BREAKING NEWS

ಶ್ರೀಕಂಠೇಶ್ವರ ಪಂಚಮಹಾರಥೋತ್ಸವ ವಿಜೃಂಭಣೆಯಿಂದ ಆಗಲಿ – ದರ್ಶನ್ ಧ್ರುವನಾರಾಯಣ್‌

ನಂಜನಗೂಡು : ದಕ್ಷಿಣಕಾಶಿ ಪ್ರಖ್ಯಾತಿಯ ನಂಜನಗೂಡು ಶ್ರೀ ನಂಜುಂಡೇಶ್ವರನ ಜಾತ್ರಾ ಮಹೋತ್ಸಮಮಾರ್ಚ್ 22 ರಂದು ಜರುಗಲಿದ್ದು ಜಾತ್ರೆ ಯಶಸ್ಸಿಗೆ ಸುತ್ತಲಿನ ಏಳು ಹಳ್ಳಿ ಗ್ರಾಮಸ್ಥರು, ವಿವಿಧ ಇಲಾಖೆಗಳ ಅಧಿಕಾರಿಗಳು ಸಹಕರಿಸಬೇಕೆಂದು ನಂಜನಗೂಡು ಶಾಸಕರಾದ ದರ್ಶನ್ ಧೃವನಾರಾಯಣ್ ಹೇಳಿದರು.

ನಂಜನಗೂಡು ದೇವಾಲಯದ ದಾಸೋಹ ಭವನದಲ್ಲಿ ನಡೆದ ಪೂರ್ವ ಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತಿವರ್ಷ ನಡೆಯುವ ವೈಭವದ ಜಾತ್ರೆಗೆ ಹೊರರಾಜ್ಯ ಹಾಗೂ ಹೊರದೇಶಗಳಿಂದ ಲಕ್ಷಾಂತರ ಭಕ್ತಾಧಿಗಳು ಆಗಮಿಸುತಿದ್ದು ಅವರುಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದರೊಂದಿಗೆ ರಕ್ಷಣೆಯ ಜವಾಬ್ದಾರಿಯು ನಮ್ಮ ಮೇಲಿದೆ ಎಂದರು.

ನಗರದ ರಸ್ತೆಗಳು, ವಿದ್ಯುತ್ ದೀಪಗಳು, ಜನಸಂದಣಿ ನಿಯಂತ್ರಿಸುವಲ್ಲಿ ಪೊಲೀಸರ ಪಾತ್ರ ಪ್ರಮುಖವಾಗಿದ್ದು, ಜನ ಸ್ನಾನಕ್ಕೆ ಇಳಿಯುವಲ್ಲಿ ಜಾಗ್ರತೆ ವಹಿಸುವುದು, ಮಕ್ಕಳು ಪೋಷಕರಿಂದ ತಪ್ಪಿಸಿಕೊಳ್ಳದಂತೆ ಮುಂಜಾಗ್ರತೆ ವಹಿಸಬೇಕು ಎಂದರು.

ಜಿಲ್ಲಾಧಿಕಾರಿ ಡಾ.ರಾಜೇಂದ್ರ ಮಾತನಾಡಿ, ಬಹಳ ಜನಸಂದಣಿ ಸೇರುವ ಜಾತ್ರಾ ಮಹೋತ್ಸವ ಇದಾಗಿದ್ದು, ಅನಧಿಕೃತ ವ್ಯಕ್ತಿಗಳ ಬಗೆಗೆ ಎಚ್ಚರಿಕೆಯಿಂದಿರಬೇಕು, ದೊಡ್ಡ ತೇರು ಎಳೆಯುವಾಗ ಜಾಗ್ರತೆ ಬಹಳ ಮುಖ್ಯ. ಏಳು ಗ್ರಾಮದ ಗ್ರಾಮಸ್ಥರ ಸಹಕಾರವು ಮುಖ್ಯವಾಗಿದ್ದು, ಆ ಸಂದರ್ಭದಲ್ಲಿ ಜಾಗರೂಕತೆ ಬಹಳ ಮುಖ್ಯ. ಮಹಿಳೆಯರು,ಮಕ್ಕಳು ಹಾಗೂ ಅವರ ಆಭರಣಗಳ ಬಗೆಗೆ ಎಚ್ಚರ ವಹಿಸಿ ಎಂದರು.

ಚೆಸ್ಕಾಂ ನವರು ಅನಿಯಂತ್ರಿತ ವಿದ್ಯುತ್ ಸರಬರಾಜಿನೊಂದಿಗೆ ವರಣರಂಜಿತ ದೀಪಾಲಂಕಾರ ಮಾಡುವುದು ಮತ್ತು ವಿವಿಧ ಇಲಾಖೆಯವರು ತಮ್ಮ ಕಟ್ಟಡಗಳ ಮೇಲೆ ದೀಪಾಲಂಕಾರ ಮಾಡುವುದರೊಂದಿಗೆ ಜಾತ್ರಾ ರಂಗನ್ನು ಹೆಚ್ಚುವಂತೆ ನೋಡಿಕೊಳ್ಳಿ ಎಂದರು.

