BREAKING NEWS

ಶ್ರೀಕಂಠೇಶ್ವರ ಪಂಚಮಹಾರಥೋತ್ಸವ ವಿಜೃಂಭಣೆಯಿಂದ ಆಗಲಿ – ದರ್ಶನ್ ಧ್ರುವನಾರಾಯಣ್‌

ನಂಜನಗೂಡು : ದಕ್ಷಿಣಕಾಶಿ ಪ್ರಖ್ಯಾತಿಯ ನಂಜನಗೂಡು ಶ್ರೀ ನಂಜುಂಡೇಶ್ವರನ ಜಾತ್ರಾ ಮಹೋತ್ಸಮಮಾರ್ಚ್ 22 ರಂದು ಜರುಗಲಿದ್ದು ಜಾತ್ರೆ ಯಶಸ್ಸಿಗೆ ಸುತ್ತಲಿನ ಏಳು ಹಳ್ಳಿ ಗ್ರಾಮಸ್ಥರು, ವಿವಿಧ ಇಲಾಖೆಗಳ ಅಧಿಕಾರಿಗಳು ಸಹಕರಿಸಬೇಕೆಂದು ನಂಜನಗೂಡು ಶಾಸಕರಾದ ದರ್ಶನ್ ಧೃವನಾರಾಯಣ್ ಹೇಳಿದರು.

ನಂಜನಗೂಡು ದೇವಾಲಯದ ದಾಸೋಹ ಭವನದಲ್ಲಿ ನಡೆದ ಪೂರ್ವ ಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತಿವರ್ಷ ನಡೆಯುವ ವೈಭವದ ಜಾತ್ರೆಗೆ ಹೊರರಾಜ್ಯ ಹಾಗೂ ಹೊರದೇಶಗಳಿಂದ ಲಕ್ಷಾಂತರ ಭಕ್ತಾಧಿಗಳು ಆಗಮಿಸುತಿದ್ದು ಅವರುಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದರೊಂದಿಗೆ ರಕ್ಷಣೆಯ ಜವಾಬ್ದಾರಿಯು ನಮ್ಮ ಮೇಲಿದೆ ಎಂದರು.

ನಗರದ ರಸ್ತೆಗಳು, ವಿದ್ಯುತ್ ದೀಪಗಳು, ಜನಸಂದಣಿ ನಿಯಂತ್ರಿಸುವಲ್ಲಿ ಪೊಲೀಸರ ಪಾತ್ರ ಪ್ರಮುಖವಾಗಿದ್ದು, ಜನ ಸ್ನಾನಕ್ಕೆ ಇಳಿಯುವಲ್ಲಿ ಜಾಗ್ರತೆ ವಹಿಸುವುದು, ಮಕ್ಕಳು ಪೋಷಕರಿಂದ ತಪ್ಪಿಸಿಕೊಳ್ಳದಂತೆ ಮುಂಜಾಗ್ರತೆ ವಹಿಸಬೇಕು ಎಂದರು.

ಜಿಲ್ಲಾಧಿಕಾರಿ ಡಾ.ರಾಜೇಂದ್ರ ಮಾತನಾಡಿ, ಬಹಳ ಜನಸಂದಣಿ ಸೇರುವ ಜಾತ್ರಾ ಮಹೋತ್ಸವ ಇದಾಗಿದ್ದು, ಅನಧಿಕೃತ ವ್ಯಕ್ತಿಗಳ ಬಗೆಗೆ ಎಚ್ಚರಿಕೆಯಿಂದಿರಬೇಕು, ದೊಡ್ಡ ತೇರು ಎಳೆಯುವಾಗ ಜಾಗ್ರತೆ ಬಹಳ ಮುಖ್ಯ. ಏಳು ಗ್ರಾಮದ ಗ್ರಾಮಸ್ಥರ ಸಹಕಾರವು ಮುಖ್ಯವಾಗಿದ್ದು, ಆ ಸಂದರ್ಭದಲ್ಲಿ ಜಾಗರೂಕತೆ ಬಹಳ ಮುಖ್ಯ. ಮಹಿಳೆಯರು,ಮಕ್ಕಳು ಹಾಗೂ ಅವರ ಆಭರಣಗಳ ಬಗೆಗೆ ಎಚ್ಚರ ವಹಿಸಿ ಎಂದರು.

ಚೆಸ್ಕಾಂ ನವರು ಅನಿಯಂತ್ರಿತ ವಿದ್ಯುತ್ ಸರಬರಾಜಿನೊಂದಿಗೆ ವರಣರಂಜಿತ ದೀಪಾಲಂಕಾರ ಮಾಡುವುದು ಮತ್ತು ವಿವಿಧ ಇಲಾಖೆಯವರು ತಮ್ಮ ಕಟ್ಟಡಗಳ ಮೇಲೆ ದೀಪಾಲಂಕಾರ ಮಾಡುವುದರೊಂದಿಗೆ ಜಾತ್ರಾ ರಂಗನ್ನು ಹೆಚ್ಚುವಂತೆ ನೋಡಿಕೊಳ್ಳಿ ಎಂದರು.

