ಕೆ ಇಳಿಯುವಲ್ಲಿ ಜಾಗ್ರತೆ ವಹಿಸುವುದು, ಮಕ್ಕಳು ಪೋಷಕರಿಂದ ತಪ್ಪಿಸಿಕೊಳ್ಳದಂತೆ ಮುಂಜಾಗ್ರತೆ ವಹಿಸಬೇಕು ಎಂದರು.

ಜಿಲ್ಲಾಧಿಕಾರಿ ಡಾ.ರಾಜೇಂದ್ರ ಮಾತನಾಡಿ, ಬಹಳ ಜನಸಂದಣಿ ಸೇರುವ ಜಾತ್ರಾ ಮಹೋತ್ಸವ ಇದಾಗಿದ್ದು, ಅನಧಿಕೃತ ವ್ಯಕ್ತಿಗಳ ಬಗೆಗೆ ಎಚ್ಚರಿಕೆಯಿಂದಿರಬೇಕು, ದೊಡ್ಡ ತೇರು ಎಳೆಯುವಾಗ ಜಾಗ್ರತೆ ಬಹಳ ಮುಖ್ಯ. ಏಳು ಗ್ರಾಮದ ಗ್ರಾಮಸ್ಥರ ಸಹಕಾರವು ಮುಖ್ಯವಾಗಿದ್ದು, ಆ ಸಂದರ್ಭದಲ್ಲಿ ಜಾಗರೂಕತೆ ಬಹಳ ಮುಖ್ಯ. ಮಹಿಳೆಯರು,ಮಕ್ಕಳು ಹಾಗೂ ಅವರ ಆಭರಣಗಳ ಬಗೆಗೆ ಎಚ್ಚರ ವಹಿಸಿ ಎಂದರು.

ಚೆಸ್ಕಾಂ ನವರು ಅನಿಯಂತ್ರಿತ ವಿದ್ಯುತ್ ಸರಬರಾಜಿನೊಂದಿಗೆ ವರಣರಂಜಿತ ದೀಪಾಲಂಕಾರ ಮಾಡುವುದು ಮತ್ತು ವಿವಿಧ ಇಲಾಖೆಯವರು ತಮ್ಮ ಕಟ್ಟಡಗಳ ಮೇಲೆ ದೀಪಾಲಂಕಾರ ಮಾಡುವುದರೊಂದಿಗೆ ಜಾತ್ರಾ ರಂಗನ್ನು ಹೆಚ್ಚುವಂತೆ ನೋಡಿಕೊಳ್ಳಿ ಎಂದರು.

ದೇವಸ್ಥಾನದ ಸುತ್ತಮುತ್ತ ಸಿಸಿಟಿವಿ ಕ್ಯಾಮರಾ ಅಳವಡಿಸುವುದರೊಂದಿಗೆ ಸ್ವಚ್ಚತೆ,ಭದ್ರತಾ ಸಿಬ್ಬಂದಿ ಎಲ್ಲಾ ವ್ಯವಸ್ಥೆಗಳನ್ನು ಮಾಡುವುದು.

ಶಕ್ತಿ ಯೋಜನೆ ಹಿನ್ನೆಲೆ ಮಹಿಳಾ ಭಕ್ತರ ಸಂಖ್ಯೆ ಹೆಚ್ಚಾಗುವ ಕಾರಣ ಕೆ.ಎಸ್.ಆರ್.ಟಿ.ಸಿ ವತಿಯಿಂದ ಹೆಚ್ಚಿನ ಬಸ್‌ ವ್ಯವಸ್ಥೆ ಮಾಡಿ, ನಂಜನಗೂಡು ಡಿಪೋ ಅಷ್ಟನ್ನೆ ನೆಚ್ಚಿಕೊಳ್ಳದೆ ಅಕ್ಕಪಕ್ಕದ ಡಿಪೋಗಳಿಂದ ಬಸ್ ತರಿಸಿ, ವಾಹನ ಪಾರ್ಕಿಂಗ್, ಸೂಚನಾ ಫಲಕಗಳು ವ್ಯವಸ್ಥಿತವಾಗಿರಲಿ ಎಂದರು.

ಸಭೆಯಲ್ಲಿ ಜಿ.ಪಂ ಉಪಕಾರ್ಯದರ್ಶಿ ಕೃಷ್ಣಂ ರಾಜು, ಅಡಿಷನಲ್ ಎಸ್ಪಿ ಬಾಬು, ಏಳು ಹಳ್ಳಿಗಳ ಯಜಮಾನರು, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು

andolana

Recent Posts

ಮಳವಳ್ಳಿ ದರೋಡೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…

4 hours ago

ಪ್ರಚೋದನಕಾರಿ ಭಾಷಣ ; ಯತ್ನಾಳ್, ಅನಂತ್ ಕುಮಾರ್ ಹೆಗ್ಡೆ ವಿರುದ್ಧ ದೂರು ದಾಖಲು

ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್‌ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…

5 hours ago

ಆನೆ ಹಾವಳಿ ತಡೆಗೆ ಶಾಶ್ವತ ಪರಿಹಾರ : ಸಚಿವ ಖಂಡ್ರೆ ಭರವಸೆ

ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…

5 hours ago

ಭದ್ರಾ ಅಭಯಾರಣ್ಯ ಪರಿಸರ ಸೂಕ್ಷ್ಮ ಪ್ರದೇಶ ಗುರುತಿಸಲು ಕ್ರಮ : ಈಶ್ವರ ಖಂಡ್ರೆ

ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…

5 hours ago

ಎಲ್‌ಪಿಜಿ ರಿಫಿಲಿಂಗ್‌ ಅವಧಿ ಹೆಚ್ಚಳ ; ವದಂತಿ ನಿರಾಕರಿಸಿದ ಕೇಂದ್ರ

ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್‌ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…

5 hours ago

ಆಕಸ್ಮಿಕ ಬೆಂಕಿ; ಸ್ಕೂಟಿ ಭಸ್ಮ, ಮಹಿಳೆ ಪಾರು

ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…

5 hours ago