BREAKING NEWS

ಶ್ರೀಕಂಠೇಶ್ವರ ಪಂಚಮಹಾರಥೋತ್ಸವ ವಿಜೃಂಭಣೆಯಿಂದ ಆಗಲಿ – ದರ್ಶನ್ ಧ್ರುವನಾರಾಯಣ್‌

ನಂಜನಗೂಡು : ದಕ್ಷಿಣಕಾಶಿ ಪ್ರಖ್ಯಾತಿಯ ನಂಜನಗೂಡು ಶ್ರೀ ನಂಜುಂಡೇಶ್ವರನ ಜಾತ್ರಾ ಮಹೋತ್ಸಮಮಾರ್ಚ್ 22 ರಂದು ಜರುಗಲಿದ್ದು ಜಾತ್ರೆ ಯಶಸ್ಸಿಗೆ ಸುತ್ತಲಿನ ಏಳು ಹಳ್ಳಿ ಗ್ರಾಮಸ್ಥರು, ವಿವಿಧ ಇಲಾಖೆಗಳ ಅಧಿಕಾರಿಗಳು ಸಹಕರಿಸಬೇಕೆಂದು ನಂಜನಗೂಡು ಶಾಸಕರಾದ ದರ್ಶನ್ ಧೃವನಾರಾಯಣ್ ಹೇಳಿದರು.

ನಂಜನಗೂಡು ದೇವಾಲಯದ ದಾಸೋಹ ಭವನದಲ್ಲಿ ನಡೆದ ಪೂರ್ವ ಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತಿವರ್ಷ ನಡೆಯುವ ವೈಭವದ ಜಾತ್ರೆಗೆ ಹೊರರಾಜ್ಯ ಹಾಗೂ ಹೊರದೇಶಗಳಿಂದ ಲಕ್ಷಾಂತರ ಭಕ್ತಾಧಿಗಳು ಆಗಮಿಸುತಿದ್ದು ಅವರುಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದರೊಂದಿಗೆ ರಕ್ಷಣೆಯ ಜವಾಬ್ದಾರಿಯು ನಮ್ಮ ಮೇಲಿದೆ ಎಂದರು.

ನಗರದ ರಸ್ತೆಗಳು, ವಿದ್ಯುತ್ ದೀಪಗಳು, ಜನಸಂದಣಿ ನಿಯಂತ್ರಿಸುವಲ್ಲಿ ಪೊಲೀಸರ ಪಾತ್ರ ಪ್ರಮುಖವಾಗಿದ್ದು, ಜನ ಸ್ನಾನಕ್ಕೆ ಇಳಿಯುವಲ್ಲಿ ಜಾಗ್ರತೆ ವಹಿಸುವುದು, ಮಕ್ಕಳು ಪೋಷಕರಿಂದ ತಪ್ಪಿಸಿಕೊಳ್ಳದಂತೆ ಮುಂಜಾಗ್ರತೆ ವಹಿಸಬೇಕು ಎಂದರು.

ಜಿಲ್ಲಾಧಿಕಾರಿ ಡಾ.ರಾಜೇಂದ್ರ ಮಾತನಾಡಿ, ಬಹಳ ಜನಸಂದಣಿ ಸೇರುವ ಜಾತ್ರಾ ಮಹೋತ್ಸವ ಇದಾಗಿದ್ದು, ಅನಧಿಕೃತ ವ್ಯಕ್ತಿಗಳ ಬಗೆಗೆ ಎಚ್ಚರಿಕೆಯಿಂದಿರಬೇಕು, ದೊಡ್ಡ ತೇರು ಎಳೆಯುವಾಗ ಜಾಗ್ರತೆ ಬಹಳ ಮುಖ್ಯ. ಏಳು ಗ್ರಾಮದ ಗ್ರಾಮಸ್ಥರ ಸಹಕಾರವು ಮುಖ್ಯವಾಗಿದ್ದು, ಆ ಸಂದರ್ಭದಲ್ಲಿ ಜಾಗರೂಕತೆ ಬಹಳ ಮುಖ್ಯ. ಮಹಿಳೆಯರು,ಮಕ್ಕಳು ಹಾಗೂ ಅವರ ಆಭರಣಗಳ ಬಗೆಗೆ ಎಚ್ಚರ ವಹಿಸಿ ಎಂದರು.

ಚೆಸ್ಕಾಂ ನವರು ಅನಿಯಂತ್ರಿತ ವಿದ್ಯುತ್ ಸರಬರಾಜಿನೊಂದಿಗೆ ವರಣರಂಜಿತ ದೀಪಾಲಂಕಾರ ಮಾಡುವುದು ಮತ್ತು ವಿವಿಧ ಇಲಾಖೆಯವರು ತಮ್ಮ ಕಟ್ಟಡಗಳ ಮೇಲೆ ದೀಪಾಲಂಕಾರ ಮಾಡುವುದರೊಂದಿಗೆ ಜಾತ್ರಾ ರಂಗನ್ನು ಹೆಚ್ಚುವಂತೆ ನೋಡಿಕೊಳ್ಳಿ ಎಂದರು.

ದೇವಸ್ಥಾನದ ಸುತ್ತಮುತ್ತ ಸಿಸಿಟಿವಿ ಕ್ಯಾಮರಾ ಅಳವಡಿಸುವುದರೊಂದಿಗೆ ಸ್ವಚ್ಚತೆ,ಭದ್ರತಾ ಸಿಬ್ಬಂದಿ ಎಲ್ಲಾ ವ್ಯವಸ್ಥೆಗಳನ್ನು ಮಾಡುವುದು.

ಶಕ್ತಿ ಯೋಜನೆ ಹಿನ್ನೆಲೆ ಮಹಿಳಾ ಭಕ್ತರ ಸಂಖ್ಯೆ ಹೆಚ್ಚಾಗುವ ಕಾರಣ ಕೆ.ಎಸ್.ಆರ್.ಟಿ.ಸಿ ವತಿಯಿಂದ ಹೆಚ್ಚಿನ ಬಸ್‌ ವ್ಯವಸ್ಥೆ ಮಾಡಿ, ನಂಜನಗೂಡು ಡಿಪೋ ಅಷ್ಟನ್ನೆ ನೆಚ್ಚಿಕೊಳ್ಳದೆ ಅಕ್ಕಪಕ್ಕದ ಡಿಪೋಗಳಿಂದ ಬಸ್ ತರಿಸಿ, ವಾಹನ ಪಾರ್ಕಿಂಗ್, ಸೂಚನಾ ಫಲಕಗಳು ವ್ಯವಸ್ಥಿತವಾಗಿರಲಿ ಎಂದರು.

ಸಭೆಯಲ್ಲಿ ಜಿ.ಪಂ ಉಪಕಾರ್ಯದರ್ಶಿ ಕೃಷ್ಣಂ ರಾಜು, ಅಡಿಷನಲ್ ಎಸ್ಪಿ ಬಾಬು, ಏಳು ಹಳ್ಳಿಗಳ ಯಜಮಾನರು, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು

andolana

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

1 hour ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

3 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

4 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

6 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

11 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

18 hours ago