ದೇವಸ್ಥಾನದ ಸುತ್ತಮುತ್ತ ಸಿಸಿಟಿವಿ ಕ್ಯಾಮರಾ ಅಳವಡಿಸುವುದರೊಂದಿಗೆ ಸ್ವಚ್ಚತೆ,ಭದ್ರತಾ ಸಿಬ್ಬಂದಿ ಎಲ್ಲಾ ವ್ಯವಸ್ಥೆಗಳನ್ನು ಮಾಡುವುದು.

ಶಕ್ತಿ ಯೋಜನೆ ಹಿನ್ನೆಲೆ ಮಹಿಳಾ ಭಕ್ತರ ಸಂಖ್ಯೆ ಹೆಚ್ಚಾಗುವ ಕಾರಣ ಕೆ.ಎಸ್.ಆರ್.ಟಿ.ಸಿ ವತಿಯಿಂದ ಹೆಚ್ಚಿನ ಬಸ್‌ ವ್ಯವಸ್ಥೆ ಮಾಡಿ, ನಂಜನಗೂಡು ಡಿಪೋ ಅಷ್ಟನ್ನೆ ನೆಚ್ಚಿಕೊಳ್ಳದೆ ಅಕ್ಕಪಕ್ಕದ ಡಿಪೋಗಳಿಂದ ಬಸ್ ತರಿಸಿ, ವಾಹನ ಪಾರ್ಕಿಂಗ್, ಸೂಚನಾ ಫಲಕಗಳು ವ್ಯವಸ್ಥಿತವಾಗಿರಲಿ ಎಂದರು.

ಸಭೆಯಲ್ಲಿ ಜಿ.ಪಂ ಉಪಕಾರ್ಯದರ್ಶಿ ಕೃಷ್ಣಂ ರಾಜು, ಅಡಿಷನಲ್ ಎಸ್ಪಿ ಬಾಬು, ಏಳು ಹಳ್ಳಿಗಳ ಯಜಮಾನರು, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು

andolana

Recent Posts

ರಾಮಮಂದಿರದಲ್ಲಿ ಅಕ್ರಮ; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ

ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…

4 hours ago

ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಮೇಜರ್ ಸರ್ಜರಿಗೆ ಕೇಂದ್ರ ವರಿಷ್ಠರ ಚಿಂತನೆ

ಬೆಂಗಳೂರು ಡೈರಿ  ಆರ್.ಟಿ.ವಿಠ್ಠಲಮೂರ್ತಿ  ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…

4 hours ago

ಅವನತಿಯತ್ತ ಸಾಗಿದ ಅಗಸನ ಕೆರೆಯ ಪುನಶ್ಚೇತನ

ಭೇರ್ಯ ಮಹೇಶ್ ಕೆ.ಆರ್.ನಗರ: ಧರ್ಮಸ್ಥಳ ಸಂಸ್ಥೆಯಿಂದ ಕೆರೆ ಅಭಿವೃದ್ಧಿ; ಗ್ರಾಮಸ್ಥರು, ರೈತರಿಂದಲೂ ಸಹಕಾರ  ಕೆ.ಆರ್.ನಗರ: ಹೂಳು ತುಂಬಿ ಅವನತಿಯ ಹಾದಿ…

4 hours ago

2 ವರ್ಷಗಳಿಂದ ಕಬ್ಬು ಅರೆಯದ ಚುಂಚನಕಟ್ಟೆ ಶ್ರೀರಾಮ ಸಕ್ಕರೆ ಕಾರ್ಖಾನೆ

ಆನಂದ್ ಹೊಸೂರು ಕಬ್ಬಿಗೆ ಕಾರ್ಖಾನೆಗಳಿಂದ ಬೇಡಿಕೆಯಿದ್ದರೂ ರೈತರಿಗೆ ದುಬಾರಿ ಸಾಗಣೆ ವೆಚ್ಚ ಭರಿಸುವ ಅನಿವಾರ್ಯತೆ  ಹೊಸೂರು: ಮಾಜಿ ಶಾಸಕ ದಿವಂಗತ…

4 hours ago

ಸಾಹಿತ್ಯದಲ್ಲೂ ಹೋರಾಟದ ಛಾಪು ಮೂಡಿಸಿದ ಮುಳ್ಳೂರು: ಎಸ್.ಜಿ.ಸಿದ್ದರಾಮಯ್ಯ ಬಣ್ಣನೆ

ಮುಳ್ಳೂರು ನಾಗರಾಜ ಕಾವ್ಯ ಪ್ರಶಸ್ತಿ, ರಾಜಶೇಖರ ಕೋಟಿ ನೆನಪು ಕಾರ್ಯಕ್ರಮ ಪತ್ರಿಕಾರಂಗ ಸೇರಿ ಬಹುತೇಕ ಕ್ಷೇತ್ರಗಳಿಗೆ ಕೋಟಿ ಕೊಡುಗೆ:ಮಹದೇವಸ್ವಾಮಿ ಮೈಸೂರು:…

4 hours ago