ಚಿಕ್ಕಬಳ್ಳಾಪುರ : ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಚ್ 27ರಂದು ಸರಕಾರಿ ವೈದ್ಯಕೀಯ ಕಾಲೇಜು ಉದ್ಘಾಟನೆಗೆ ಆಗಮಿಸುತ್ತಿದ್ದಾರೆ. ಜೊತೆಗೆ ಕೇಂದ್ರ ಆರೋಗ್ಯ ಸಚಿವರು, ಕಂದಾಯ ಸಚಿವರು ಮತ್ತು ವಸತಿ ಸಚಿವರು ಭಾಗಿಯಾಗಲಿದ್ದಾರೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.ತಾಲೂಕಿನ ಗುಂತಪ್ಪನಹಳ್ಳಿಯಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮುಖಂಡ ವೆಂಕಟೇಶ್ ಮತ್ತು ಬೆಂಬಲಿಗರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಸುಧಾಕರ್, ಕೋಲಾರ, ತುಮಕೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಈ ವರೆಗೂ ಸರಕಾರಿ ವೈದ್ಯಕೀಯ ಕಾಲೇಜುಗಳು ಇಲ್ಲ. ಆದರೆ 16 ವರ್ಷಗಳ ಹಿಂದೆ ರಚನೆಯಾದ ಚಿಕ್ಕಬಳ್ಳಾಪುರ ಮತ್ತು ರಾಮನಗರ ಜಿಲ್ಲೆಗಳಿಗೆ ಬಿಜೆಪಿ ಸರಕಾರ ವೈದ್ಯಕೀಯ ಕಾಲೇಜು ಮಂಜೂರು ಮಾಡಿದೆ ಎಂದು ಹೇಳಿದರು.
ಮೀಸಲಾತಿ ಹೆಚ್ಚಳ : ಬಿಜೆಪಿ ಸರಕಾರದ ಅವಧಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದವರ ಮೀಸಲಾತಿ ಹೆಚ್ಚಳ ಮಾಡಿದೆ. ಊರಿನ ಕ್ಷೇಮ ಮತ್ತು ಅಭಿವೃದ್ಧಿಗಾಗಿ ಎಲ್ಲರೂ ಒಂದಾಗಬೇಕು. ಹಳೇ ಬೇರು, ಹೊಸ ಚಿಗುರು ಎಂಬಂತೆ ಹಳಬರು, ಹೊಸಬರು ಎಂಬ ಯಾವುದೇ ಬೇಧ ಭಾರತೀಯ ಜನತಾ ಪಕ್ಷದಲ್ಲಿಲ್ಲ. ಇದಕ್ಕೆ ಸಂಬಂಧಿಸಿದ ಒಂದು ಸಭೆಯನ್ನು ಕರೆದು ಎಲ್ಲರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಲಾಗುವುದು. ಇದರಿಂದ ಈ ಬಾರಿಯ ಕರ್ನಾಟಕ ವಿಧಾನ ಸಭಾ ಚುನಾವಣೆಯಲ್ಲಿ ಹೆಚ್ಚು ಮತ ಪಡೆಯಲು ಸಹಕಾರಿಯಾಗಲಿದೆ ಎಂದು ಡಾ.ಕೆ.ಸುಧಾಕರ್ ಮಾಹಿತಿ ಹಂಚಿಕೊಂಡಿದ್ದಾರೆ.
ಉಚಿತ ನಿವೇಶನ ಹಕ್ಕುಪತ್ರ : ಬಡವರಿಗೆ ನಿವೇಶನಗಳನ್ನು ಹಂಚಿಕೆ ಮಾಡಲು ಕ್ರಮಕೈಗೊಳ್ಳಲಾಗಿದೆ. ಆದರೆ ಕೆಲವರು ಜಮೀನು ಎಲ್ಲಿ ಗುರುತಿಸಲಾಗಿದೆ ಎಂದು ಕೇಳುತ್ತಿದ್ದಾರೆ. ಮಾರ್ಚ್ 27ರಂದು ಹನ್ನೆರಡೂವರೆ ಸಾವಿರ ಮಂದಿಗೆ ಉಚಿತ ನಿವೇಶನ ಹಕ್ಕುಪತ್ರ ವಿತರಿಸಲಾಗುತ್ತಿದೆ. ಚಕ್ಕುಬಂದಿ ಸಮೇತ ಹಕ್ಕುಪತ್ರಗಳನ್ನು ವಿತರಿಸಲಾಗುತ್ತದೆ ಪರಿಶೀಲಿಸಿಕೊಳ್ಳಲಿ ಎಂದು ವಿರೋಧಿಸಿದವರಿಗೆ ಟಾಂಗ್ ಕೊಟ್ಟಿದ್ದಾರೆ.
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…
ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…