ದೇವಸ್ಥಾನದ ಸುತ್ತಮುತ್ತ ಸಿಸಿಟಿವಿ ಕ್ಯಾಮರಾ ಅಳವಡಿಸುವುದರೊಂದಿಗೆ ಸ್ವಚ್ಚತೆ,ಭದ್ರತಾ ಸಿಬ್ಬಂದಿ ಎಲ್ಲಾ ವ್ಯವಸ್ಥೆಗಳನ್ನು ಮಾಡುವುದು.

ಶಕ್ತಿ ಯೋಜನೆ ಹಿನ್ನೆಲೆ ಮಹಿಳಾ ಭಕ್ತರ ಸಂಖ್ಯೆ ಹೆಚ್ಚಾಗುವ ಕಾರಣ ಕೆ.ಎಸ್.ಆರ್.ಟಿ.ಸಿ ವತಿಯಿಂದ ಹೆಚ್ಚಿನ ಬಸ್‌ ವ್ಯವಸ್ಥೆ ಮಾಡಿ, ನಂಜನಗೂಡು ಡಿಪೋ ಅಷ್ಟನ್ನೆ ನೆಚ್ಚಿಕೊಳ್ಳದೆ ಅಕ್ಕಪಕ್ಕದ ಡಿಪೋಗಳಿಂದ ಬಸ್ ತರಿಸಿ, ವಾಹನ ಪಾರ್ಕಿಂಗ್, ಸೂಚನಾ ಫಲಕಗಳು ವ್ಯವಸ್ಥಿತವಾಗಿರಲಿ ಎಂದರು.

ಸಭೆಯಲ್ಲಿ ಜಿ.ಪಂ ಉಪಕಾರ್ಯದರ್ಶಿ ಕೃಷ್ಣಂ ರಾಜು, ಅಡಿಷನಲ್ ಎಸ್ಪಿ ಬಾಬು, ಏಳು ಹಳ್ಳಿಗಳ ಯಜಮಾನರು, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು

andolana

Recent Posts

ಮೇ.3ರಂದು ನಡೆದಿದ್ದ ನೀಟ್‌ ಪರೀಕ್ಷೆ ರದ್ದು

ನವದೆಹಲಿ: ಮೇ.3ರಂದು ನಡೆದಿದ್ದ ನೀಟ್‌ ಯುಜಿ ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ರದ್ದುಗೊಳಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಎನ್‌ಜಿಎ…

30 mins ago

ಅಸ್ಸಾಂ ಸಿಎಂ ಆಗಿ ಹಿಮಂತ ಬಿಸ್ವಾ ಶರ್ಮಾ ಪ್ರಮಾಣವಚನ ಸ್ವೀಕಾರ

ಗುವಾಹಟಿ: ಹಿಮಂತ ಬಿಸ್ವಾ ಶರ್ಮಾ ಅವರು ಸತತ ಎರಡನೇ ಬಾರಿಗೆ ಅಸ್ಸಾಂನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಗುವಾಹಟಿಯ ಖಾನಾಪಾರಾದಲ್ಲಿರುವ ಪಶುವೈದ್ಯಕೀಯ…

2 hours ago

SIR ಮೂಲಕ ರಾಜ್ಯದ 86 ಲಕ್ಷ ಮತದಾರರ ಹಕ್ಕಿಗೆ ಕನ್ನ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಆರೋಪ

ಮೈಸೂರು: SIR ಮೂಲಕ ರಾಜ್ಯದ 86 ಲಕ್ಷ ಮತದಾರರ ಹಕ್ಕಿಗೆ ಕನ್ನ ಹಾಕುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಕೆಪಿಸಿಸಿ ವಕ್ತಾರ…

2 hours ago

ತಮಿಳುನಾಡು ಸ್ಪೀಕರ್‌ ಆಗಿ ಶಾಸಕ ಪ್ರಭಾಕರ್‌ ಅವಿರೋಧ ಆಯ್ಕೆ

ಚೆನ್ನೈ: ತಮಿಳುನಾಡು ವಿಧಾನಸಭಾ ಸ್ಪೀಕರ್‌ ಆಗಿ ಶಾಸಕ ಜೆಸಿಡಿ ಪ್ರಭಾಕರ್‌ ಅವರಿಂದು ಸರ್ವಾನುಮತದಿಂದ ಆಯ್ಕೆಯಾದರು. ಸಿಎಂ ವಿಜಯ್‌ ಅವರು ಪ್ರಭಾಕರ್‌…

4 hours ago

90 ಅಡಿಗೆ ಕುಸಿದ ಕೆಆರ್‌ಎಸ್‌ ನೀರಿನ ಮಟ್ಟ

ಮಂಡ್ಯ: ರಾಜ್ಯದಲ್ಲಿ ತಾಪಮಾನ ಏರಿಕೆಯಾಗುತ್ತಿದ್ದಂತೆ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 90 ಅಡಿಗೆ ಕುಸಿದಿದೆ. 124.80 ಅಡಿ ಗರಿಷ್ಠ ಮಟ್ಟವನ್ನು…

4 hours ago

ವಿಜಯ್ ಸಿಎಂ ಆದ ಹಿನ್ನೆಲೆ: ಗೋಪಿನಾಥಂನಲ್ಲಿ ಅಭಿಮಾನಿಗಳಿಂದ ಸಂಭ್ರಮಾಚರಣೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ…

4 hours ago